AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15-18 ವರ್ಷದ ಮಕ್ಕಳಿಗೆ ಲಸಿಕೆ; ಜನವರಿ 1ರಿಂದ ನೋಂದಣಿ ಆರಂಭ

ಜನವರಿ 3ರಿಂದ ಲಸಿಕೆ ನೀಡುತ್ತಿರುವ ಹಿನ್ನೆಲೆ ಲಸಿಕೆ ಪಡೆಯುವುದಕ್ಕೆ ಜನವರಿ 1ರಿಂದ ನೋಂದಣಿ ಆರಂಭವಾಗುತ್ತಿದೆ. ಮಕ್ಕಳ ಆಧಾರ್, ಶಾಲೆ ಐ ಡಿ ಬಳಸಿ ಕೋವಿನ್ ಆ್ಯಪ್​ನಲ್ಲಿ ಹೆಸರು ನೊಂದಾಯಿಸಬಹುದು.

15-18 ವರ್ಷದ ಮಕ್ಕಳಿಗೆ ಲಸಿಕೆ; ಜನವರಿ 1ರಿಂದ ನೋಂದಣಿ ಆರಂಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 28, 2021 | 8:48 AM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ವೈರಸ್ ಹೆಚ್ಚಾಗುತ್ತಿರುವ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಜನವರಿ 3ರಿಂದ ಲಸಿಕೆ ನೀಡುತ್ತಿರುವ ಹಿನ್ನೆಲೆ ಲಸಿಕೆ ಪಡೆಯುವುದಕ್ಕೆ ಜನವರಿ 1ರಿಂದ ನೋಂದಣಿ ಆರಂಭವಾಗುತ್ತಿದೆ. ಮಕ್ಕಳ ಆಧಾರ್, ಶಾಲೆ ಐ ಡಿ ಬಳಸಿ ಕೋವಿನ್ ಆ್ಯಪ್​ನಲ್ಲಿ ಹೆಸರು ನೊಂದಾಯಿಸಬಹುದು. ಕೋವಿನ್ ಆ್ಯಪ್​ನಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಿಭಾಗ ಕೂಡಾ ಸಿದ್ಧಪಡಿಸಲಾಗಿದೆ.

ಮಕ್ಕಳು ನೋಂದಣಿ ಮಾಡಿಕೊಳ್ಳುವುದು ಹೇಗೆ? * 15 ವರ್ಷ ಮೇಲ್ಪಟ್ಟವರು ತಮ್ಮ ಆಧಾರ್ ಸಂಖ್ಯೆ ಬಳಸಬಹುದು. * ಆಧಾರ್ ಇಲ್ಲದೇ ಇರುವವರು ಶಾಲಾ ಗುರುತಿನ ಚೀಟಿ ತೋರಿಸಿ ಕೋವಿನ್ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. * ಕುಟುಂಬಸ್ಥರು ಲಸಿಕೆ ಪಡೆಯುತ್ತಿದ್ದರೆ ಅವರೊಂದಿಗೂ ಹೆಸರು ನೊಂದಾಯಿಸಿಕೊಳ್ಳಬಹುದು. * ತಮ್ಮದೇ ಮೊಬೈಲ್ ನಂಬರ್ ನೀಡಬಹುದು. ಇಲ್ಲದಿದ್ದರೆ ಕುಟುಂಬ ಸದಸ್ಯರು ಒಟ್ಟಾಗಿ ಲಸಿಕೆ ಪಡೆಯುತ್ತಿದ್ದರೆ ಒಂದೇ ನಂಬರ್ ನೀಡಬಹುದು.

ಮನವೋಲಿಸಲು ಬಿಬಿಎಂಪಿ ಸೂಚನೆ ಜನವರಿ 3ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೊವಿಡ್ ಲಸಿಕೆ ಹಾಕಲು ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಲಸಿಕೆ ಪಡೆಯಲು 8 ಲಕ್ಷ ಮಕ್ಕಳು ಅರ್ಹರಾಗಿದ್ದಾರೆ. 100 ಮಕ್ಕಳ ಬ್ಯಾಚ್ ಮಾಡಿ ನಿತ್ಯ ಲಸಿಕೆ ನೀಡಲು ತಯಾರಿ ನಡೆಯುತ್ತಿದೆ. ಕಾಲೇಜುಗಳಲ್ಲಿ ತುರ್ತು ಆ್ಯಂಬುಲೆನ್ಸ್, ವೈದ್ಯರ ನಿಯೋಜನೆ ಮಾಡಲಾಗುತ್ತದೆ. ಸದ್ಯ ಕೆಲ ಕಡೆ ಮಕ್ಕಳಿಗೆ ಲಸಿಕೆ ನೀಡಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದು, ಪೋಷಕರ ಮನವೊಲಿಸುವಂತೆ ಕಾಲೇಜು ಆಡಳಿತ ಮಂಡಳಿಗಳಿಗೆ ಬಿಬಿಎಂಪಿ ಸೂಚಿಸಿದೆ.

ಮೋದಿ ಹೇಳಿದ್ದೇನು? ಡಿಸೆಂಬರ್ 25ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಶಾಲಾ, ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ವ್ಯಾಕ್ಸಿನ್‌ ನೀಡುತ್ತೇವೆ. ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಪ್ರಿಕಾಶನ್ ಡೋಸ್ (ಮುಂಜಾಗರೂಕತೆ ಲಸಿಕೆ) ನೀಡುತ್ತೇವೆ. ದೇಶದಲ್ಲಿ ಲಸಿಕಾಕರಣ ಪ್ರಕ್ರಿಯೆ ಆರಂಭವಾಗಿ 11 ತಿಂಗಳಾಗಿದೆ. ಸಾಮೂಹಿಕ ಇಚ್ಛಾಶಕ್ತಿಯಿಂದ ಕೊರೊನಾ ವಿರುದ್ಧ ನಾವು ಹೋರಾಟ ಮುಂದುವರಿಸಬೇಕಿದೆ. ಕೊವಿಡ್, ಒಮಿಕ್ರಾನ್ ಬಗ್ಗೆ ಆತಂಕಬೇಡ, ಎಚ್ಚರಿಕೆ ಇರಲಿ. ದೇಶದಲ್ಲಿ ಈವರೆಗೆ 141 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಶೇ 61ರಷ್ಟು ಯುವಕರಿಗೆ ಲಸಿಕೆ ನೀಡಲಾಗಿದೆ. ಜನರನ್ನು ಆರೋಗ್ಯವಾಗಿ ಇರಿಸಲು ನಿರಂತರ ಶ್ರಮಿಸುತ್ತಿದ್ದೇವೆ. ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಅಂತ ತಿಳಿಸಿದ್ದರು

ಇದನ್ನೂ ಓದಿ

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

ಲಾಕ್​ಡೌನ್​ ಟೈಮಲ್ಲಿ ಶ್ವಾನಗಳನ್ನು ಬೀದಿಗೆ ತಳ್ಳಿದ ಮಾಲೀಕರು; ಬೆಂಗಳೂರಲ್ಲಿ ಶೇಕಡಾ 49ರಷ್ಟು ಸಾಕುನಾಯಿಗಳು ಬೀದಿಪಾಲು

Published On - 8:45 am, Tue, 28 December 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ