AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ

ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್, ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಆಯೇಷಾ ಬಾನು
|

Updated on: May 26, 2021 | 2:09 PM

Share

ಕೊರೊನಾ ಮಹಾಮಾರಿಯ 2ನೇ ಅಲೆ ಇಡೀ ದೇಶವನ್ನು ನಡುಗಿಸಿದೆ. ಸದ್ಯ ಲಾಕ್ಡೌನ್ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಈಗ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್​ನಲ್ಲಿರುವವರ ಕೈಗೆ ಸೀಲ್ ಹಾಕಲಾಗುತ್ತಿದೆ. ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಐಸೋಲೇಷನ್ನಲ್ಲಿರುವವರ ಮನೆಗಳಿಗೆ ‘ರೆಡ್ ಟೇಪ್’ ಇನ್ನು ಐಸೋಲೇಷನ್ನಲ್ಲಿ ಇರುವವರ ಮನೆಗಳಿಗೆ ರೆಡ್‌‌ ಟೇಪ್ ಅಳವಡಿಸಲು ರಾಜ್ಯ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ ಸಿಎಂ ಈ ಸೂಚನೆ ನೀಡಿದ್ದರು. ಸಿಎಂ ಸೂಚನೆ ಹಿನ್ನೆಲೆಯಲ್ಲಿ ಇನ್ನು ಐಸೋಲೇಷನ್ನಲ್ಲಿ‌ ಇರುವವರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಈ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ತಿಳಿಸಿದ್ದರು.

ಒಟ್ನಲ್ಲಿ ಕೊರೊನಾ 2ನೇ ಅಲೆ ಆರಂಭದಲ್ಲಿ ಸುಮ್ಮನಿದ್ದ ರಾಜ್ಯ ಸರ್ಕಾರ ಸಾವಿರಾರು ಜನ ಪ್ರಾಣತೆತ್ತ ಬಳಿಕ ಎಚ್ಚೆತ್ತುಕೊಂಡಿದೆ. ಕೊರೊನಾ 2ನೇ ಅಲೆ ಅಬ್ಬರ ಕಡಿಮೆಯಾಗೋ ವೇಳೆಗೆ ಎಚ್ಚೆತ್ತುಕೊಂಡು ಫೀಲ್ಡಿಗಿಳಿದಿದೆ. ಹೋಮ್ ಐಸೋಲೇಷನ್ನಲ್ಲಿದ್ದವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದ್ದಾಗ ಕಣ್ಣೆತ್ತಿ ನೋಡದ ಸರ್ಕಾರ, ಇದೀಗ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: HS Doreswamy Passes Away: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನ

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!