AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿ ಅಥವಾ ಸಂದೇಶ ನಿಜವೋ ಸುಳ್ಳೋ? ರಾಜ್ಯ ಸರ್ಕಾರದ ವೆಬ್​ಸೈಟ್​ನಲ್ಲಿ ಚೆಕ್ ಮಾಡಿ ನೋಡಿ

ನೀವು ಓದಿದ ಸುದ್ದಿ, ವಾಟ್ಸ್ಆ್ಯಪ್ ಸಂದೇಶದಲ್ಲಿ ಬಂದ ಸುದ್ದಿ ನಿಜವೋ , ಸುಳ್ಳೋ ಎಂದು ಅರಿಯಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ಪೊಲೀಸ್ ಫ್ಯಾಕ್ಟ್​ಚೆಕ್ ವೆಬ್​ಸೈಟ್​ಗೆ ಭೇಟಿ ನೀಡಿ

ಸುದ್ದಿ ಅಥವಾ ಸಂದೇಶ ನಿಜವೋ ಸುಳ್ಳೋ? ರಾಜ್ಯ ಸರ್ಕಾರದ ವೆಬ್​ಸೈಟ್​ನಲ್ಲಿ ಚೆಕ್ ಮಾಡಿ ನೋಡಿ
ಕರ್ನಾಟಕ ಪೊಲೀಸ್ ಫ್ಯಾಕ್ಟ್ ಚೆಕ್ ವೆಬ್ ಸೈಟ್
ರಶ್ಮಿ ಕಲ್ಲಕಟ್ಟ
| Edited By: |

Updated on: Jan 14, 2021 | 3:42 PM

Share

ನೀವು ಓದಿದ ಸುದ್ದಿ, ವಾಟ್ಸ್ಆ್ಯಪ್ ಸಂದೇಶದಲ್ಲಿ ಬಂದ ಸುದ್ದಿ ನಿಜವೋ , ಸುಳ್ಳೋ ಎಂದು ತಿಳಿಯುವುದು ಹೇಗೆ? ಎಂಬ ಪ್ರಶ್ನೆ ಬಹುತೇಕ ಜನರ ಮನಸ್ಸಿನಲ್ಲಿ ಮೂಡಿರುತ್ತದೆ. ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಸಾಕಷ್ಟು ಫ್ಯಾಕ್ಟ್​ಚೆಕ್ ವೆಬ್​ಸೈಟ್​ಗಳು ಇವೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಕರ್ನಾಟಕ ಪೊಲೀಸ್ ಫ್ಯಾಕ್ಟ್​ಚೆಕ್ ವೆಬ್ ಸೈಟ್ ಆರಂಭಿಸಿತ್ತು. ಕೊರೊನಾವೈರಸ್​ಗೆ ಸಂಬಂಧಿಸಿದ ಹಲವಾರು ಸುಳ್ಳುಸುದ್ದಿಗಳು ಹರಿದಾಡಿದ ಹಿನ್ನೆಲೆಯಲ್ಲಿ ಈ ವೆಬ್​ಸೈಟ್​ ಆರಂಭಿಸಲಾಗಿತ್ತು.

ಡಿಜಿಪಿ ಪ್ರವೀಣ್ ಸೂದ್ ಅವರ ಕನಸಿನ ಕೂಸು ಆಗಿರುವ ಕರ್ನಾಟಕ ರಾಜ್ಯ ಪೊಲೀಸ್ ಫ್ಯಾಕ್ಟ್​ಚೆಕ್ ವೆಬ್​ಸೈಟ್​ನ್ನು ಸಿಐಡಿ ಸೈಬರ್ ಕ್ರೈಮ್ ವಿಭಾಗ ಮತ್ತು Check4Spam ನಿರ್ವಹಣೆ ಮಾಡುತ್ತದೆ. ಇಂಟರ್ನೆಟ್ ಸೌಲಭ್ಯ ಇಲ್ಲದೇ ಇದ್ದರೆ 9449878805 ಕರೆ ಮಾಡಿಯೂ ಸುದ್ದಿಗಳ ಸತ್ಯಾಸತ್ಯತೆಯನ್ನು ಅರಿಯಬಹುದು. ಒಂದು ವೇಳೆ ನಿಮಗೆ ಲಭಿಸಿದ ಸಂದೇಶ ಸತ್ಯವೋ ಸುಳ್ಳೊ ಎಂದು ಅರಿಯಲು ಸಮಯ ಇಲ್ಲದೇ ಇದ್ದರೆ ಆ ಸಂದೇಶಗಳನ್ನು ಹಂಚಲೇಬೇಡಿ. ಯಾಕೆಂದರೆ ಇದು ಸುಳ್ಳು ಸುದ್ದಿಗಳು ಹರಡುವಿಕೆಯನ್ನು ತಡೆಯುತ್ತದೆ.

ಕರ್ನಾಟಕ ರಾಜ್ಯ ಪೊಲೀಸರ ವೆಬ್​ಸೈಟ್​ ತೆರೆದರೆ ಅದರ ಮುಖಪುಟದಲ್ಲಿ ಮಂಗಳೂರಿನಲ್ಲಿ ಹಕ್ಕಿ ಜ್ವರ ಭೀತಿ, ಮಸೀದಿಯಲ್ಲಿ ಧ್ವನಿ ವರ್ಧಕ ತೆಗೆದುಹಾಕಲು ನೋಟಿಸ್ , ಕೋವಿಡ್ ರೋಗಿಯಾಗಿರುವ ಮಹಿಳೆ ಬೆಂಗಳೂರಿನಲ್ಲಿ ನಾಪತ್ತೆ ಮೊದಲಾದ ಸುಳ್ಳುಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಿರುವುದನ್ನು ಕಾಣಬಹುದು.

ಇನ್ನು ಮುಂದೆ ನಿಮಗೆ ಬಂದ ಸಂದೇಶ ಅಥವಾ ನೀವು ಓದಿದ, ನೋಡಿದ ಸುದ್ದಿ ಸುಳ್ಳು ಎಂಬ ಸಂದೇಹ ಬಂದರೆ ಈ ವೆಬ್ ಸೈಟ್​ನಲ್ಲಿ Submit Suspicious Content ಎಂಬ ವಿಭಾಗದಲ್ಲಿ ನಿಮ್ಮ ಸಂದೇಶವನ್ನು ದಾಖಲಿಸಬಹುದು.

Fact Check | ಸ್ಟ್ಯಾಂಡ್​ಅಪ್ ಕಾಮಿಡಿಯನ್ ಮುನಾವರ್​ಗೆ ಥಳಿತ; ವೈರಲ್ ವಿಡಿಯೊದ ಸತ್ಯಾಸತ್ಯತೆ ಏನು?

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ