AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ

ಆರ್​ಸಿಬಿ ತಂಡವು ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿದೆ. ಈ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಗೂ ಹೆಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕಾಲದ ಕನಸು ಈಡೇರಿದೆ ಎಂದು ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ
ಆರ್​ಸಿಬಿ, ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Jun 04, 2025 | 12:38 AM

Share

ಬೆಂಗಳೂರು, ಜೂನ್​ 04: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ (RCB) ಚೊಚ್ಚಲ ಐಪಿಎಲ್ (IPL) ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್​ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆದಿಯಾಗಿ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ. “ Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

“ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
RCB ಗೆಲುವು ಖಚಿತವಾಗುತ್ತಿದ್ದಂತೆ ಮೈದಾನದಲ್ಲೇ ಕಣ್ಣೀರಿಟ್ಟ ವಿರಾಟ್ ಕೊಹ್ಲಿ
Image
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
Image
ಚೊಚ್ಚಲ ಐಪಿಎಲ್​​ ಚಾಂಪಿಯನ್‌ ಕಿರೀಟ ತೊಟ್ಟ ಆರ್​ಸಿಬಿ
Image
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...

“ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ” ಎಂದಿದ್ದಾರೆ.

ಮರೆಯಲಾಗದ, ಐತಿಹಾಸಿಕ ಗೆಲುವು: ಡಿಕೆ ಶಿವಕುಮಾರ್

ಈ ಸಲಾ ಕಪ್ ನಮ್ದೇ!❤️ ಐಪಿಎಲ್​ನಲ್ಲಿ ಇಂದು ಮರೆಯಲಾಗದ, ಐತಿಹಾಸಿಕ ಗೆಲುವಿಗಾಗಿ ಆರ್​ಸಿಬಿಗೆ ಅಭಿನಂದನೆಗಳು. 18 ವರ್ಷಗಳ ಉತ್ಸಾಹ, ನಿಷ್ಠೆ ಈ ರಾತ್ರಿ ಹೊರಹೊಮ್ಮಿದೆ. ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ. ಇದು ಗೆಲುವಿಗಿಂತ ಹೆಚ್ಚಿನದು. ಇಡೀ RCB ಸೈನ್ಯಕ್ಕೆ ಭಾವನಾತ್ಮಕ ಕ್ಷಣವಾಗಿದೆ. ಈ ಗೆಲುವನ್ನು ಕರ್ನಾಟಕ ಹೆಮ್ಮೆಯಿಂದ ಹೇಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಟ್ವೀ ಎಂದಿದ್ದಾರೆ.

ಇದನ್ನೂ ಓದಿ: ಗರ್ವದಿಂದ ಹೇಳಿ ‘ಈ ಸಲ ಕಪ್ ನಮ್ದೆ’: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ

ಈ ಸಲ ಕಪ್ ನಮ್ದು : ಕುಮಾರಸ್ವಾಮಿ

“ಐಪಿಎಲ್​ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್​ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ” ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

“ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್​ ಕೋಹ್ಲಿ ಅವರನ್ನು ಅಭಿನಂದಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಕನಸು ಕೊನೆಗೂ ನನಸಾಗಿದೆ: ಆರ್​ ಅಶೋಕ್​

18 ವರ್ಷಗಳ ಭರವಸೆ, ದುಃಖ ಮತ್ತು ಉತ್ಸಾಹ, ಕನಸು ಕೊನೆಗೂ ನನಸಾಗಿದೆ. ಆರ್​ಸಿಬಿಗೆ ಅಭಿನಂದನೆಗಳು. ಕೊನೆಗೂ ಚಾಂಪಿಯನ್ಸ್ ಎಂದು ಆರ್​ ಅಶೋಕ್​ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ