AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ರಾತ್ರೋರಾತ್ರಿ ಬಾಲ್ಯ ವಿವಾಹಕ್ಕೆ ಯತ್ನ; ಹಲವರನ್ನು ಬಂಧಿಸಿದ ಪೊಲೀಸರು

ಲಾಕ್​ಡೌನ್​ ನಡುವೆ ಬಾಲ್ಯ ವಿವಾಹಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅದೇ ರೀತಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕೊರಟೀಕೆರೆ ಬಳಿಯ ಕನ್ನೇಶ್ವರ ದೇವಾಲಯದಲ್ಲಿ ರಾತ್ರೋರಾತ್ರಿ ಅಪ್ತಾಪ್ತ ಬಾಲಕಿಯ ವಿವಾಹಕ್ಕೆ ಯತ್ನಿಸಿದ್ದಾರೆ. ಆದರೆ ಬಾಲಕಿಯ ತಂದೆ ಸಹಾಯದಿಂದ ಪೊಲೀಸರು ಮತ್ತು ಅಧಿಕಾರಿಗಳು ಮದುವೆಯನ್ನು ತಡೆದಿದ್ದಾರೆ.

ಮಂಡ್ಯದಲ್ಲಿ ರಾತ್ರೋರಾತ್ರಿ ಬಾಲ್ಯ ವಿವಾಹಕ್ಕೆ ಯತ್ನ; ಹಲವರನ್ನು ಬಂಧಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jun 17, 2021 | 11:50 AM

Share

ಮಂಡ್ಯ: ಬಾಲ್ಯ ವಿವಾಹ ಎಂಬ ಕೆಟ್ಟ ಪದ್ಧತಿ ರಾಜ್ಯದಲ್ಲಿ ಇನ್ನೂ ಇದೆ. ಜನರಿಗೆ ಬಾಲ್ಯ ವಿವಾಹದ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುತ್ತಿದ್ದರು, ಯಾವುದೇ ಪ್ರಯೋಜನವಾಗುತ್ತಿಲ್ಲ. ಪ್ರತಿದಿನ ರಾಜ್ಯದಲ್ಲಿ ಒಂದಲ್ಲ ಒಂದು ಕಡೆ ಬಾಲ್ಯ ವಿವಾಹ ನಡೆಯುತ್ತಲೇ ಇದೆ. ಬಾಲ್ಯ ವಿವಾಹದ ಬಗ್ಗೆ ಮಾಹಿತಿ ಸಿಕ್ಕಾಗ ಅಧಿಕಾರಿಗಳು ಸ್ಥಳಕ್ಕೆ ಹೋಗಿ ನಿಲ್ಲಿಸುತ್ತಿದ್ದಾರೆ. ಮದುವೆಯನ್ನು ತಡೆಯುವ ಜೊತೆಗೆ ಅಧಿಕಾರಿಗಳು ಪೋಷಕರಿಗೆ ಬುದ್ಧಿ ಮಾತುಗಳನ್ನು ಹೇಳುತ್ತಿದ್ದಾರೆ. ಅದರೆ ಅಧಿಕಾರಿಗಳ ಗಮನಕ್ಕೆ ಬಾರದೆ ಅದೆಷ್ಟೋ ವಿವಾಹಗಳು ಈಗಾಗಲೇ ನಡೆದು ಹೋಗಿವೆ.

ಲಾಕ್​ಡೌನ್​ ನಡುವೆ ಬಾಲ್ಯ ವಿವಾಹಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅದೇ ರೀತಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕೊರಟೀಕೆರೆ ಬಳಿಯ ಕನ್ನೇಶ್ವರ ದೇವಾಲಯದಲ್ಲಿ ರಾತ್ರೋರಾತ್ರಿ ಅಪ್ತಾಪ್ತ ಬಾಲಕಿಯ ವಿವಾಹಕ್ಕೆ ಯತ್ನಿಸಿದ್ದಾರೆ. ಆದರೆ ಬಾಲಕಿಯ ತಂದೆ ಸಹಾಯದಿಂದ ಪೊಲೀಸರು ಮತ್ತು ಅಧಿಕಾರಿಗಳು ಮದುವೆಯನ್ನು ತಡೆದಿದ್ದಾರೆ. ಕೋಣನ ಕೊಪ್ಪಲು ಗ್ರಾಮದ 16 ವರ್ಷದ ಅಪ್ರಾಪ್ತೆಗೆ 36 ವರ್ಷ ವಯಸ್ಸಿನವನ ಜೊತೆಗೆ ಮದುವೆಗೆ ಸಿದ್ಧತೆ ನಡೆದಿತ್ತು.

ಕೊಪ್ಪಲು ಗ್ರಾಮದ ಅಪ್ರಾಪ್ತೆಯನ್ನು ಗೋವಿಂದೇಗೌಡನ ಕೊಪ್ಪಲು ಗ್ರಾಮದ ಮಹೇಶ್ ಜೊತೆಗೆ ಮದುವೆಗೆ ಯತ್ನಿಸಿದ್ದರು. ಬೆಳಿಗ್ಗೆ 3 ಗಂಟೆಗೆ ವಿವಾಹ ಮಾಡಲು ಸಕಲ ಸಿದ್ಧತೆಯೂ ನಡೆದಿತ್ತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಅಲ್ಲಿಂದ ವಧು,ವರನ ಕಡೆಯವರು ಕಾಲ್ಕಿತ್ತಿದ್ದರು. ನಂತರ ಚಿಕ್ಕೋಸಹಳ್ಳಿಯ ದೊಡ್ಡಕೇರಮ್ಮ ದೇವಸ್ಥಾನದಲ್ಲಿ ವಿವಾಹ ಮಾಡಲು ಮುಂದಾಗಿದ್ದರು. ಪೊಲೀಸರು ಬರುವ ವಿಚಾರ ತಿಳಿದು ಸಂಬಂಧಿಕರು ಅಲ್ಲಿಂದಲೂ ಎಸ್ಕೇಪ್ ಆಗಿದ್ದರು.

ಕೆಆರ್ ಪೇಟೆ ಪಟ್ಟಣ ಠಾಣೆ ಪೊಲೀಸರು ಅಜ್ಞಾತ ಸ್ಥಳದಲ್ಲಿದ್ದ ಬಾಲಕಿಯನ್ನ ರಕ್ಷಿಸಿ, ಹಲವರನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ಆ ವರನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ

ಮೈಸೂರಿನಲ್ಲಿ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮದುವೆಗೆ ಸಿದ್ಧತೆ; ಸ್ನೇಹಿತೆಯಿಂದ ನಿಂತ ಬಾಲ್ಯ ವಿವಾಹ

ಬಾಲ್ಯ ವಿವಾಹ ತಡೆಗೆ ಸುರಕ್ಷಿಣಿ ವೆಬ್​ಸೈಟ್ ಆರಂಭ; ಮೌಢ್ಯ ಪದ್ಧತಿ ನಿವಾರಣೆಗೆ ಬಾಗಲಕೋಟೆ ಜಿಲ್ಲಾಡಳಿತದಿಂದ ನೂತನ ಪ್ರಯೋಗ

(relatives had tried to marry an Minor girl In Mandya)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್