AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಒಡಕಿಲ್ಲ, ಬಿಜೆಪಿಯದ್ದು ಸುಳ್ಳು ಆರೋಪ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿ ಕಂಗಾಲು: ರಣದೀಪ್ ಸುರ್ಜೆವಾಲ

Randeep Singh Surjewala in Bengaluru: ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಒಡಕಿಲ್ಲ. ಇದೆಲ್ಲವೂ ಕೆಲ ಮಾಧ್ಯಮಗಳ ಸೃಷ್ಟಿ ಮಾತ್ರ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಸರ್ವಸದಸ್ಯರ ಸಭೆಯ ವೇಳೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯಲ್ಲೇ ಹಲವು ಬಣಗಳಿವೆ. ವಿಜಯೇಂದ್ರ, ಯತ್ನಾಳ, ಅಶೋಕ್, ಅಶ್ವತ್ಥನಾರಾಯಣ ಅವರ ಬಣಗಳ ನಡುವೆ ಜಗಳ ಇದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್​ನಲ್ಲಿ ಒಡಕಿಲ್ಲ, ಬಿಜೆಪಿಯದ್ದು ಸುಳ್ಳು ಆರೋಪ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿ ಕಂಗಾಲು: ರಣದೀಪ್ ಸುರ್ಜೆವಾಲ
ರಣದೀಪ್ ಸುರ್ಜೆವಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 13, 2025 | 1:27 PM

Share

ಬೆಂಗಳೂರು, ಜನವರಿ 13: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಈ ಆರೋಪ ಮಾಡುತ್ತಿದ್ದಾರೆ. ಕೆಲ ಮಾಧ್ಯಮಗಳ ಗುಂಪಿನಿಂದ ಈ ಗೊಂದಲ ಸೃಷ್ಟಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಇಂದು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 58 ಸಾವಿರ ಕೋಟಿ ರೂಗಳ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಇವುಗಳ ಲಾಭ ಜನತೆಗೆ ಸಿಗುತ್ತಿದೆ. ಇವು ದೇಶದ ದೊಡ್ಡ ಯೋಜನೆಗಳೆನಿಸಿವೆ. ಇವುಗಳ ಯಶಸ್ಸಿನಿಂದ ಬಿಜೆಪಿ ಹತಾಶೆಗೊಂಡಿದೆ. ಇದನ್ನು ಮರೆಮಾಚಲು ಕಾಂಗ್ರೆಸ್​ನಲ್ಲಿ ಇಲ್ಲದ ಒಡಕನ್ನು ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತಿಂಥಿಣಿ ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

ಕರ್ನಾಟಕ ಘಟಕದ ಬಿಜೆಪಿಯಲ್ಲಿ ಬೇರೆ ಬೇರೆ ಬಣಗಳಿವೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬಣ ಇದೆ. ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳರದ್ದು ಬಣ ಇದೆ. ಮತ್ತೊಂದೆಡೆ ಆರ್ ಅಶೋಕ್ ಅವರ ಬಣ ಇದೆ. ಮಗದೊಂದೆಡೆ ಅಶ್ವತ್ಥ ನಾರಾಯಣ ಅವರ ಬಣ ಇದೆ ಎಂದು ಬಿಜೆಪಿ ವಿರುದ್ಧ ಸುರ್ಜೆವಾಲ ವ್ಯಂಗ್ಯ ಮಾಡಿದ್ದಾರೆ.

ವಿಜಯೇಂದ್ರ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸುತ್ತಿದ್ದಾರೆ. ಯತ್ನಾಳರಿಗೆ ರಮೇಶ್ ಜಾರಕಿಹೊಳಿ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ಆಂತರಿಕ ಕಿತ್ತಾಟಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡುತ್ತಿದೆ. ಈ ಎಲ್ಲಾ ಹತಾಶೆಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ವಿರುದ್ಧ ಬಿಜೆಪಿ ಇಲ್ಲದ ಆರೋಪ ಮಾಡುತ್ತಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಒಡಕಿಲ್ಲ. ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್​ನ ಉಸ್ತುವಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ದಲಿತ ನಾಯಕರು ಊಟ ಮಾಡುವುದಕ್ಕೂ ನಿರ್ಬಂಧ ಹೇರಿದರೆ ಹೇಗೆ ಸ್ವಾಮಿ? ಪ್ರಿಯಾಂಕ್ ಖರ್ಗೆ

ರಣದೀಪ್ ಸಿಂಗ್ ಸುರ್ಜೆವಾಲ ಇವತ್ತು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಪಿಸಿಸಿ ಸರ್ವಸದಸ್ಯರ ಸಭೆಯೂ ಸೇರಿದಂತೆ ಇವತ್ತು ಮೂರು ಸಭೆಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಆ ಸಭೆಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ