AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಗಾ ಯೋಜನೆಯಡಿ ದಿನಗೂಲಿ ರೂ 289ಕ್ಕೆ ಹೆಚ್ಚಳ: ಸಚಿವ ಕೆ.ಎಸ್.ಈಶ್ವರಪ್ಪ

ಮೈಸೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ದಿನಗೂಲಿಯನ್ನು ₹ 289ಕ್ಕೆ ಪರಿಷ್ಕರಿಸಲಾಗಿದೆಯೆಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದ್ದಾರೆ. ಮೈಸೂರಿನಲ್ಲಿ ಪರಿಶೀಲನಾ ಸಭೆಯೊಂದರ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವರು, ನರೆಗಾ ಯೋಜನೆಯಡಿ ದಿನಗೂಲಿಯನ್ನು ಈ ಹಿಂದೆ ₹ 245ರಿಂದ ₹ 275ಕ್ಕೆ ಹೆಚ್ಚಿಸಲಾಗಿದೆ. ಇದೀಗ ಈ ಮೊತ್ತವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2021ರಿಂದ ₹ 289 ನೀಡಲಾಗುವುದು ಎಂದು ಹೇಳಿದರು. ಕಾರ್ಮಿಕರ ಉಪಕರಣಗಳಿಗೆ […]

ನರೇಗಾ ಯೋಜನೆಯಡಿ ದಿನಗೂಲಿ ರೂ 289ಕ್ಕೆ ಹೆಚ್ಚಳ: ಸಚಿವ ಕೆ.ಎಸ್.ಈಶ್ವರಪ್ಪ
ಕೆಎಸ್ ಈಶ್ವರಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on:Apr 09, 2021 | 9:37 PM

Share

ಮೈಸೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ದಿನಗೂಲಿಯನ್ನು ₹ 289ಕ್ಕೆ ಪರಿಷ್ಕರಿಸಲಾಗಿದೆಯೆಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದ್ದಾರೆ. ಮೈಸೂರಿನಲ್ಲಿ ಪರಿಶೀಲನಾ ಸಭೆಯೊಂದರ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವರು, ನರೆಗಾ ಯೋಜನೆಯಡಿ ದಿನಗೂಲಿಯನ್ನು ಈ ಹಿಂದೆ ₹ 245ರಿಂದ ₹ 275ಕ್ಕೆ ಹೆಚ್ಚಿಸಲಾಗಿದೆ. ಇದೀಗ ಈ ಮೊತ್ತವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2021ರಿಂದ ₹ 289 ನೀಡಲಾಗುವುದು ಎಂದು ಹೇಳಿದರು. ಕಾರ್ಮಿಕರ ಉಪಕರಣಗಳಿಗೆ ₹ 10ರ ಬಾಡಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕವು 2020-21 ಸಾಲಿಗೆ ನರೆಗಾ ಯೋಜನೆಯ ಗುರಿಯಾಗಿದ್ದ 13 ಕೋಟಿ ಮಾನವ-ದಿನಗಳನ್ನು ಮೀರಿದ ಸಾಧನೆ ಮಾಡಿದೆ. ಕಳೆದ ಸಾಲಿನಲ್ಲಿ 15 ಕೋಟಿ (14.84 ಮಾನವ-ದಿನಗಳು) ಮಾನವ-ದಿನಗಳನ್ನು ಸಾಧಿಸಿದೆ ಎಂದು ಈಶ್ವರಪ್ಪ ಹೇಳಿದರು. ಕೊವಿಡ್-19 ಪಿಡುಗುನಿಂದಾಗಿ ನಗರಪ್ರದೇಶಗಳಿಂದ ಜನರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿದ್ದರಿಂದ ಬಹಳಷ್ಟು ಜನಕ್ಕೆ ಈ ಯೋಜನೆಯಡಿಯಲ್ಲಿ ಕೆಲಸ ಸಿಗುವಂತಾಯಿತೆಂದು ಸಚಿವರು ಹೇಳಿದರು.

ಈ ಸಾಲಿನಲ್ಲಿ ಒಟ್ಟು ₹ 3997.43 ಕೋಟಿಗಳನ್ನು ನೇರವಾಗಿ ಖಾರ್ಮಿಕರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದ ಸಚಿವರು, ಮಾನವ-ದಿನಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚುವರಿ 800 ಕೋಟಿ ರೂಪಾಯಿ ಅನುದಾನದ ನಿರೀಕ್ಷೆಯಿದೆ ಅಂತ ಹೇಳಿದರು.

ಕಳೆದ ಸಾಲಿನಲ್ಲಿ 30.19 ಲಕ್ಷ ಕುಟುಂಬಗಳ 56.83 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದ್ದು ಹಿಂದಿನ 5 ವರ್ಷಗಳಲ್ಲಿ ಅತ್ಯಧಿಕ ಜನರಿಗೆ ಕೆಲಸ ಒದಗಿಸಿರುವ ದಾಖಲೆ ಇದಾಗಿದೆ ಎಂದು ಈಶ್ವರಪ್ಪ ಅಂಕಿ-ಅಂಶಗಳ ಮೂಲಕ ತಿಳಿಸಿದರು. ಈ ಕುಟುಂಬಗಳ ಪೈಕಿ 2.4 ಲಕ್ಷದಷ್ಟು ಕುಟುಂಬಗಳು ವರ್ಷದಲ್ಲಿ 100 ದಿನಗಳ ಕೆಲಸವನ್ನು ಪಡೆದುಕೊಂಡರು ಎಂದು ಅವರು ಹೇಳಿದರು.

ಮಾರ್ಚ್​ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಮಳೆ ನೀರನ್ನು ಹಿಡಿಯಿರಿ’ (ಕ್ಯಾಚ್​ ದಿ ರೇನ್) ಅಭಿಯಾನ ಜಾರಿಗೊಳಿದ್ದನ್ನು ಉಲ್ಲೇಖಿಸಿದ ಈಶ್ವರಪ್ಪ ಅವರು ಕರ್ನಾಟಕದಲ್ಲಿ ಈ ಅಭಿಯಾನವನ್ನು ರಾಜ್ಯಾದಂತ ಶುಕ್ರವಾರದಿಂದ ಜಾರಿಗೊಳಿಸುತ್ತಿರುವುದರಿಂದ ನರೇಗಾ ಯೋಜನೆಯಡಿ ಮತ್ತಷ್ಟು ಜನರಿಗೆ ಕೆಲಸ ಸಿಗಲಿದೆ ಎಂದು ಹೇಳಿದರು.

ಜಲಶಕ್ತಿ ಯೋಜನೆಯಡಿ ಕೆರೆಗಳನ್ನು ಪುನರುಜ್ಜೀವಗೊಳಿಸಿವ ಮತ್ತು ಸಂರಕ್ಷಣೆಯ ಕಾರ್ಯಗಳೊಂದಿಗೆ ಹಲವಾರು ನೀರು ಸಂರಕ್ಷಣೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಸಹ ಸಚಿವರು ಹೇಳಿದರು. ಜಲಶಕ್ತಿ ಯೋಜನೆಯು ಈ ವರ್ಷದ ನವೆಂಬರ್​ನಲ್ಲಿ ಕೊನೆಗೊಳ್ಳಲಿದೆ. ನರೇಗಾ ಯೋಜನೆ ಅಡಿಯಲ್ಲೇ ಕೆರೆಗಳ ಹೂಳೆತ್ತುವ, ಕೆರೆ-ಕುಂಟೆಗಳನ್ನು ತಂಬಿಸಲು ನೀರಿನ ಮೂಲಗಳನ್ನು ಪತ್ತೆಮಾಡುವ ಕಾರ್ಯಗಳನ್ನು ಮಾಡಲಾಗುವುದೆಂದು ಈಶ್ವರಪ್ಪ ಹೇಳಿದರು.

ನರೇಗಾ ಯೋಜನೆಯು ಜನರಿಗೆ ಉದ್ಯೋಗ ಒದಗಿಸುವದರೊಂದಿಗೆ ಅಂತರಜಲ ಮೂಲಗಳನ್ನು ಸಹ ಪುನಶ್ಚೇತನಗೊಳಿಸುವುದೆಂದು ಹೇಳಿದ ಈಶ್ವರಪ್ಪ ಅವರು ಜನರಿಗೆ ಫ್ಲೋರೈಡ್-ಮುಕ್ತ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ: Covid 19 Live Updates Karnataka: ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಏಪ್ರಿಲ್ 1ರಿಂದ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

ಇದನ್ನೂ ಓದಿ: ಉತ್ತರ ಕರ್ನಾಟಕ ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾದ ಅಷ್ಟೂ ರಸ್ತೆಗಳ ನಿರ್ಮಾಣ ಪೂರ್ಣ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

Published On - 9:35 pm, Fri, 9 April 21

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ