AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi scheme: ಕೊನೆಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕ ಕೊನೆಗೂ ಪ್ರಕಟವಾಗಿದೆ.

Gruha Lakshmi scheme: ಕೊನೆಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಮುಹೂರ್ತ ಫಿಕ್ಸ್
ಗೃಹಲಕ್ಷ್ಮಿ ಯೋಜನೆ
ಕಿರಣ್​ ಹನಿಯಡ್ಕ
| Edited By: |

Updated on: Jul 15, 2023 | 4:51 PM

Share

ಬೆಂಗಳೂರು: ಪ್ರತಿ ಮನೆ ಯಜಮಾನಿಗೆ 2000 ನೀಡುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ(Gruha Lakshmi scheme) ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಂತೂ ಇಂತೂ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 19 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಸಂಜೆ 5.30ಕ್ಕೆ ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಅದೇ ದಿನದಿಂದ ಫಲಾನುಭವಿಯಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಆಗಸ್ಟ್​ 16 ಅಥವಾ 17ರಂದು ಯಜಮಾನಿ ಖಾತೆಗೆ 2000 ರೂ. ಹಣ ಹಾಕುತ್ತೇವೆ ಎಂದು ಈಗಾಗಲೇ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ   ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಮನೆಯೊಡತಿಗೆ ಮಾಸಿಕ ಎರಡು ಸಾವಿರ ರೂ ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಕಾಂಗ್ರೆಸ್​​ನ ರಾಷ್ಟ್ರೀಯ ನಾಯಕರಿಂದ ಜುಲೈ 17 ಅಥವಾ 19ರಂದು ಚಾಲನೆ ಕೊಡಿಸುವ ಚಿಂತನೆಗಳು ನಡೆದಿದ್ದವು. ಈ ಸಂಬಂಧ ಸಿದ್ದರಾಮಯ್ಯನವರು ಸೋನಿಯಾ ಗಾಂಧಿಯವರಿಗೆ ಪತ್ರವನ್ನು ಬರೆದಿದ್ದಾರೆ ಎಂದು  ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದರು. ಒಂದು ವೇಳೆ ರಾಷ್ಟ್ರೀಯ ನಾಯಕರ ಲಭ್ಯತೆಯಿಲ್ಲದಿದ್ದರೆ ಸಿದ್ದರಾಮಯ್ಯನವರೇ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದರು. ಇದೀಗ ರಾಷ್ಟ್ರೀಯ ನಾಯಕರು ಲಭ್ಯ ಇಲ್ಲದ ಕಾರಣ ಸಿದ್ದರಾಮಯ್ಯನವರೇ ಜುಲೈ 19ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇನ್ನು ಈ ಯೋಜನೆಗೆ ಯಾರು ಅರ್ಹರು? ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಎನ್ನುವ ಮಾಹಿತಿಯನ್ನು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸುದ್ದಿಗೋಷ್ಠಿ ನಡೆಸಿ ವಿವರವಾಗಿ ಹೇಳಿದ್ದಾರೆ.

ಈ ಯೋಜನೆಗೆ ಯಾರು ಅರ್ಹರು?

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರರಾಗಿರತಕ್ಕದ್ದಲ್ಲ. ರೇಷನ್ ಕಾರ್ಡ್​ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್​ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನೀಡಿದ್ದಾರೆ.

ಗೊಂದಲ ಇದ್ದರೆ ಸಹಾಯವಾಣಿಗೆ ಕರೆ ಮಾಡಿ

ಫಲಾನುಭವಿಯು ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಗೆ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು. ನಿಗದಿಪಡಿಸಿದ ದಿನಾಂಕದಂದು ನೋಂದಣಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?