AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ ಕೇಸ್​: ವರದಿ ನೀಡುವಂತೆ ಪೊಲೀಸ್ ಕಮಿಷನರ್​ಗೆ ಮಾನವ ಹಕ್ಕುಗಳ ಆಯೋಗ ಡೆಡ್​ಲೈನ್

ಮಾನವ ಹಕ್ಕುಗಳ ಆಯೋಗವು ಹೆಬ್ಬಗೋಡಿಯ ರೇವ್ ಪಾರ್ಟಿ ಪ್ರಕರಣದಲ್ಲಿ ಸಿಸಿಬಿಯ ಪಾತ್ರದ ಕುರಿತು ವಿಚಾರಣೆ ನಡೆಸಲು ಆದೇಶಿಸಿದೆ. ಆರೋಪಿ ವಿಜಯ್ ಡೆನ್ನಿಸ್ ಅವರ ದೂರಿನ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸಿಸಿಬಿ ವಿರುದ್ಧ ಹಣ ಪಡೆದಿರುವ ಮತ್ತು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪಗಳಿವೆ. ಆಯೋಗವು ಪೊಲೀಸ್ ಕಮಿಷನರ್‌ಗೆ ನವೆಂಬರ್ 21 ರೊಳಗೆ ವರದಿ ಸಲ್ಲಿಸಲು ಸೂಚಿಸಿದೆ.

ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ ಕೇಸ್​: ವರದಿ ನೀಡುವಂತೆ ಪೊಲೀಸ್ ಕಮಿಷನರ್​ಗೆ ಮಾನವ ಹಕ್ಕುಗಳ ಆಯೋಗ ಡೆಡ್​ಲೈನ್
ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ ಕೇಸ್​: ವರದಿ ನೀಡುವಂತೆ ಪೊಲೀಸ್ ಕಮಿಷನರ್​ಗೆ ಮಾನವ ಹಕ್ಕುಗಳ ಆಯೋಗ ಡೆಡ್​ಲೈನ್
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on: Nov 11, 2024 | 10:02 PM

ಬೆಂಗಳೂರು, ನವೆಂಬರ್​ 11: ನಗರದ ಹೊರವಲಯ ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ ಕೇಸ್​ಗೆ (Rave party case) ಸಂಬಂಧಿಸಿದಂತೆ ಸಿಸಿಬಿ ಕುರಿತು ವಿಚಾರಣೆ ನಡೆಸುವಂತೆ ಮಾನವ ಹಕ್ಕುಗಳ ಆಯೋಗ ನ.7ರಂದು ಆದೇಶ ಹೊರಡಿಸಿತ್ತು. ಇದೀಗ ವಿಚಾರಣೆ ನಡೆಸಿ ಕ್ರಮಕೈಗೊಳ್ಳುವಂತೆ ಮತ್ತು ಕೈಗೊಂಡಕ್ರಮದ ಬಗ್ಗೆ ನ.21ರೊಳಗೆ ವರದಿ ನೀಡುವಂತೆ ಪೊಲೀಸ್ ಕಮಿಷನರ್​ಗೆ ಸೂಚನೆ ನೀಡಲಾಗಿದೆ.

ಪ್ರಕರಣದ ಆರೋಪಿ ವಿಜಯ್ ಡೆನ್ನಿಸ್ ಎಂಬಾತ ಮಾನವ ಹಕ್ಕುಗಳು ಆಯೋಗಕ್ಕೆ ದೂರು ನೀಡಿದ್ದರು. ದೂರಿನ ಹಿನ್ನಲೆ ಬೆಂಗಳೂರು ಪೊಲೀಸ್ ಕಮಿಷನರ್​ಗೆ ಮಾನವ ಹಕ್ಕುಗಳ ಆಯೋಗ ಸೂಚನೆ ಕೊಟ್ಟಿದೆ. ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ತಡರಾತ್ರಿವರೆಗೆ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ, ಐವರ ಬಂಧನ

ಈ ನಡುವೆ ಪ್ರತಿ ಆರೋಪಿಯ ಬಳಿ ಹತ್ತು ಲಕ್ಷ ಹಣ ಪಡೆದ ಗಂಭೀರ ಆರೋಪ ಸಿಸಿಬಿ ವಿರುದ್ಧ ಕೇಳಿ ಬಂದಿತ್ತು. ಆರೋಪಿಗಳ ವಿರುದ್ಧ ಸುಳ್ಳು ವೈದ್ಯಕೀಯ ಸಾಕ್ಷಗಳು ಕಲೆಹಾಕಿದ, ಅಷ್ಟೇ ಅಲ್ಲದೆ ಪ್ರಕರಣದಲ್ಲಿದ್ದ ಅಧಿಕಾರಿಗಳ ವಿರುದ್ಧ ಮಹಿಳಾ ಆರೋಪಿಗಳನ್ನ ಮಂಚಕ್ಕೆ ಕರೆದ ಆರೋಪ ಕೂಡ ಮಾಡಲಾಗಿತ್ತು. ಸದ್ಯ ಈ ಎಲ್ಲವನ್ನೂ ಉಲ್ಲೇಖಿಸಿ ಸಿಸಿಬಿ ವಿರುದ್ಧ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ.

ಐವರ ಬಂಧನ

ಮೇ 19ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸೂರು ಕೈಗಾರಿಕಾ ಪ್ರದೇಶದ ಗೋಪಾಲರೆಡ್ಡಿ ಫಾರ್ಮ್‌ ಹೌಸ್‌ನಲ್ಲಿ ಎಲ್. ವಾಸು ಎಂಬುವವರ ಹುಟ್ಟುಹಬ್ಬವನ್ನು ಆಯೋಜಿಸಿದ್ದರು. ಈ ವೇಳೆ ಸಿಸಿಬಿ ಪೊಲೀಸ್​ ದಾಳಿ ಮಾಡಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಪಾರ್ಟಿ ಆಯೋಜಕ ವಾಸು ಹಾಗೂ ಮೂವರು ಡ್ರಗ್ ಪೆಡ್ಲರ್ಸ್ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ಸಿಸಿಬಿ ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿತ್ತು. ದಾಳಿವೇಳೆ ಕೆಲವರು ಮಾದಕವಸ್ತುಗಳನ್ನ ಟಾಯ್ಲೆಟ್​ನಲ್ಲಿ ಬಿಸಾಕಿ ನೀರು ಹಾಕಿ ನಾಶ ಮಾಡಿದ್ದರು. ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?