ಆರ್ ಡಿ ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಡುಕಟ್ಟಿ ನಿಂತಿದ್ದಾರೆ: ಆರಗ ಜ್ಞಾನೇಂದ್ರ, ಮಾಜಿ ಗೃಹ ಸಚಿವ

ಪ್ರಿಯಾಂಕ್ ಖರ್ಗೆಗೆ ಪಾಟೀಲ್ ಚೆನ್ನಾಗಿ ಗೊತ್ತು ಅವನು ಅವರ ಅಪ್ತ ಸಖ, ಯಾವಾಗಲೂ ಸಚಿವರ ಮನೆಯಲ್ಲೇ ಬಿದ್ದಿರುತ್ತಾನೆ. ಹಿಂದೆ ಪಿಎಸ್ ಐ ಹಗರಣ ನಡೆದಾಗ ವಿಧಾನ ಸಭೆಯಲ್ಲಿ ಪ್ರಿಯಾಂಕ್, ಪಾಟೀಲ್ ತನಗೆ ಗೊತ್ತಿಲ್ಲ ಅಂತ ಸುಳ್ಳು ಹೇಳಿದ್ದರು. ಪಾಟೀಲ್ ಕಾಂಗ್ರೆಸ್ ಟಿಕೆಟ್ ನಿಂದಲೇ ಅಫಜಲಪುರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ. ಆಗ ನನ್ನ ರಾಜೀನಾಮೆ ಕೇಳಿದ್ದ ಪ್ರಿಯಾಂಕ್ ಈಗೇನು ಮಾಡುತ್ತಾರೆ? ಎಂದು ಬಿಜೆಪಿ ಶಾಸಕ ಪ್ರಶ್ನಿಸಿದರು.

ಆರ್ ಡಿ ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಡುಕಟ್ಟಿ ನಿಂತಿದ್ದಾರೆ: ಆರಗ ಜ್ಞಾನೇಂದ್ರ, ಮಾಜಿ ಗೃಹ ಸಚಿವ
|

Updated on:Nov 09, 2023 | 6:52 PM

ಬೆಂಗಳೂರು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಉಗ್ರವಾಗಿ ಟೀಕಿಸಿದರಲ್ಲದೆ ಹಲವು ಆರೋಪಗಳನ್ನು ಮಾಡಿದರು. ಇತ್ತೀಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಎಫ್ ಡಿಎ ಮತ್ತು ಎಸ್ ಡಿಎ ಹುದ್ದೆಗಳಿಗಾಗಿ ನಡೆಸಿದ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ಮಾತಾಡಿದ ಅವರು ತಾವು ಗೃಹ ಸಚಿವರಾಗಿದ್ದಾಗ ಪಿಎಸ್ ಐ ನೇಮಕಾತಿ ಹಗರಣದಲ್ಲಿ ಕಿಂಗ್ ಪಿನ್ ಆಗಿದ್ದ ಆರ್ ಡಿ ಪಾಟೀಲ್ ನನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಲಾಗಿತ್ತು ಅದರೆ ಜಾಮೀನು ಪಡೆದು ಹೊರಬಂದ ಅವನ ಮೇಲೆ ಕೆಈಎ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ ಒಂದು ಕಣ್ಣಿಡಬೇಕಿತ್ತು. ಆದರೆ, ಪೊಲೀಸರು ಅಧಿಕಾರದಲ್ಲಿರುವವರ ಆದೇಶದ ಮೇರೆಗೆ ಹಾಗೆ ಮಾಡಲಿಲ್ಲ.

ಹಗರಣದಲ್ಲಿ ಅವನ ಪಾತ್ರವಿದೆ ಅಂತ ಗೊತ್ತಾದ ಮೇಲೆ ಬಂಧಿಸಲು ಪೊಲೀಸರು ವಿಳಂಬ ಮಾಡಿ ತಪ್ಪಿಸಿಕೊಳ್ಳುವ ಅವಕಾಶ ಕಲ್ಪಿಸುತ್ತಾರೆ, ಇದರರ್ಥ ಸರ್ಕಾರವೇ ಪಾಟೀಲನ ರಕ್ಷಣೆಗೆ ನಿಂತಿದೆ ಎಂದು ಜ್ಞಾನೇಂದ್ರ ಹೇಳಿದರು. ಪ್ರಿಯಾಂಕ್ ಖರ್ಗೆಗೆ ಪಾಟೀಲ್ ಚೆನ್ನಾಗಿ ಗೊತ್ತು ಅವನು ಅವರ ಅಪ್ತ ಸಖ, ಯಾವಾಗಲೂ ಸಚಿವರ ಮನೆಯಲ್ಲೇ ಬಿದ್ದಿರುತ್ತಾನೆ. ಹಿಂದೆ ಪಿಎಸ್ ಐ ಹಗರಣ ನಡೆದಾಗ ವಿಧಾನ ಸಭೆಯಲ್ಲಿ ಪ್ರಿಯಾಂಕ್, ಪಾಟೀಲ್ ತನಗೆ ಗೊತ್ತಿಲ್ಲ ಅಂತ ಸುಳ್ಳು ಹೇಳಿದ್ದರು. ಪಾಟೀಲ್ ಕಾಂಗ್ರೆಸ್ ಟಿಕೆಟ್ ನಿಂದಲೇ ಅಫಜಲಪುರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ. ಆಗ ನನ್ನ ರಾಜೀನಾಮೆ ಕೇಳಿದ್ದ ಪ್ರಿಯಾಂಕ್ ಈಗೇನು ಮಾಡುತ್ತಾರೆ? ಎಂದು ಬಿಜೆಪಿ ಶಾಸಕ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Thu, 9 November 23

Follow us
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ