AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಮಹಿಳೆ ಬಲಿ; ಸಂಬಂಧಿಕರ ಆರೋಪ

ಅಲ್ಟರ್ನೇಟಿವ್ ಆಕ್ಸಿಜನ್ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರು ಸಿಬ್ಬಂದಿ ಬಳಿ ಕೇಳಿಕೊಂಡರು ಸಿಬ್ಬಂದಿ ಮಾತ್ರ ಕ್ಯಾರೆ ಅನ್ನಲಿಲ್ಲ. ಇದೇ ವೇಳೆ ಉಸಿರಾಟದ ಸಮಸ್ಯೆ ಆಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಗದಗ ಜೀಮ್ಸ್ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಮಹಿಳೆ ಬಲಿ; ಸಂಬಂಧಿಕರ ಆರೋಪ
ಮೃತ ಮಹಿಳೆ ಸುಮಿತ್ರಾ ಮನ್ನೂರ
sandhya thejappa
|

Updated on:May 19, 2021 | 12:07 PM

Share

ಗದಗ: ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಉಸಿರಾಟ ಸಮಸ್ಯೆಯಿಂದ ಒದ್ದಾಡುತ್ತಿದ್ದ ಸುಮಿತ್ರಾ ಮನ್ನೂರ ಎಂಬ ಮಹಿಳೆ ಆಕ್ಸಿಜನ್ ಸಿಗದೆ ಮಹಿಳೆ ನರಳಿ ನರಳಿ ಮೃತಪಟ್ಟಿದ್ದಾರೆ ಎಂದು ಮಹಿಳೆ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಮಹಿಳೆ ಆಕ್ಸಿಜನ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಸಿಜನ್ ತೆಗೆದು ಬೇರೆ ಮಷಿನ್ನನ್ನು ಅಳವಡಿಸಲು ಆಸ್ಪತ್ರೆ ಸಿಬ್ಬಂದಿ ಬಂದಿದ್ದರು. ಅಲ್ಟ್ರನೇಟಿವ್ ಆಕ್ಸಿಜನ್ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರು ಗೋಗರೆದರೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ.

ಅಲ್ಟರ್ನೇಟಿವ್ ಆಕ್ಸಿಜನ್ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರು ಸಿಬ್ಬಂದಿ ಬಳಿ ಕೇಳಿಕೊಂಡರು ಸಿಬ್ಬಂದಿ ಮಾತ್ರ ಕ್ಯಾರೆ ಅನ್ನಲಿಲ್ಲ. ಇದೇ ವೇಳೆ ಉಸಿರಾಟದ ಸಮಸ್ಯೆ ಆಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಗದಗ ಜೀಮ್ಸ್ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆಗೆ ನಸುಕಿನ ಜಾವ 4.30 ಗಂಟೆ ಸುಮಾರಿಗೆ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಕಣ್ಣು ಮುಂದೆಯೇ ಅಕ್ಕನ ಜೀವ ಹೋಗಿದ್ದನ್ನು ಕಂಡು ಸಹೋದರಿ ಕಣ್ಣೀರು ಹಾಕಿದ್ದಾರೆ. ಧಾರವಾಡ ಪಾಲಿಕೆ ಬಿಲ್ ಕಲೆಕ್ಟರ್ ಕೊರೊನಾಗೆ ಬಲಿ ಧಾರವಾಡ: ಪಾಲಿಕೆಯ ಬಿಲ್ ಕಲೆಕ್ಟರ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಮಹಾನಗರ ಪಾಲಿಕೆಯ 3ನೇ ವಲಯದ ಸಿಬ್ಬಂದಿಯಾದ ರಾಜು ಅಷ್ಟೇಕರ್ ಮಹಾಮಾರಿ ಕೊರೊನಾದಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 40 ವರ್ಷದ ರಾಜುಗೆ 10 ದಿನಗಳ ಹಿಂದೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಲಸಿಕೆ ಹಾಕಿಸಿಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದರು ರಾಜು ನಿರ್ಲಕ್ಷ್ಯ ತೋರಿದ್ದರು.

ಇದನ್ನೂ ಓದಿ

ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ; ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಆಕ್ರೋಶ

ಹಾಸನದಲ್ಲಿ ರೈಲಿಗೆ ಸಿಲುಕಿ ಕಾಡಾನೆ ಸಾವು; ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ

(relatives of deceased woman have expressed outrage against staff of Gadag GIMS Hospital)

Published On - 12:06 pm, Wed, 19 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ