AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್​-ಎಸಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರೈಲ್ವೆ, ಎಸಿ ಬಸ್​ಗಳ ಟಿಕೆಟ್​ ಸಂಗ್ರಹಕ್ಕೆ ಹೊಡೆತ

ಮಹಿಳೆಯರಿಗೆ ಶಕ್ತಿ ಯೋಜನೆಯಡಿ ನಾನ್-ಎಸಿ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಆರಂಭವಾಗಿದೆ. ಇದರಿಂದ ಪ್ರಮುಖ ನಗರಗಳ ರೈಲ್ವೆ ಮತ್ತು ಉನ್ನತ ದರ್ಜೆಯ ವೋಲ್ವೋ ಬಸ್‌ಗಳ ಟಿಕೆಟ್​​ ಹಣ ಸಂಗ್ರಹಕ್ಕೆ ಹೊಡೆತ ಬಿದ್ದಿದೆ.

ನಾನ್​-ಎಸಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರೈಲ್ವೆ, ಎಸಿ ಬಸ್​ಗಳ ಟಿಕೆಟ್​ ಸಂಗ್ರಹಕ್ಕೆ ಹೊಡೆತ
ರೈಲು ಪ್ರಯಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 14, 2023 | 11:58 AM

Share

ಮೈಸೂರು: ಮಹಿಳೆಯರಿಗೆ ಶಕ್ತಿ ಯೋಜನೆಯಡಿ (Shakti Yojana) ನಾನ್-ಎಸಿ (Non-AC) ಸರ್ಕಾರಿ ಸಾರಿಗೆ ಬಸ್​ನಲ್ಲಿ (Government Bus) ಉಚಿತ ಪ್ರಯಾಣ ಆರಂಭವಾಗಿದೆ. ಇದರಿಂದ ಪ್ರಮುಖ ನಗರಗಳ ರೈಲ್ವೆ (Train) ಮತ್ತು ಉನ್ನತ ದರ್ಜೆಯ ವೋಲ್ವೋ ಬಸ್‌ಗಳ (Volvo Bus) ಟಿಕೆಟ್​​ ಹಣ ಸಂಗ್ರಹಕ್ಕೆ ಹೊಡೆತ ಬಿದ್ದಿದೆ. ಹೌದು ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಉತ್ಸುಕರಾಗಿದ್ದಾರೆ. ಇದರಿಂದ ರೈಲ್ವೆಯಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಲ್ಲಿ ಶೇ 20ರಷ್ಟು ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಮೈಸೂರಿನಿಂದ ಬೆಂಗಳೂರಿಗೆ, ಮಲೆ ಮಹದೇಶ್ವರ ಬೆಟ್ಟ ಹಾಗೂ ಇತರೆ ಯಾತ್ರಾ ಕೇಂದ್ರಗಳಿಗೆ ತೆರಳುವ ನಾನ್​-ಎಸಿ ಸರ್ಕಾರಿ ಸಾರಿಗೆ ಬಸ್​ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.

ಶಕ್ತಿ ಯೋಜನೆಯ ಎರಡನೇ ದಿನ, ಅನೇಕ ವೋಲ್ವೋ ಬಸ್‌ಗಳು ಪ್ರಯಾಣಿಕರಿಗಾಗಿ ಸಾಕಷ್ಟು ಹೊತ್ತು ಕಾದು ನಿಂತಿರುವುದನ್ನು ಕಾಣಬಹುದಾಗಿತ್ತು. ಹೀಗಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಆರಾಮದಾಯಕ ಮತ್ತು ಸುರಕ್ಷತೆ ದೃಷ್ಟಿಯಿಂದ ಕೆಎಸ್​ಆರ್​ಟಿಸಿ ಹೆಚ್ಚಿನ ನಾನ್​-ಎಸಿ ಬಸ್​​ಗಳನ್ನು ರಸ್ತೆಗೆ ಇಳಿಸಲು ಪರದಾಡಿತು.

ಇದನ್ನೂ ಓದಿ: Free Bus Travel: ಭಾನುವಾರ ಕೇವಲ ಅರ್ಧದಿನದಲ್ಲಿ 5.7 ಲಕ್ಷಕ್ಕೂ ಹೆಚ್ಚು ಮಹಿಳೆಯರು ಶಕ್ತಿ ಯೋಜನೆಯಡಿ ಬಸ್​ಗಳಲ್ಲಿ ಉಚಿತವಾಗಿ ಪಯಣಿಸಿದರು!

ಕೆಎಸ್‌ಆರ್‌ಟಿಸಿ ಚಾಲಕ ರವಿ ಮಾತನಾಡಿ, ಬೆಂಗಳೂರು- ಮಲೆಮಹದೇಶ್ವರ ಬೆಟ್ಟ ಬಸ್​ನಲ್ಲಿ ಸಾಮರ್ಥ್ಯಕ್ಕೆ ಮೀರಿ ಜನರು ಪ್ರಯಾಣಿಸಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆ ಮಹಿಳೆಯರೇ ಇದ್ದರು. ಅಲ್ಲದೇ ಬೇರೆ ಯಾತ್ರಾಸ್ಥಳಕ್ಕೆ ಬಸ್​ಗಳಲ್ಲೂ ಇದೇ ದೃಶ್ಯಗಳನ್ನು ನೋಡಬಹುದಿತ್ತು ಎಂದು ಹೇಳಿದ್ದಾರೆ.

ಉಚಿತ ಪ್ರಯಾಣ ಮಾಡಿದ್ದರಿಂದ ಮದುವೆ ಸಮಾರಂಭ, ಪ್ರವಾಸಕ್ಕೆ ಹೆಚ್ಚಾಗಿ ಮಹಿಳೆಯರೇ ತೆರಳುತ್ತಿದ್ದು, ತಮ್ಮ ಲಗೇಜ್ ಜೊತೆಗೆ ಆಧಾರ್ ಕಾರ್ಡ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ 2 ಗಂಟೆ ಪ್ರಯಾಣವಿದ್ದು, ಒಡೆಯರ್ ಎಕ್ಸ್‌ಪ್ರೆಸ್ ಸೇರಿದಂತೆ ಮೈಸೂರು ಮತ್ತು ಬೆಂಗಳೂರು ನಡುವಿನ ಎಲ್ಲ ರೈಲುಗಳು ಬಹುತೇಕ ಖಾಲಿ ಖಾಲಿಯಾಗಿ ಸಂಚರಿಸುತ್ತಿವೆ. ಮುಂಜಾನೆ ನಗರದಿಂದ ಹೊರಡುವ ರೈಲುಗಳನ್ನು ಹೊರತುಪಡಿಸಿ, ಉಳಿದ ಸಮಯದಲ್ಲಿ ಸಂಚರಿಸಿವ ರೈಲುಗಳು ಬಹುತೇಕ ಖಾಲಿಯಾಗಿದ್ದವು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Wed, 14 June 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ