AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ

ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್, ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on: May 26, 2021 | 2:09 PM

Share

ಕೊರೊನಾ ಮಹಾಮಾರಿಯ 2ನೇ ಅಲೆ ಇಡೀ ದೇಶವನ್ನು ನಡುಗಿಸಿದೆ. ಸದ್ಯ ಲಾಕ್ಡೌನ್ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಈಗ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್​ನಲ್ಲಿರುವವರ ಕೈಗೆ ಸೀಲ್ ಹಾಕಲಾಗುತ್ತಿದೆ. ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಐಸೋಲೇಷನ್ನಲ್ಲಿರುವವರ ಮನೆಗಳಿಗೆ ‘ರೆಡ್ ಟೇಪ್’ ಇನ್ನು ಐಸೋಲೇಷನ್ನಲ್ಲಿ ಇರುವವರ ಮನೆಗಳಿಗೆ ರೆಡ್‌‌ ಟೇಪ್ ಅಳವಡಿಸಲು ರಾಜ್ಯ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ ಸಿಎಂ ಈ ಸೂಚನೆ ನೀಡಿದ್ದರು. ಸಿಎಂ ಸೂಚನೆ ಹಿನ್ನೆಲೆಯಲ್ಲಿ ಇನ್ನು ಐಸೋಲೇಷನ್ನಲ್ಲಿ‌ ಇರುವವರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಈ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ತಿಳಿಸಿದ್ದರು.

ಒಟ್ನಲ್ಲಿ ಕೊರೊನಾ 2ನೇ ಅಲೆ ಆರಂಭದಲ್ಲಿ ಸುಮ್ಮನಿದ್ದ ರಾಜ್ಯ ಸರ್ಕಾರ ಸಾವಿರಾರು ಜನ ಪ್ರಾಣತೆತ್ತ ಬಳಿಕ ಎಚ್ಚೆತ್ತುಕೊಂಡಿದೆ. ಕೊರೊನಾ 2ನೇ ಅಲೆ ಅಬ್ಬರ ಕಡಿಮೆಯಾಗೋ ವೇಳೆಗೆ ಎಚ್ಚೆತ್ತುಕೊಂಡು ಫೀಲ್ಡಿಗಿಳಿದಿದೆ. ಹೋಮ್ ಐಸೋಲೇಷನ್ನಲ್ಲಿದ್ದವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದ್ದಾಗ ಕಣ್ಣೆತ್ತಿ ನೋಡದ ಸರ್ಕಾರ, ಇದೀಗ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: HS Doreswamy Passes Away: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು