ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ […]

ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ
ಸಾಧು ಶ್ರೀನಾಥ್​

Updated on: Sep 21, 2019 | 4:25 PM

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On - 4:19 pm, Sat, 21 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us