AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಗಾ ಯೋಜನೆಯಡಿ ದಿನಗೂಲಿ ರೂ 289ಕ್ಕೆ ಹೆಚ್ಚಳ: ಸಚಿವ ಕೆ.ಎಸ್.ಈಶ್ವರಪ್ಪ

ಮೈಸೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ದಿನಗೂಲಿಯನ್ನು ₹ 289ಕ್ಕೆ ಪರಿಷ್ಕರಿಸಲಾಗಿದೆಯೆಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದ್ದಾರೆ. ಮೈಸೂರಿನಲ್ಲಿ ಪರಿಶೀಲನಾ ಸಭೆಯೊಂದರ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವರು, ನರೆಗಾ ಯೋಜನೆಯಡಿ ದಿನಗೂಲಿಯನ್ನು ಈ ಹಿಂದೆ ₹ 245ರಿಂದ ₹ 275ಕ್ಕೆ ಹೆಚ್ಚಿಸಲಾಗಿದೆ. ಇದೀಗ ಈ ಮೊತ್ತವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2021ರಿಂದ ₹ 289 ನೀಡಲಾಗುವುದು ಎಂದು ಹೇಳಿದರು. ಕಾರ್ಮಿಕರ ಉಪಕರಣಗಳಿಗೆ […]

ನರೇಗಾ ಯೋಜನೆಯಡಿ ದಿನಗೂಲಿ ರೂ 289ಕ್ಕೆ ಹೆಚ್ಚಳ: ಸಚಿವ ಕೆ.ಎಸ್.ಈಶ್ವರಪ್ಪ
ಕೆಎಸ್ ಈಶ್ವರಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on:Apr 09, 2021 | 9:37 PM

Share

ಮೈಸೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ದಿನಗೂಲಿಯನ್ನು ₹ 289ಕ್ಕೆ ಪರಿಷ್ಕರಿಸಲಾಗಿದೆಯೆಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದ್ದಾರೆ. ಮೈಸೂರಿನಲ್ಲಿ ಪರಿಶೀಲನಾ ಸಭೆಯೊಂದರ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವರು, ನರೆಗಾ ಯೋಜನೆಯಡಿ ದಿನಗೂಲಿಯನ್ನು ಈ ಹಿಂದೆ ₹ 245ರಿಂದ ₹ 275ಕ್ಕೆ ಹೆಚ್ಚಿಸಲಾಗಿದೆ. ಇದೀಗ ಈ ಮೊತ್ತವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2021ರಿಂದ ₹ 289 ನೀಡಲಾಗುವುದು ಎಂದು ಹೇಳಿದರು. ಕಾರ್ಮಿಕರ ಉಪಕರಣಗಳಿಗೆ ₹ 10ರ ಬಾಡಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕವು 2020-21 ಸಾಲಿಗೆ ನರೆಗಾ ಯೋಜನೆಯ ಗುರಿಯಾಗಿದ್ದ 13 ಕೋಟಿ ಮಾನವ-ದಿನಗಳನ್ನು ಮೀರಿದ ಸಾಧನೆ ಮಾಡಿದೆ. ಕಳೆದ ಸಾಲಿನಲ್ಲಿ 15 ಕೋಟಿ (14.84 ಮಾನವ-ದಿನಗಳು) ಮಾನವ-ದಿನಗಳನ್ನು ಸಾಧಿಸಿದೆ ಎಂದು ಈಶ್ವರಪ್ಪ ಹೇಳಿದರು. ಕೊವಿಡ್-19 ಪಿಡುಗುನಿಂದಾಗಿ ನಗರಪ್ರದೇಶಗಳಿಂದ ಜನರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿದ್ದರಿಂದ ಬಹಳಷ್ಟು ಜನಕ್ಕೆ ಈ ಯೋಜನೆಯಡಿಯಲ್ಲಿ ಕೆಲಸ ಸಿಗುವಂತಾಯಿತೆಂದು ಸಚಿವರು ಹೇಳಿದರು.

ಈ ಸಾಲಿನಲ್ಲಿ ಒಟ್ಟು ₹ 3997.43 ಕೋಟಿಗಳನ್ನು ನೇರವಾಗಿ ಖಾರ್ಮಿಕರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದ ಸಚಿವರು, ಮಾನವ-ದಿನಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚುವರಿ 800 ಕೋಟಿ ರೂಪಾಯಿ ಅನುದಾನದ ನಿರೀಕ್ಷೆಯಿದೆ ಅಂತ ಹೇಳಿದರು.

ಕಳೆದ ಸಾಲಿನಲ್ಲಿ 30.19 ಲಕ್ಷ ಕುಟುಂಬಗಳ 56.83 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದ್ದು ಹಿಂದಿನ 5 ವರ್ಷಗಳಲ್ಲಿ ಅತ್ಯಧಿಕ ಜನರಿಗೆ ಕೆಲಸ ಒದಗಿಸಿರುವ ದಾಖಲೆ ಇದಾಗಿದೆ ಎಂದು ಈಶ್ವರಪ್ಪ ಅಂಕಿ-ಅಂಶಗಳ ಮೂಲಕ ತಿಳಿಸಿದರು. ಈ ಕುಟುಂಬಗಳ ಪೈಕಿ 2.4 ಲಕ್ಷದಷ್ಟು ಕುಟುಂಬಗಳು ವರ್ಷದಲ್ಲಿ 100 ದಿನಗಳ ಕೆಲಸವನ್ನು ಪಡೆದುಕೊಂಡರು ಎಂದು ಅವರು ಹೇಳಿದರು.

ಮಾರ್ಚ್​ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಮಳೆ ನೀರನ್ನು ಹಿಡಿಯಿರಿ’ (ಕ್ಯಾಚ್​ ದಿ ರೇನ್) ಅಭಿಯಾನ ಜಾರಿಗೊಳಿದ್ದನ್ನು ಉಲ್ಲೇಖಿಸಿದ ಈಶ್ವರಪ್ಪ ಅವರು ಕರ್ನಾಟಕದಲ್ಲಿ ಈ ಅಭಿಯಾನವನ್ನು ರಾಜ್ಯಾದಂತ ಶುಕ್ರವಾರದಿಂದ ಜಾರಿಗೊಳಿಸುತ್ತಿರುವುದರಿಂದ ನರೇಗಾ ಯೋಜನೆಯಡಿ ಮತ್ತಷ್ಟು ಜನರಿಗೆ ಕೆಲಸ ಸಿಗಲಿದೆ ಎಂದು ಹೇಳಿದರು.

ಜಲಶಕ್ತಿ ಯೋಜನೆಯಡಿ ಕೆರೆಗಳನ್ನು ಪುನರುಜ್ಜೀವಗೊಳಿಸಿವ ಮತ್ತು ಸಂರಕ್ಷಣೆಯ ಕಾರ್ಯಗಳೊಂದಿಗೆ ಹಲವಾರು ನೀರು ಸಂರಕ್ಷಣೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಸಹ ಸಚಿವರು ಹೇಳಿದರು. ಜಲಶಕ್ತಿ ಯೋಜನೆಯು ಈ ವರ್ಷದ ನವೆಂಬರ್​ನಲ್ಲಿ ಕೊನೆಗೊಳ್ಳಲಿದೆ. ನರೇಗಾ ಯೋಜನೆ ಅಡಿಯಲ್ಲೇ ಕೆರೆಗಳ ಹೂಳೆತ್ತುವ, ಕೆರೆ-ಕುಂಟೆಗಳನ್ನು ತಂಬಿಸಲು ನೀರಿನ ಮೂಲಗಳನ್ನು ಪತ್ತೆಮಾಡುವ ಕಾರ್ಯಗಳನ್ನು ಮಾಡಲಾಗುವುದೆಂದು ಈಶ್ವರಪ್ಪ ಹೇಳಿದರು.

ನರೇಗಾ ಯೋಜನೆಯು ಜನರಿಗೆ ಉದ್ಯೋಗ ಒದಗಿಸುವದರೊಂದಿಗೆ ಅಂತರಜಲ ಮೂಲಗಳನ್ನು ಸಹ ಪುನಶ್ಚೇತನಗೊಳಿಸುವುದೆಂದು ಹೇಳಿದ ಈಶ್ವರಪ್ಪ ಅವರು ಜನರಿಗೆ ಫ್ಲೋರೈಡ್-ಮುಕ್ತ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ: Covid 19 Live Updates Karnataka: ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಏಪ್ರಿಲ್ 1ರಿಂದ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

ಇದನ್ನೂ ಓದಿ: ಉತ್ತರ ಕರ್ನಾಟಕ ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾದ ಅಷ್ಟೂ ರಸ್ತೆಗಳ ನಿರ್ಮಾಣ ಪೂರ್ಣ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

Published On - 9:35 pm, Fri, 9 April 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ