AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ: ನನ್ನ ವಿರುದ್ಧ ದೂರು ಕೊಟ್ಟವರು ಯಾರು, SITಗೆ ಪ್ರಜ್ವಲ್​ ಮರು ಪ್ರಶ್ನೆ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಅತ್ಯಾಚಾರ ಆರೋಪದ ಮೇಲೆ ಪ್ರಜ್ವಲ್​ ರೇವಣ್ಣ ಅವರನ್ನು ಎಸ್​ಐಟಿ ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣ: ನನ್ನ ವಿರುದ್ಧ ದೂರು ಕೊಟ್ಟವರು ಯಾರು, SITಗೆ ಪ್ರಜ್ವಲ್​ ಮರು ಪ್ರಶ್ನೆ
ಸಂಸದ ಪ್ರಜ್ವಲ್ ರೇವಣ್ಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 01, 2024 | 12:02 PM

Share

ಬೆಂಗಳೂರು, ಜೂ.01: ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್​​ ರೇವಣ್ಣ (Prajwal Revanna) ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೆ, ಎಸ್​ಐಟಿ (SIT) ಅಧಿಕಾರಿಗಳಿಗೆ ಮರು ಪ್ರಶ್ನೆ ಹಾಕುತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ ವಿರುದ್ಧ ದೂರು ಕೊಟ್ಟವರು ಯಾರು ಎಂದು ಪ್ರಜ್ವಲ್​ ರೇವಣ್ಣ ಅವರು ಎಸ್​ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಮಾಡಿದರು.

ಎಸ್​ಐಟಿ: ಸಂತ್ರಸ್ತೆಯ ಫೋಟೊ ಮುಂದಿಟ್ಟು ಇವರು ಯಾರು ಗೊತ್ತಾ?

ಪ್ರಜ್ವಲ್​ ರೇವಣ್ಣ: ಈಕೆ ಯಾರು ಎನ್ನುವುದೇ ನನಗೆ ಗೊತ್ತಿಲ್ಲ. ಇವರನ್ನು ನಾನು ನೋಡಿಯೇ ಇಲ್ಲ. ನಾನು ಬೆಂಗಳೂರು, ಹಾಸನ, ದೆಹಲಿಯಲ್ಲಿರುತ್ತೇನೆ. ನನಗೆ ಇವರು ಯಾರು ಅನ್ನೊದು ಗೊತ್ತಿಲ್ಲ. ಇವರು ನನ್ನ ಬಗ್ಗೆ ಏನೆಂದು ದೂರು ಕೊಟ್ಟಿದ್ದಾರೆ ಎಂದು ಮರು ಪ್ರಶ್ನಿಸಿದರು.

ಎಸ್​ಐಟಿ: ಸಂತ್ರಸ್ತೆ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಹೇಳಿದ ಅಧಿಕಾರಿಗಳು

ಪ್ರಜ್ವಲ್​: ಹೌದಾ, ಅವರಿಗೆ ಹಾಗೆ ಆಗಿದೆಯಂತಾ. ಈ ವಿಚಾರಗಳು ನನಗೇನು ಗೊತ್ತಿಲ್ಲ. ಅವರಿಗೆಲ್ಲ ನಾನು ಯಾಕೆ ಹಾಗೆ ಮಾಡಲು ಹೊಗಲಿ. ನನಗೆ ಅವರು ಯಾರು ಎನ್ನುವುದೇ ಗೊತ್ತಿಲ್ಲ. ನಾಲ್ಕು ವರ್ಷದ ಹಿಂದೆ ನಡೆದಿದೆ ಅಂತಾರೆ. ನನಗೆ ಅವರು ಯಾರು ಅನ್ನೊದು ಗೊತ್ತಿಲ್ಲ. ಯಾಕೆ ಆಗ ಅವರು ದೂರು ಕೊಟ್ಟಿರಲಿಲ್ಲ. ದೂರು ಕೊಡದೇ ಇಲ್ಲಿವರೆಗೂ ಏನು ಮಾಡುತಿದ್ದರಂತೆ. ನಾನು ಯಾರ ಜೊತೆಯೂ ಮಾತನಾಡಲ್ಲ. ಇವರು ಯಾರೆಂಬುದೇ ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್​ಐಟಿ ಹುಡುಕಾಟ

ಇದೆಲ್ಲದರ ಹಿಂದೆ ಕಾರ್ತಿಕನ ಕೆಲಸವಿದೆ. ಅವನನ್ನು ಕರೆದುಕೊಂಡು ಬಂದು ವಿಚಾರಣೆ ಮಾಡಿ. ಆಗ ಇದಕ್ಕೆಲ್ಲ ಸರಿಯಾದ ಉತ್ತರ ಸಿಗತ್ತೆ. ಎಷ್ಟು ದುಡ್ಡು ಕೊಟ್ಟು ಇವರನ್ನು ಕರೆತಂದಿದ್ದಾನೆ ಅಂತ. ಆಗ ಎಲ್ಲ ಉತ್ತರ ನಿಮಗೆ ಸಿಗತ್ತೆ ಎಂದು ಪ್ರಜ್ವಲ್​ ಹೇಳಿದರು.

ಪ್ರಜ್ವಲ್ ಮೊಬೈಲ್ ಬಗ್ಗೆ ಪ್ರಶ್ನೆ ಕೇಳಿದ ಎಸ್​ಐಟಿ

ನಾನು ಬಳಸುವ ಮೊಬೈಲ್ ನನ್ನ ಬಳಿ ಇತ್ತು. ಅದು ಈಗ ನಿಮ್ಮ ಬಳಿ ಇದೆ. ಅದನ್ನು ಬಿಟ್ಟು ಬೇರೆ ಮೊಬೈಲ್ ಸಹ ಇಲ್ಲ. ಈ ವೇಳೆ ಮೊಬೈಲ್ ಸಂಖ್ಯೆ ಆಧರಿಸಿ ಆ ಫೋನ್ ಎಲ್ಲಿದೆ ಎಂದ ಎಸ್​ಐಟಿ. ನನಗೆ ಗೊತ್ತಿಲ್ಲ ಬಹುಶಃ ಅದು ಕಳೆದು ಹೊಗಿರಬೇಕು. ಆ ಮೊಬೈಲ್ ನಾನು ಬಳಸುತ್ತಲೇ ಇರಲಿಲ್ಲ. ನನ್ನ ಮೊಬೈಲ್​ಗಳು ಪಿಎ ಬಳಿ ಇರುತ್ತವೆ. ಅವರೇನೊ ಕಳೆದು ಹೊಗಿದೆ ಎನ್ನುತಿದ್ದರು. ಕಳೆದ ವರ್ಷ ಅದರ ಬಗ್ಗೆ ದೂರು ಸಹ ದಾಖಲಾಗಿರಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:40 am, Sat, 1 June 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್