AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ […]

ಬೆಂಗಳೂರಿಂದ ಬಂದ ಭೂ ಉದ್ಯಮಿಗಳು ಇಬ್ಬರ ಮೇಲೆ ಗುಂಡು ಹಾರಿಸಿ ಪರಾರಿ!
ಸಾಧು ಶ್ರೀನಾಥ್​
| Edited By: |

Updated on:May 28, 2020 | 2:49 PM

Share

ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ.

ಗುಂಡೇಟು ಬಿದ್ದ ಇಬ್ಬರನ್ನೂ ಚಿಕ್ಕಮಗಳೂರಿನ ಕೆ.ಆರ್.ಎಸ್. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಬೆಂಗಳೂರಿಗೆ ರವಾನಿಸಲಾಗಿದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.

ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಎಂಬುವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು ಅವುಗಳನ್ನ ತೆಗೆಯಲು ಇಬ್ಬರನ್ನೂ ಬೆಂಗಳೂರಿಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರೋ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ರಿಯಲ್ ಎಸ್ಟೇಟ್ ವಿಷಯವಾಗಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರ ತನಿಖೆಯ ಬಳಿಕ ಘಟನೆ ಸ್ಪಷ್ಟವಾದ ಕಾರಣ ತಿಳಿಯಲಿದೆ.

Published On - 10:55 am, Thu, 28 May 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​