AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ […]

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!
ಸಾಧು ಶ್ರೀನಾಥ್​
| Edited By: |

Updated on:May 28, 2020 | 2:49 PM

Share

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ.

ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ ಕೆ.ಆರ್.ಎಸ್. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಬೆಂಗಳೂರಿಗೆ ರವಾನಿಸಲಾಗಿದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.

ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಎಂಬುವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು ಅವುಗಳನ್ನ ತೆಗೆಯಲು ಇಬ್ಬರನ್ನೂ ಬೆಂಗಳೂರಿಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರೋ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ರಿಯಲ್ ಎಸ್ಟೇಟ್ ವಿಷಯವಾಗಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರ ತನಿಖೆಯ ಬಳಿಕ ಘಟನೆ ಸ್ಪಷ್ಟವಾದ ಕಾರಣ ತಿಳಿಯಲಿದೆ.

Published On - 10:55 am, Thu, 28 May 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?