AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಉದ್ಯಾನವನ ವಿಧೇಯಕ ವಾಪಸ್ ಕಳಿಸಲು ರಾಜ್ಯಪಾಲರಿಗೆ ತೇಜಸ್ವಿ ಸೂರ್ಯ ಮನವಿ

ಕರ್ನಾಟಕ ಉದ್ಯಾನವನ ವಿಧೇಯಕ ವಾಪಸ್ ಕಳಿಸಲು ರಾಜ್ಯಪಾಲರಿಗೆ ತೇಜಸ್ವಿ ಸೂರ್ಯ ಮನವಿ

ಗಣಪತಿ ಶರ್ಮಾ
|

Updated on: Aug 25, 2026 | 10:59 AM

Share

ಕರ್ನಾಟಕ ಉದ್ಯಾನವನಗಳ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ಪಾರ್ಕ್‌ನ ಶೇ 5ರಷ್ಟು ಭೂಮಿ ಪರಭಾರೆ ಮಾಡಲು ಅವಕಾಶ ನೀಡುವ ಈ ವಿಧೇಯಕವನ್ನು ಸರ್ಕಾರಕ್ಕೆ ಮರುಪರಿಶೀಲನೆಗಾಗಿ ಹಿಂದಿರುಗಿಸುವಂತೆ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ವಿಪಕ್ಷಗಳು ಕೂಡ ಈ ವಿಧೇಯಕವನ್ನು ತೀವ್ರವಾಗಿ ವಿರೋಧಿಸುತ್ತಿವೆ.

ಬೆಂಗಳೂರು, ಆಗಸ್ಟ್ 25: ಕರ್ನಾಟಕ ಉದ್ಯಾನವನಗಳ ವಿಧೇಯಕಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ವಿಧೇಯಕವನ್ನು ಸರ್ಕಾರಕ್ಕೆ ಮರುಪರಿಶೀಲನೆಗಾಗಿ ವಾಪಸ್ ಕಳುಹಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ವಿಧೇಯಕದಲ್ಲಿ ಪಾರ್ಕ್‌ಗಳ ಶೇ 5ರಷ್ಟು ಭೂಮಿಯನ್ನು ಪರಭಾರೆ ಮಾಡಲು ಅವಕಾಶ ನೀಡುವ ಪ್ರಸ್ತಾಪವಿದೆ. ಸರ್ಕಾರದ ಈ ನಿರ್ಧಾರದಿಂದ ಸಾರ್ವಜನಿಕ ಉದ್ಯಾನವನಗಳ ಸ್ವರೂಪಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಪತ್ರದಲ್ಲಿ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಪಾರ್ಕ್‌ಗಳ ಭೂಮಿ ಪರಭಾರೆಗೆ ಅವಕಾಶ ಕಲ್ಪಿಸುವ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಬಾರದು ಮತ್ತು ಅದನ್ನು ಸರ್ಕಾರಕ್ಕೆ ಹಿಂದಿರುಗಿಸಬೇಕು ಎಂದು ಅವರು ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us