AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh: ರೇಖಾ ಕದಿರೇಶ್ ಕೊಲೆ ಪ್ರಕರಣದ ಆಘಾತಕಾರಿ ಮಾಹಿತಿ, ಹಂತಕರು ಒಟ್ಟು ಮೂರು ಹತ್ಯೆಗೆ ಸ್ಕೆಚ್​ ಹಾಕಿದ್ದರಂತೆ!

ಕದಿರೇಶ್ನನ್ನು ಕೊಂದವರನ್ನು ಕೊಲೆ ಮಾಡಬೇಕು ಸಹಾಯ ಮಾಡು ಎಂದು ಮೊದಲು ಪೀಟರ್, ರೇಖಾಳನ್ನೆ ಕೇಳಿದ್ದ. ಅಣ್ಣ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಬೇಕು ಸಹಾಯ ಮಾಡಿ ಎಂದು ರೇಖಾರನ್ನು ಬೇಡಿಕೊಂಡಿದ್ದ. ಅದ್ರೆ ಇದಕ್ಕೆ ರೇಖಾ ತಾನು ಯಾವುದೆ ಸಹಕಾರ ಕೊಡಲ್ಲಾ ಎಂದಿದ್ರು.

Rekha Kadiresh: ರೇಖಾ ಕದಿರೇಶ್ ಕೊಲೆ ಪ್ರಕರಣದ ಆಘಾತಕಾರಿ ಮಾಹಿತಿ, ಹಂತಕರು ಒಟ್ಟು ಮೂರು ಹತ್ಯೆಗೆ ಸ್ಕೆಚ್​ ಹಾಕಿದ್ದರಂತೆ!
ರೇಖಾ ಕದಿರೇಶ್ ದಂಪತಿ
TV9 Web
| Edited By: |

Updated on:Jul 01, 2021 | 12:40 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿಯೊಂದು ಬಯಲಾಗಿದೆ. ಪೀಟರ್ ಅಂಡ್ ಟೀಮ್ ಮಾಡಿದ್ದು ಒಂದು ಕೊಲೆ. ಆದ್ರೆ ಮಾಡಬೇಕು ಎಂದುಕೊಂಡಿದ್ದು ಮೂರು ಕೊಲೆ ಎಂಬುವುದು ತಿಳಿದು ಬಂದಿದೆ. ಅಸಲಿಗೆ ಹಂತಕರ ಗುರಿ ರೇಖಾ ಆಗಿರಲೇ ಇಲ್ಲವಂತೆ.

ಕದಿರೇಶ್ ಕೊಲೆ ಮಾಡಿದವರಿಗಾಗಿ ಹೊಂಚು ಪೀಟರ್ ಕದಿರೇಶ್ನ ಪಕ್ಕ ಶಿಷ್ಯನಾಗಿದ್ದ. ಹೀಗಾಗಿ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಮೂರು ಜನರನ್ನು ಕೊಲೆ ಮಾಡಲು ಪೀಟರ್ ತೀರ್ಮಾನಿಸಿದ್ದ. ಕದಿರೇಶ್ ಹತ್ಯೆಗೆ ಕಾರಣವಾಗಿದ್ದು ಗಾರ್ಡನ್ ಶಿವ, ನವೀನ್ ಮತ್ತು ವಿನಯ್ ಎಂಬ ಮೂವರು. ಜೋಪಡಿ ರಾಜೇಂದ್ರನ ಹತ್ಯೆಗೆ ಪ್ರತಿಕಾರವಾಗಿ ಗಾರ್ಡನ್ ಶಿವನ ಅಕ್ಕನ ಮಕ್ಕಳಾದ ನವೀನ್ ಮತ್ತು ವಿನಯ್ ಸೇರಿ ಕದಿರೇಶ್ನ ಕೊಂದಿದ್ರು. ಹೀಗಾಗಿ ಕದಿರೇಶ್ ಹತ್ಯೆಗೆ ಕಾರಣರಾದವರನ್ನ ಮುಗಿಸಲು ಪೀಟರ್ ಹಲ್ಲು ಮಸೆಯುತ್ತಿದ್ದ. ಗಾರ್ಡನ್ ಶಿವ, ವಿನಯ್, ನವೀನ್ ಕೊಲೆ ಮಾಡಬೇಕು ಎಂದು ಪೀಟರ್ & ಟೀಂ ತಯಾರಿ ಮಾಡಿಕೊಳ್ಳುತ್ತಿತ್ತು.

ಕದಿರೇಶ್ನನ್ನು ಕೊಂದವರನ್ನು ಕೊಲೆ ಮಾಡಬೇಕು ಸಹಾಯ ಮಾಡು ಎಂದು ಮೊದಲು ಪೀಟರ್, ರೇಖಾಳನ್ನೆ ಕೇಳಿದ್ದ. ಅಣ್ಣ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಬೇಕು ಸಹಾಯ ಮಾಡಿ ಎಂದು ರೇಖಾರನ್ನು ಬೇಡಿಕೊಂಡಿದ್ದ. ಅದ್ರೆ ಇದಕ್ಕೆ ರೇಖಾ ತಾನು ಯಾವುದೆ ಸಹಕಾರ ಕೊಡಲ್ಲಾ ಎಂದಿದ್ರು. ರೌಡಿಸಂ ಐಡಿಯಾ ಇಲ್ಲದ ರೇಖಾ, ಪೀಟರ್ ಮನವಿಯನ್ನ ತಿರಸ್ಕರಿಸಿದ್ದರು. ಈ ವಿಚಾರಕ್ಕೆ ರೇಖಾ ಮೇಲೆ ಪೀಟರ್ಗೆ ಕೋಪವಿತ್ತು. ಇದೆ ಸಮಯದಲ್ಲಿ ಅರೂಣ್ ಕಳೆದ ನಾಲ್ಕು ತಿಂಗಳ ಹಿಂದೆ ಜೈಲಿನಿಂದ ಹೊರಬಂದಿದ್ದ.

ಜೈಲಿನಿಂದ ಹೊರ ಬಂದು ಕದಿರೇಶ್ ಕೊಲೆಗೆ ರೇಖಾ ಕಾರಣ ಎಂದಿದ್ದ. ಆಕೆ ಕದಿರೇಶ್ ಕೊಲೆ ಮಾಡಲು ನವೀನ್, ವಿನಯ್ಗೆ ಸಹಾಯ ಮಾಡಿದ್ದಾಳೆ ಎಂದಿದ್ದ. ಅರೂಣ್ ಮತ್ತು ಮಾಲಾ 4 ತಿಂಗಳ ಹಿಂದೆ ಪೀಟರ್ ಅಂಡ್ ಟೀಮ್ ಜೊತೆ ಮೀಟಿಂಗ್ ಮಾಡಿದ್ದರು. ಮೀಟಿಂಗ್ನಲ್ಲಿ ಪೀಟರ್, ಗಾರ್ಡನ್ ಶಿವನ ಬಗ್ಗೆ ಹೇಳಿದ್ದ. ಅದೇ ಮೀಟಿಂಗ್ನಲ್ಲಿ ಅರೂಣ್ ರೇಖಾ ಬಗ್ಗೆ ಕೂಡ ಸ್ಕೆಚ್ ಹಾಕಿದ್ದ. ಗಾರ್ಡನ್ ಶಿವ ಮತ್ತು ವಿನಯ್ ರನ್ನ ನಂತ್ರ ಮುಗಿಸೋಣ. ಮೊದಲು ರೇಖಾಳನ್ನ ಮುಗಿಸೋಣ ಎಂದು ಮಾತನಾಡಿ ಮೀಟಿಂಗ್ ಮುಗಿಸಿದ್ರು. ಹಲವು ದಿನಗಳ ಕಾಲ ರೇಖಾಳ ದಿನಚರಿ ಅವರು ಯಾವಾಗ ಒಂಟಿಯಾಗಿರುತ್ತಾರೆ ಎಂದು ಗಮನಿಸಿದ್ರು. ಊಟ ನೀಡಿ ವಾಪಸ್ಸು ಹೋಗುವ ಸಮಯದಲ್ಲಿ ಜನರು ಕಡಿಮೆ ಇರ್ತಾರೆ ಅವಾಗ ಕೊಲೆ ಮಾಡೋದು ಎಂದು ಪ್ಲಾನ್ ಫಿಕ್ಸ್ ಮಾಡಿದ್ರು. ಈ ರೀತಿ ಮೃತ ಕದಿರೇಶ್ ಪತ್ನಿ ರೇಖಾ ಕದಿರೇಶ್ರ ಕೊಲೆ ಮಾಡಲಾಗಿದೆ. ಈ ಕೊಲೆಯ ಬಳಿಕ ನಗರದಲ್ಲಿ ಮತ್ತೆ ಮೂರು ಕೊಲೆ ನಡೆಯುವ ಸಾಧ್ಯತೆ ಇತ್ತು. ಸದ್ಯ ಪೊಲೀಸರ ತನಿಖೆಯಿಂದ ಈ ಮೂವರ ಕೊಲೆ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

(Rekha Kadiresh Murder Updates peter and team has planned for 3 more murders in bengaluru)

Published On - 11:57 am, Thu, 1 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್