AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಗುಂಡೇಟು, ಬಂಧನ

ರೇಖಾ ಕದಿರೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ರೇಖಾ ಕದಿರೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಗುಂಡೇಟು, ಬಂಧನ
ರೇಖಾ ಕದಿರೇಶ್ ಹತ್ಯೆ ಆರೋಪಿಗಳು ಪೀಟರ್ ಮತ್ತು ಸೂರ್ಯ
TV9 Web
| Edited By: |

Updated on:Jun 25, 2021 | 3:11 PM

Share

ಬೆಂಗಳೂರು: ರೇಖಾ ಕದಿರೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಹತ್ಯೆ ಪ್ರಕರಣದಲ್ಲಿ ಅನುಮಾನಿತರನ್ನು ಪಟ್ಟಿ ಮಾಡಲಾಗಿತ್ತು. ಪೀಟರ್, ಸೂರ್ಯ ಎಂಬುವವರ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು ಎಂದು ಮಾಹಿತಿ ನೀಡಿದರು.

ಪೊಲೀಸರು ಬಹಳ ಶ್ರಮವಹಿಸಿ ಆರೋಪಿಗಳನ್ನು ಹುಡುಕಿದ್ದರು. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿತ್ತು. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿರುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಕಮಲ್ ಪಂತ್ ತಿಳಿಸಿದರು.

ಅನಿವಾರ್ಯ ಪರಿಸ್ಥಿತಿಯಲ್ಲಿ ಪೊಲೀಶರು ಆರೋಪಿಗಳ ಕಾಲಿಗೆ ಗುಂಡುಹಾರಿಸಬೇಕಾಯಿತು ಎಂದು ಕಮಲ್ ಪಂತ್ ತಿಳಿಸಿದರು. ಆರೋಪಿಗಳು ಬಹಳ ಸಮಯದಿಂದ ರೇಖಾ ಜೊತೆಯಿದ್ದರು. ರೇಖಾ ಕದಿರೇಶ್​ ಕೊಲೆಗೆ ಕಾರಣದ ಬಗ್ಗೆ ಇನ್ನೂ ವಿಸ್ತೃತ ತನಿಖೆಯಾಗಬೇಕಿದೆ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಇನ್ನೂ ಹಲವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಕಮಲ್ ಪಂತ್​ ನುಡಿದರು.

ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಪೀಟರ್ ಮತ್ತು ಸೂರ್ಯ ಅವರನ್ನು ಲಕ್ಷ್ಮೀ ಆಸ್ಪತ್ರೆಯಿಂದ ಸಂಜಯ್ ಗಾಂಧಿ ಆಸ್ಪತ್ರೆಗೆ ಪೊಲೀಸರು ಶಿಫ್ಟ್ ಮಾಡಿದ್ದಾರೆ.

ನಾಲ್ವರು ವಶಕ್ಕೆ ಹಾಡಹಗಲೇ BBMP ಮಾಜಿ ಸದಸ್ಯೆ ರೇಖಾ ಕದಿರೇಶ್​ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್‌ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರು ಅರೆಸ್ಟ್ ಆಗಿದ್ದಾರೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.

(Rekha Kadiresh murder case Bangalore city police arrested 2 culprits)

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ: ಎಫ್ಐಆರ್ ದಾಖಲು; ಆರೋಪಿಗಳು ಯಾರು ಗೊತ್ತಾ?

ಇದನ್ನೂ ಓದಿ: Rekha Kadiresh ಖಾಕಿ ತನಿಖೆಯಲ್ಲಿ ಬಯಲಾಯ್ತಾ ರೇಖಾ ಕದಿರೇಶ್ ಹತ್ಯೆ ಹಿಂದಿನ ಕಾರಣ? ಇಬ್ಬರ ಮೇಲೆ ಅನುಮಾನ

Published On - 2:25 pm, Fri, 25 June 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!