AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪಾಕಟಾಕ್ಷ: ಪ್ರಭಾವಿ ಸ್ವಾಮೀಜಿ ಶಾಮೀಲು

ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ಬಂಧಿಸಲಾಗಿದೆ. ಡಿಆರ್​​ ಐ ತನಿಖೆಯಿಂದ ಪ್ರಭಾವಿ ಸ್ವಾಮೀಜಿಯ ಪಾತ್ರ ಬಹಿರಂಗವಾಗಿದೆ. ಸ್ವಾಮೀಜಿ ದುಬೈನಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಹೈಕೋರ್ಟ್ ಮೆಟ್ಟಿಲೇರಿ ಬಂಧನದಿಂದ ರಿಲೀಫ್ ಪಡೆದಿದ್ದಾರೆ. ತನಿಖೆಯಲ್ಲಿ ಹಲವು ಅಂಶಗಳು ಬಯಲಾಗುತ್ತಿವೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪಾಕಟಾಕ್ಷ: ಪ್ರಭಾವಿ ಸ್ವಾಮೀಜಿ ಶಾಮೀಲು
ರನ್ಯಾ ರಾವ್​
Follow us
Shivaprasad
| Updated By: ವಿವೇಕ ಬಿರಾದಾರ

Updated on:Mar 12, 2025 | 7:59 AM

ಬೆಂಗಳೂರು, ಮಾರ್ಚ್​ 12: ಚಿನ್ನ ಕಳ್ಳಸಾಗಾಣಿಕೆ (Gold Smuggling) ಆರೋಪದಲ್ಲಿ ನಟಿ ರನ್ಯಾ ರಾವ್​ (Rany Rao) ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್​ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್​ಐ ಅಧಿಕಾರಿಗಳಿಗೆ ಒಂದೊಂದೆ ಅಸಲಿಯತ್ತು ತಿಳಿಯುತ್ತಿದೆ. ನಟಿ ರನ್ಯಾ ರಾವ್ ಚಿನ್ನದ ಬಿಸ್ಕೇಟ್ ಕಳ್ಳಸಾಗಣಿಕೆ ಹಿಂದೆ ಪ್ರಭಾವಿ ಸ್ವಾಮೀಜಿ (Swamiji) ಕೃಪಾಕಟಾಕ್ಷವೂ ಇದೆ ಎಂಬ ಅಂಶ ಟಿವಿ9ಗೆ ಡಿಆರ್​ಐ ಮೂಲಗಳಿಂದ ಮಾಹಿತಿ ದೊರೆತಿದೆ.

ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈ‌ನಲ್ಲಿ ಆಫೀಸ್​ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್​ನಲ್ಲಿ ಸ್ವಾಮೀಜಿ ಕ್ರಿಫ್ಟೋ ಕರೆನ್ಸಿ, ಹಣ ವಿನಿಮಯ ವ್ಯವಹಾರ ಮಾಡುತ್ತಿದ್ದರು. ಸ್ವಾಮೀಜಿ ರಾಜಕೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿನಲ್ಲಿನ ಸ್ವಾಮೀಜಿ ಮನೆ ಮೇಲೆ ಡಿಆರ್​ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.

ರನ್ಯಾ ಪತಿಗೆ ಹೈಕೋರ್ಟ್ ರಿಲೀಫ್

ಚಿನ್ನ ಕಳ್ಳಸಾಗಣೆ ವೇಳೆ ನಟಿ ರನ್ಯಾ ರಾವ್ ಬಂಧನ ಆಕೆಯ ಪತಿ ಜತಿನ್ ಹುಕ್ಕೇರಿಗೂ ಸಂಕಷ್ಟ ತಂದೊಡ್ಡಿತ್ತು. ಡಿಆರ್‌ಐ ಅಧಿಕಾರಿಗಳು ಬಂಧಿಸಬಹುದೆಂಬ ಭೀತಿಯಿಂದ ರನ್ಯಾ ರಾವ್ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ, ಹೈಕೋರ್ಟ್​ ಜತಿನ್​ ಹುಕ್ಕೇರಿಗೆ ಬಿಗ್​ ರಿಲೀಫ್​ ನೀಡಿದೆ.

ಇದನ್ನೂ ಓದಿ
Image
ಪತಿ ನೀಡಿದ ಸುಳಿವಿನಿಂದ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ?
Image
ಸ್ಮಗ್ಲಿಂಗ್ ಹಿಂದಿರೋ ಸಚಿವರಾರು? ಸದನದಲ್ಲೂ ಸದ್ದು ಮಾಡಿದ ರನ್ಯಾ ರಾವ್ ಕೇಸ್
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ
Image
ರನ್ಯಾ ರಾವ್ ಬೆನ್ನಲ್ಲೇ ಚಿನ್ನ ಸಾಗಾಟ ಮಾಡ್ತಿದ್ದ ಮತ್ತೋರ್ವ ಸಿಕ್ಕಿಬಿದ್ದ

“ಚಿನ್ನ ಕಳ್ಳಸಾಗಣೆ ಪ್ರಕರಣ ರನ್ಯಾ ರಾವ್ ಪತಿ ಜತಿನ್​ ಹುಕ್ಕೇರಿಗೂ ಸಂಕಷ್ಟ ತಂದೊಡ್ಡಿತ್ತು. ವಿಚಾರಣೆಗೆ ಸಹಕರಿಸಿದರೂ ಡಿಆರ್​ಐ ಅಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆಂದು ಜತಿನ್ ಹುಕ್ಕೇರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 3 ರಂದು ರನ್ಯಾ ಬಂಧನದ ಬಗ್ಗೆಯೂ ತಮಗೆ ತಿಳಿಸದೇ ಮನೆ ಮೇಲೆ ದಾಳಿ ಮಾಡಿ ಶೋಧನೆ ನಡೆಸಿದ್ದಾರೆ. ಮನೆಯಲ್ಲಿ ಮಧ್ಯರಾತ್ರಿ 12 ಗಂಟೆವರೆಗೂ ವಿಚಾರಣೆ ನಡೆಸಿದ್ದಲ್ಲದೇ, ಮರುದಿನವೂ ತನಿಖೆ ಮುಂದುವರಿಸಿ 15 ಗಂಟೆ ವಿಚಾರಣೆ ನಡೆಸಿದ್ದಾರೆ.

ಡಿಆರ್‌ಐ ಕಚೇರಿಗೆ ಕರೆಸಿಕೊಂಡು ರಾತ್ರಿವರೆಗೂ ತನಿಖೆ ಮುಂದುವರಿಸಿದ್ದರು. ಮಾರ್ಚ್ 6 ರಂದು ಫೋನ್ ಕರೆ ಮೂಲಕ ಕರೆಸಿಕೊಂಡು ತನಿಖೆ ನಡೆಸಿದರು. ಮಾರ್ಚ್ 9 ರಂದು ಪೋಷಕರ ಕೋರಮಂಗಲದ ನಿವಾಸದಿಂದ ನನ್ನನ್ನು (ಜತಿನ್ ಹುಕ್ಕೇರಿ) ಕರೆತಂದು ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಕಿರುಕುಳ ನೀಡಿದ್ದಾರೆಂದು ಜತಿನ್ ಹುಕ್ಕೇರಿ ಅರ್ಜಿ ಸಲ್ಲಿಸಿದ್ದರು.

ರನ್ಯಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ: ಪತ್ನಿ ರನ್ಯಾ ರಾವ್ ಮೇಲಿನ ಆರೋಪಕ್ಕೂ ಜತಿನ್​ಗೂ ಸಂಬಂಧವಿಲ್ಲ. ಡಿಆರ್​ಐ ಅಧಿಕಾರಿಗಳು ಸಮನ್ಸ್ ನೀಡಿದಾಗ ತನಿಖೆಗೆ ಸಹಕರಿಸಿದ್ದಾರೆ. ಎರಡನೇ ಬಾರಿ ಯಾವುದೇ ಸಮನ್ಸ್ ನೀಡದೇ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಲ್ಲದೇ ಅವರಿಗೆ ಬೇಕಾದಂತೆ ಹೇಳಿಕೆ ನೀಡುವಂತೆ ಕಿರುಕುಳ ನೀಡಿದ್ದಾರೆ. ಸಮನ್ಸ್​ಗೆ ಹಾಜರಾದಾಗ ತನಿಖೆ ಹೇಗೆ ನಡೆಸಬೇಕೆಂಬ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳಿವೆ. ಇದನ್ನು ಪಾಲಿಸದೇ ಜತಿನ್​ರನ್ನು ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಡಿಆರ್‌ಐ ಅಧಿಕಾರಿಗಳು ಜತಿನ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ರಕ್ಷಣೆ ನೀಡಬೇಕು ಎಂದು ವಾದಿಸಿದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಪೀಠ ಕಾನೂನಿನ ಪ್ರಕ್ರಿಯೆ ಪಾಲಿಸದೇ ಬಂಧಿಸದಂತೆ ಆದೇಶ ನೀಡಿದೆ. ಈ ಮೂಲಕ ರನ್ಯಾ ರಾವ್ ಪತಿಗೆ ಜತಿನ್​ಗೆ ರಿಲೀಫ್ ನೀಡಿದೆ.

ಇದನ್ನೂ ಓದಿ: ರನ್ಯಾ ರಾವ್ ಪ್ರಕರಣ: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ

ದಾಂಪತ್ಯದಲ್ಲಿ ಬಿರುಕು

ಇನ್ನು, ರನ್ಯಾ ರಾವ್ ಮತ್ತು ಪತಿ ಜತಿನ್ ಹುಕ್ಕೇರಿ ದಾಂಪತ್ಯ ಸರಿಯಾಗಿಲ್ಲ. 2024ರ ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದಾರೆ. ಅಕ್ಟೋಬರ್ 23, ರನ್ಯಾ, ಜತಿನ್ ನಿಶ್ಚಿತಾರ್ಥವಾಗಿದೆ. ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Wed, 12 March 25

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್