AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ: ನನ್ನ ವಿರುದ್ಧ ದೂರು ಕೊಟ್ಟವರು ಯಾರು, SITಗೆ ಪ್ರಜ್ವಲ್​ ಮರು ಪ್ರಶ್ನೆ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಅತ್ಯಾಚಾರ ಆರೋಪದ ಮೇಲೆ ಪ್ರಜ್ವಲ್​ ರೇವಣ್ಣ ಅವರನ್ನು ಎಸ್​ಐಟಿ ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣ: ನನ್ನ ವಿರುದ್ಧ ದೂರು ಕೊಟ್ಟವರು ಯಾರು, SITಗೆ ಪ್ರಜ್ವಲ್​ ಮರು ಪ್ರಶ್ನೆ
ಸಂಸದ ಪ್ರಜ್ವಲ್ ರೇವಣ್ಣ
ವಿವೇಕ ಬಿರಾದಾರ
|

Updated on:Jun 01, 2024 | 12:02 PM

Share

ಬೆಂಗಳೂರು, ಜೂ.01: ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್​​ ರೇವಣ್ಣ (Prajwal Revanna) ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೆ, ಎಸ್​ಐಟಿ (SIT) ಅಧಿಕಾರಿಗಳಿಗೆ ಮರು ಪ್ರಶ್ನೆ ಹಾಕುತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ ವಿರುದ್ಧ ದೂರು ಕೊಟ್ಟವರು ಯಾರು ಎಂದು ಪ್ರಜ್ವಲ್​ ರೇವಣ್ಣ ಅವರು ಎಸ್​ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಮಾಡಿದರು.

ಎಸ್​ಐಟಿ: ಸಂತ್ರಸ್ತೆಯ ಫೋಟೊ ಮುಂದಿಟ್ಟು ಇವರು ಯಾರು ಗೊತ್ತಾ?

ಪ್ರಜ್ವಲ್​ ರೇವಣ್ಣ: ಈಕೆ ಯಾರು ಎನ್ನುವುದೇ ನನಗೆ ಗೊತ್ತಿಲ್ಲ. ಇವರನ್ನು ನಾನು ನೋಡಿಯೇ ಇಲ್ಲ. ನಾನು ಬೆಂಗಳೂರು, ಹಾಸನ, ದೆಹಲಿಯಲ್ಲಿರುತ್ತೇನೆ. ನನಗೆ ಇವರು ಯಾರು ಅನ್ನೊದು ಗೊತ್ತಿಲ್ಲ. ಇವರು ನನ್ನ ಬಗ್ಗೆ ಏನೆಂದು ದೂರು ಕೊಟ್ಟಿದ್ದಾರೆ ಎಂದು ಮರು ಪ್ರಶ್ನಿಸಿದರು.

ಎಸ್​ಐಟಿ: ಸಂತ್ರಸ್ತೆ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಹೇಳಿದ ಅಧಿಕಾರಿಗಳು

ಪ್ರಜ್ವಲ್​: ಹೌದಾ, ಅವರಿಗೆ ಹಾಗೆ ಆಗಿದೆಯಂತಾ. ಈ ವಿಚಾರಗಳು ನನಗೇನು ಗೊತ್ತಿಲ್ಲ. ಅವರಿಗೆಲ್ಲ ನಾನು ಯಾಕೆ ಹಾಗೆ ಮಾಡಲು ಹೊಗಲಿ. ನನಗೆ ಅವರು ಯಾರು ಎನ್ನುವುದೇ ಗೊತ್ತಿಲ್ಲ. ನಾಲ್ಕು ವರ್ಷದ ಹಿಂದೆ ನಡೆದಿದೆ ಅಂತಾರೆ. ನನಗೆ ಅವರು ಯಾರು ಅನ್ನೊದು ಗೊತ್ತಿಲ್ಲ. ಯಾಕೆ ಆಗ ಅವರು ದೂರು ಕೊಟ್ಟಿರಲಿಲ್ಲ. ದೂರು ಕೊಡದೇ ಇಲ್ಲಿವರೆಗೂ ಏನು ಮಾಡುತಿದ್ದರಂತೆ. ನಾನು ಯಾರ ಜೊತೆಯೂ ಮಾತನಾಡಲ್ಲ. ಇವರು ಯಾರೆಂಬುದೇ ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

ಇದೆಲ್ಲದರ ಹಿಂದೆ ಕಾರ್ತಿಕನ ಕೆಲಸವಿದೆ. ಅವನನ್ನು ಕರೆದುಕೊಂಡು ಬಂದು ವಿಚಾರಣೆ ಮಾಡಿ. ಆಗ ಇದಕ್ಕೆಲ್ಲ ಸರಿಯಾದ ಉತ್ತರ ಸಿಗತ್ತೆ. ಎಷ್ಟು ದುಡ್ಡು ಕೊಟ್ಟು ಇವರನ್ನು ಕರೆತಂದಿದ್ದಾನೆ ಅಂತ. ಆಗ ಎಲ್ಲ ಉತ್ತರ ನಿಮಗೆ ಸಿಗತ್ತೆ ಎಂದು ಪ್ರಜ್ವಲ್​ ಹೇಳಿದರು.

ಪ್ರಜ್ವಲ್ ಮೊಬೈಲ್ ಬಗ್ಗೆ ಪ್ರಶ್ನೆ ಕೇಳಿದ ಎಸ್​ಐಟಿ

ನಾನು ಬಳಸುವ ಮೊಬೈಲ್ ನನ್ನ ಬಳಿ ಇತ್ತು. ಅದು ಈಗ ನಿಮ್ಮ ಬಳಿ ಇದೆ. ಅದನ್ನು ಬಿಟ್ಟು ಬೇರೆ ಮೊಬೈಲ್ ಸಹ ಇಲ್ಲ. ಈ ವೇಳೆ ಮೊಬೈಲ್ ಸಂಖ್ಯೆ ಆಧರಿಸಿ ಆ ಫೋನ್ ಎಲ್ಲಿದೆ ಎಂದ ಎಸ್​ಐಟಿ. ನನಗೆ ಗೊತ್ತಿಲ್ಲ ಬಹುಶಃ ಅದು ಕಳೆದು ಹೊಗಿರಬೇಕು. ಆ ಮೊಬೈಲ್ ನಾನು ಬಳಸುತ್ತಲೇ ಇರಲಿಲ್ಲ. ನನ್ನ ಮೊಬೈಲ್​ಗಳು ಪಿಎ ಬಳಿ ಇರುತ್ತವೆ. ಅವರೇನೊ ಕಳೆದು ಹೊಗಿದೆ ಎನ್ನುತಿದ್ದರು. ಕಳೆದ ವರ್ಷ ಅದರ ಬಗ್ಗೆ ದೂರು ಸಹ ದಾಖಲಾಗಿರಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Sat, 1 June 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು