AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB IPL Celebration Live: ಆರ್​ಸಿಬಿ ಆಟಗಾರರಿಗೆ ಅಭಿನಂದನೆ ಕಾರ್ಯಕ್ರಮ ಆರಂಭ: ನೇರ ಪ್ರಸಾರ ಇಲ್ಲಿ ನೋಡಿ

ಆರ್​ಸಿಬಿ ಸಂಭ್ರಮಾಚರಣೆ ಲೈವ್: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ವಿಧಾನಸೌಧದಲ್ಲಿ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದು, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ನೇರ ಪ್ರಸಾರ ಇಲ್ಲಿದೆ.

RCB IPL Celebration Live: ಆರ್​ಸಿಬಿ ಆಟಗಾರರಿಗೆ ಅಭಿನಂದನೆ ಕಾರ್ಯಕ್ರಮ ಆರಂಭ: ನೇರ ಪ್ರಸಾರ ಇಲ್ಲಿ ನೋಡಿ
ಆರ್​ಸಿಬಿ ಸಂಭ್ರಮಾಚರಣೆ, ಬೆಂಗಳೂರಿನಲ್ಲಿ ಆಟಗಾರರಿಗೆ ಅಭಿನಂದನೆ
ಗಣಪತಿ ಶರ್ಮಾ
| Edited By: |

Updated on:Jun 04, 2025 | 5:06 PM

Share

ಬೆಂಗಳೂರು, ಜೂನ್ 4: ಕೊನೆಗೂ ಐಪಿಎಲ್ (IPL) ಕಪ್ ಜಯಿಸಿ ತವರಿಗೆ ಮರಳಿರುವ ಆರ್​ಸಿಬಿ (RCB) ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ (Bengaluru) ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ದೊರೆತಿದೆ. ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಹೆಚ್​ಎಎಲ್​ಗೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿ ನೋಡಬಹುದಾಗಿದೆ.

ಆರ್​ಸಿಬಿ ಸಂಭ್ರಮಾಚರಣೆ, ಆಟಗಾರರಿಗೆ ಅಭಿನಂದನೆ ಲೈವ್ ಇಲ್ಲಿ ನೋಡಿ

ಅಹಮದಾಬಾದ್​​ನಿಂದ ಬೆಂಗಳೂರಿಗೆ ಬರುವ ಆರ್​ಸಿಬಿ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆದೊಯ್ಯಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಭದ್ರತೆಯ ದೃಷ್ಟಿಯಿಂದ ಅದಕ್ಕೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ ಜಿ. ಪರಮೇಶ್ವರ್ ಈಗಾಗಲೇ ತಿಳಿಸಿದ್ದಾರೆ.

ಇದನ್ನೂ ಓದಿ
Image
RCBಗೆ ಸೋಲು… ತಲೆಕೆಳಗಾದ ಸೆಹ್ವಾಗ್ ಲೆಕ್ಕಾಚಾರ
Image
RCB Victory Parade: ಆರ್​ಸಿಬಿ ಆಟಗಾರರ ವಿಜಯೋತ್ಸವ ಮೆರವಣಿಗೆ ಇಲ್ಲ
Image
RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು ಈಗ ಉಲ್ಟಾ ಪಲ್ಟಾ
Image
ಸೋತ ನಂತರ ಮೈದಾನಕ್ಕೆ ಕಣ್ಣೀರಿಡುತ್ತ ಬಂದ ಪ್ರೀತಿ ಝಿಂಟಾ

ಮೊದಲಿಗೆ, ಆರ್​ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್​​​ನಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ಇದೇ ವೇಳೆ, ತಂಡದ ಪರವಾಗಿ ಒಬ್ಬರು ಆಟಗಾರರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​​ನಲ್ಲಿ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಸಚಿವ ಪರಮೇಶ್ವರ ಮಾಹಿತಿ ನೀಡಿದ್ದಾರೆ.

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಆರ್​ಸಿಬಿ

ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ವಿರಾಟ್ ಕೊಹ್ಲಿ ಅವರ 43 ರನ್​ಗಳ ನೆರವಿನಿಂದ 190 ರನ್ ಗಳಿಸಿತ್ತು. 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿ ಪಂಜಾಬ್​ಗೆ 191 ರನ್​ಗಳ ಗುರಿ ನಿಗದಿಪಡಿಸಿತ್ತು.

ಇದನ್ನೂ ಓದಿ: ಆರ್​ಸಿಬಿ ಆಟಗಾರರ ವಿಜಯೋತ್ಸವ ಮೆರವಣಿಗೆ ಇಲ್ಲ, ಗೃಹ ಸಚಿವರು ಕೊಟ್ಟ ಕಾರಣ ಇಲ್ಲಿದೆ

ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಆರ್​​ಸಿಬಿಯ 18 ವರ್ಷಗಳ ಕಪ್ ಬರ ನೀಗಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Wed, 4 June 25

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!