AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಕುಟುಂಬದ ನಾಲ್ವರು ಅರೆಸ್ಟ್

ಕದಿರೇಶ್ ಮರಣದ ನಂತರ ಕದಿರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು. ಕದಿರೇಶ್ ಸಂಪಾದನೆ ಮಾಡಿದ್ದ ಆಸ್ತಿ, ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದಿರೇಶ್ ಕುಟುಂಬವನ್ನು ಬಿಟ್ಟು ಒಂಟಿಯಾಗಿದ್ದರು.

Rekha Kadiresh ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಕುಟುಂಬದ ನಾಲ್ವರು ಅರೆಸ್ಟ್
ರೇಖಾ ಕದಿರೇಶ್ ದಂಪತಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 25, 2021 | 9:52 AM

Share

ಬೆಂಗಳೂರು: ಹಾಡಹಗಲೇ BBMP ಮಾಜಿ ಸದಸ್ಯೆ ರೇಖಾ ಕದಿರೇಶ್ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್‌ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರು ಅರೆಸ್ಟ್ ಆಗಿದ್ದಾರೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.

ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಇನ್ನು ಕದಿರೇಶ್ ಮರಣದ ನಂತರ ಕದಿರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು. ಕದಿರೇಶ್ ಸಂಪಾದನೆ ಮಾಡಿದ್ದ ಆಸ್ತಿ, ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದಿರೇಶ್ ಕುಟುಂಬವನ್ನು ಬಿಟ್ಟು ಒಂಟಿಯಾಗಿದ್ದರು. ಕದಿರೇಶ್ ಕುಟುಂಬ ಹಾಗು ಕದಿರೇಶ್ ಜೊತೆಗಿದ್ದ ಯಾರಿಗೂ ಸೊಪ್ಪು ಹಾಕುತ್ತಿರಲಿಲ್ಲ. ಕದಿರೇಶ್ ಜೊತೆಗಿದ್ದ ಯಾರಿಗೂ ಹಣಕಾಸಿನ ಸಹಾಯ ಮಾಡುತ್ತಿರಲಿಲ್ಲ.

ರೇಖಾ ಬಿಜೆಪಿ ಹಿರಿಯ ನಾಯಕರ ಜೊತೆಗೆ ಒಳ್ಳೆಯ ಸಂಪರ್ಕ ಹೊಂದಿದ್ದರು. ಇದು ಎಲ್ಲರಿಗೂ ಕಂಗೆಡುವಂತೆ ಮಾಡಿತ್ತು. ಕದಿರೇಶ್ ತಮ್ಮ ಸುರೇಶ್ ಹಾಗೂ ಅಕ್ಕ ಮಾಲ ಕುಟುಂಬದ ಕಷ್ಟಗಳಿಗೆ ರೇಖಾ ಸಹಾಯ ಮಾಡಿರಲಿಲ್ಲ. ಹೀಗಾಗಿ ಕುಟುಂಬಸ್ಥರಿಗೆ ರೇಖಾ ಮೇಲೆ ಬೇಸರವಿತ್ತು. ಅಲ್ಲದೆ ಮುಂದಿನ ಚುನಾವಣೆಗೆ ನಿಲ್ಲುವ ಪ್ಲಾನ್ ಮಾಡಿಕೊಂಡಿದ್ದ ರೇಖಾ ಚುನಾವಣೆಯಲ್ಲಿ ಗೆದ್ದರೆ ಮತ್ತಷ್ಟು ದೂರವಾಗಿ ಒಬ್ಬಳೇ ಬೆಳೆದುಬಿಡುತ್ತಾಳೆ ಎಂಬ ಕಿಚ್ಚು ಕುಟುಂಬಸ್ಥರಲಿತ್ತು. ಇದೇ ಕಾರಣಕ್ಕೆ ಕದಿರೇಶ್ ಕುಟುಂಬ ಹಾಗೂ ಕದಿರೇಶ್ ಅಪ್ತ ಹುಡುಗರಿಗೆ ರೇಖಾ ವಿರುದ್ಧ ಕೋಪ ಇತ್ತು.

ಎಲ್ಲರೂ ಬೇಸತ್ತಿ ರೇಖಾ ಇದ್ದರೆ ಅವಳು ಬೆಳೆದು ಯಾರ ಕೈಗೂ ಸಿಗದಂತೆ ಅಗ್ತಾಳೆ. ಅವಳನ್ನೆ ಮುಗಿಸಿ ಬಿಡುವ ಎಂದು ಪ್ಲಾನ್ ಮಾಡಿದ್ದಾರೆ. ಕದಿರೇಶ್ ತಮ್ಮ ಸುರೇಶ್, ಅಕ್ಕ ಮಾಲ, ಮಾಲ ಪುತ್ರ ಅರೂಳ್ ಸೇರಿ ರೇಖಾ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಪೀಟರ್ ಮತ್ತು ಸೂರಿ ಎಮಬ ಇಬ್ಬರು ಕೃತ್ಯ ಎಸಗಿದ್ದಾರೆ. ಸದ್ಯ ಕದಿರೇಶ್ ಅಕ್ಕ ಮಾಲ, ಮಾಲ ಮಗ ಅರೂಳ್ ಹಾಗು ಕದಿರೇಶ್ ತಮ್ಮ ಸುರೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡಿದ ಪೀಟರ್ ಹಾಗೂ ಸೂರ್ಯನಿಗಾಗಿ ಹುಡುಕಾಟ ಮುಂದುವರೆದಿದೆ.

ಇದನ್ನೂ ಓದಿ: Rekha Kadiresh ಖಾಕಿ ತನಿಖೆಯಲ್ಲಿ ಬಯಲಾಯ್ತಾ ರೇಖಾ ಕದಿರೇಶ್ ಹತ್ಯೆ ಹಿಂದಿನ ಕಾರಣ? ಇಬ್ಬರ ಮೇಲೆ ಅನುಮಾನ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?