AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರನ್ಯಾ ರಾವ್​ಗೆ ಬಿಗ್ ಶಾಕ್: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ಧತೆ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ನಟಿ ರನ್ಯಾಗೆ ಇದೀಗ ಮತ್ತೊಂದು ಬಿಗ್​ ಶಾಕ್​ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ ರನ್ಯಾಳಿಂದ ವಿಚ್ಛೇದನ ಪಡೆಯಲು ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮದುವೆ ಬಳಿಕ ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿರುವ ಜತಿನ್, ರನ್ಯಾಳಿಂದ ಅಂತರ ಕಾಯ್ದುಕೊಂಡಿದ್ದಾರೆ.

ನಟಿ ರನ್ಯಾ ರಾವ್​ಗೆ ಬಿಗ್ ಶಾಕ್: ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ಧತೆ
Ranya Rao Husband Jatin Hukkeri
ರಾಚಪ್ಪಾಜಿ ನಾಯ್ಕ್
| Edited By: |

Updated on:Apr 02, 2025 | 12:20 PM

Share

ಬೆಂಗಳೂರು, ಏಪ್ರಿಲ್​ 02: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ (Gold Smugling) ಜೈಲು ಪಾಲಾಗಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ವಜಾ ಆದ ಟೆನ್ಷನ್​ನಲ್ಲಿರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಆ ಮೂಲಕ ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಜತಿನ್ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.

2024 ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ, ಜತಿನ್​ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು. 2024 ಅಕ್ಟೋಬರ್ 23ರಂದು ರನ್ಯಾ, ಜತಿನ್ ಎಂಗೇಜ್ ಮೆಂಟ್ ಆಗಿತ್ತು. 2024 ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆ ಕೂಡ ಆಗಿತ್ತು. ಬಳಿಕ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.

ಇದನ್ನೂ ಓದಿ: ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್

ಇದನ್ನೂ ಓದಿ
Image
ರನ್ಯಾ​​ ಗೋಲ್ಡ್ ಸ್ಮಂಗ್ಲಿಂಗ್​ ಕೇಸ್​: 2ನೇ ಆರೋಪಿ ತರುಣ್​ಗೆ ಬಿಗ್ ಶಾಕ್​!
Image
ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ
Image
ರನ್ಯಾ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಮದುವೆಯಾದ ಒಂದೇ ತಿಂಗಳಿಗೆ ರನ್ಯಾ, ಜತಿನ್ ನಡುವೆ ಮನಸ್ತಾಪ ಶುರುವಾಗಿದ್ದು, ಸಂಬಂಧದಲ್ಲಿ ಪಾರದರ್ಶಕತೆ ಇಲ್ಲ, ಮಾತುಕತೆಯೂ ಇರಲಿಲ್ಲವೆಂದು ಪತಿ ಜತಿನ್ ಹುಕ್ಕೇರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಸಂಬಂಧಿಕರು ಸಂಧಾನಕ್ಕೆ ಪದೇ ಪದೇ ಯತ್ನಿಸಿದರೂ ಸಂಬಂಧ ಸರಿಹೋಗಿರಲಿಲ್ಲ.

ಗಂಡನ ಮಾತಿಗೆ ಕ್ಯಾರೆ ಎನ್ನದ ರನ್ಯಾ

ಮದುವೆಯಾದ ಎರಡೇ ತಿಂಗಳಿಗೆ ರನ್ಯಾ ದುಬೈಗೆ ಓಡಾಟ ನಡೆಸಿದ್ದರು. ಪದೇ ಪದೆ ರನ್ಯಾ ದುಬೈ ಟ್ರಿಪ್‌ಗೆ ಹೋಗುತ್ತಿದ್ದು, ಪತಿಗೆ ಅನುಮಾನ ಬಂದು ಜಗಳವಾಗಿದೆ. ಈ ಜಗಳ ಡಿವೋರ್ಸ್ ಹಂತಕ್ಕೂ ತಲುಪಿತ್ತು. ಗಂಡನ ಜೊತೆ ಜಗಳವಾಡಿದರೂ ಕ್ಯಾರೆ ಎನ್ನದ ರನ್ಯಾ, ತನ್ನ ಫ್ರೆಂಡ್ ಆಗಿದ್ದ ತರುಣ್ ಜೊತೆ ಸೇರಿ ಚಿನ್ನಾ ಸಾಗಾಟಕ್ಕೆ ಇಳಿದಿದ್ದರು. ದುಬೈನಿಂದ ಬೆಂಗಳೂರಿಗೆ ಗೋಲ್ಡ್​ ತರಿಸುತ್ತಿದ್ದೇ ತರುಣ್ ಅನ್ನೋ ಡಿಆರ್​ಐ ತನಿಖೆಯಲ್ಲಿ ಗೊತ್ತಾಗಿತ್ತು.

ಇನ್ನು ರನ್ಯಾರಾವ್ ಅರೆಸ್ಟ್ ಆದ ಮೇಲೆ ಪತಿ ಜತೀನ್ ಹುಕ್ಕೇರಿಯನ್ನೂ ಡಿಆರ್​ಐ ಅಧಿಕಾರಿಗಳು ವಿಚಾರಣೆ ಮಾಡಿದ್ದರು. ಇದರಿಂದ ಬಂಧನ ಭೀತಿಗೆ ಒಳಗಾಗಿದ್ದ ಜತೀನ್ ಹೈಕೋರ್ಟ್ ಮೆಟ್ಟಲೇರಿದ್ದರು.

ಇದನ್ನೂ ಓದಿ: ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣ: ಡಿಆರ್​​​ಐಗೆ ಸಿಕ್ಕ ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು

ಜತಿನ್ ಹುಕ್ಕೇರಿ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್​ಗೂ ಸಂಬಂಧವಿಲ್ಲ. ಮದುವೆಯಾದ ಒಂದೇ ತಿಂಗಳಿಗೆ ಇಬ್ಬರ ನಡುವೆ ಮನಸ್ತಾಪ ಇತ್ತು ಅಂತಾ ವಾದ ಮಾಡಿದ್ದರು. ಬಳಿಕ ಕೋರ್ಟ್ ಕಾನೂನು ಪ್ರಕ್ರಿಯೆಯಿಲ್ಲದೇ ಬಂಧಿಸುವಂತಿಲ್ಲವೆಂದು ಆದೇಶ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:53 am, Wed, 2 April 25

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್