AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್​-ಎಸಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರೈಲ್ವೆ, ಎಸಿ ಬಸ್​ಗಳ ಟಿಕೆಟ್​ ಸಂಗ್ರಹಕ್ಕೆ ಹೊಡೆತ

ಮಹಿಳೆಯರಿಗೆ ಶಕ್ತಿ ಯೋಜನೆಯಡಿ ನಾನ್-ಎಸಿ ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತ ಪ್ರಯಾಣ ಆರಂಭವಾಗಿದೆ. ಇದರಿಂದ ಪ್ರಮುಖ ನಗರಗಳ ರೈಲ್ವೆ ಮತ್ತು ಉನ್ನತ ದರ್ಜೆಯ ವೋಲ್ವೋ ಬಸ್‌ಗಳ ಟಿಕೆಟ್​​ ಹಣ ಸಂಗ್ರಹಕ್ಕೆ ಹೊಡೆತ ಬಿದ್ದಿದೆ.

ನಾನ್​-ಎಸಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರೈಲ್ವೆ, ಎಸಿ ಬಸ್​ಗಳ ಟಿಕೆಟ್​ ಸಂಗ್ರಹಕ್ಕೆ ಹೊಡೆತ
ರೈಲು ಪ್ರಯಾಣ
ವಿವೇಕ ಬಿರಾದಾರ
|

Updated on:Jun 14, 2023 | 11:58 AM

Share

ಮೈಸೂರು: ಮಹಿಳೆಯರಿಗೆ ಶಕ್ತಿ ಯೋಜನೆಯಡಿ (Shakti Yojana) ನಾನ್-ಎಸಿ (Non-AC) ಸರ್ಕಾರಿ ಸಾರಿಗೆ ಬಸ್​ನಲ್ಲಿ (Government Bus) ಉಚಿತ ಪ್ರಯಾಣ ಆರಂಭವಾಗಿದೆ. ಇದರಿಂದ ಪ್ರಮುಖ ನಗರಗಳ ರೈಲ್ವೆ (Train) ಮತ್ತು ಉನ್ನತ ದರ್ಜೆಯ ವೋಲ್ವೋ ಬಸ್‌ಗಳ (Volvo Bus) ಟಿಕೆಟ್​​ ಹಣ ಸಂಗ್ರಹಕ್ಕೆ ಹೊಡೆತ ಬಿದ್ದಿದೆ. ಹೌದು ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಉತ್ಸುಕರಾಗಿದ್ದಾರೆ. ಇದರಿಂದ ರೈಲ್ವೆಯಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಲ್ಲಿ ಶೇ 20ರಷ್ಟು ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಮೈಸೂರಿನಿಂದ ಬೆಂಗಳೂರಿಗೆ, ಮಲೆ ಮಹದೇಶ್ವರ ಬೆಟ್ಟ ಹಾಗೂ ಇತರೆ ಯಾತ್ರಾ ಕೇಂದ್ರಗಳಿಗೆ ತೆರಳುವ ನಾನ್​-ಎಸಿ ಸರ್ಕಾರಿ ಸಾರಿಗೆ ಬಸ್​ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.

ಶಕ್ತಿ ಯೋಜನೆಯ ಎರಡನೇ ದಿನ, ಅನೇಕ ವೋಲ್ವೋ ಬಸ್‌ಗಳು ಪ್ರಯಾಣಿಕರಿಗಾಗಿ ಸಾಕಷ್ಟು ಹೊತ್ತು ಕಾದು ನಿಂತಿರುವುದನ್ನು ಕಾಣಬಹುದಾಗಿತ್ತು. ಹೀಗಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಆರಾಮದಾಯಕ ಮತ್ತು ಸುರಕ್ಷತೆ ದೃಷ್ಟಿಯಿಂದ ಕೆಎಸ್​ಆರ್​ಟಿಸಿ ಹೆಚ್ಚಿನ ನಾನ್​-ಎಸಿ ಬಸ್​​ಗಳನ್ನು ರಸ್ತೆಗೆ ಇಳಿಸಲು ಪರದಾಡಿತು.

ಇದನ್ನೂ ಓದಿ: Free Bus Travel: ಭಾನುವಾರ ಕೇವಲ ಅರ್ಧದಿನದಲ್ಲಿ 5.7 ಲಕ್ಷಕ್ಕೂ ಹೆಚ್ಚು ಮಹಿಳೆಯರು ಶಕ್ತಿ ಯೋಜನೆಯಡಿ ಬಸ್​ಗಳಲ್ಲಿ ಉಚಿತವಾಗಿ ಪಯಣಿಸಿದರು!

ಕೆಎಸ್‌ಆರ್‌ಟಿಸಿ ಚಾಲಕ ರವಿ ಮಾತನಾಡಿ, ಬೆಂಗಳೂರು- ಮಲೆಮಹದೇಶ್ವರ ಬೆಟ್ಟ ಬಸ್​ನಲ್ಲಿ ಸಾಮರ್ಥ್ಯಕ್ಕೆ ಮೀರಿ ಜನರು ಪ್ರಯಾಣಿಸಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆ ಮಹಿಳೆಯರೇ ಇದ್ದರು. ಅಲ್ಲದೇ ಬೇರೆ ಯಾತ್ರಾಸ್ಥಳಕ್ಕೆ ಬಸ್​ಗಳಲ್ಲೂ ಇದೇ ದೃಶ್ಯಗಳನ್ನು ನೋಡಬಹುದಿತ್ತು ಎಂದು ಹೇಳಿದ್ದಾರೆ.

ಉಚಿತ ಪ್ರಯಾಣ ಮಾಡಿದ್ದರಿಂದ ಮದುವೆ ಸಮಾರಂಭ, ಪ್ರವಾಸಕ್ಕೆ ಹೆಚ್ಚಾಗಿ ಮಹಿಳೆಯರೇ ತೆರಳುತ್ತಿದ್ದು, ತಮ್ಮ ಲಗೇಜ್ ಜೊತೆಗೆ ಆಧಾರ್ ಕಾರ್ಡ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ 2 ಗಂಟೆ ಪ್ರಯಾಣವಿದ್ದು, ಒಡೆಯರ್ ಎಕ್ಸ್‌ಪ್ರೆಸ್ ಸೇರಿದಂತೆ ಮೈಸೂರು ಮತ್ತು ಬೆಂಗಳೂರು ನಡುವಿನ ಎಲ್ಲ ರೈಲುಗಳು ಬಹುತೇಕ ಖಾಲಿ ಖಾಲಿಯಾಗಿ ಸಂಚರಿಸುತ್ತಿವೆ. ಮುಂಜಾನೆ ನಗರದಿಂದ ಹೊರಡುವ ರೈಲುಗಳನ್ನು ಹೊರತುಪಡಿಸಿ, ಉಳಿದ ಸಮಯದಲ್ಲಿ ಸಂಚರಿಸಿವ ರೈಲುಗಳು ಬಹುತೇಕ ಖಾಲಿಯಾಗಿದ್ದವು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Wed, 14 June 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು