AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರಿಗೆ ತಕ್ಷಣ ಗೌರವಧನ ಬಿಡುಗಡೆಗೆ ಸಚಿವ ಸುಧಾಕರ್ ಸೂಚನೆ

ಮೂರು ತಿಂಗಳಿಂದ ನಮಗೆ ಗೌರವಧನ ಬಿಡುಗಡೆಯಾಗಿಲ್ಲ. ಜೀವನ ನಡೆಸುವುದು ಹೇಗೆ. ದಯವಿಟ್ಟು ನಮ್ಮ ಸಮಸ್ಯೆ ಪರಿಹರಿಸಿ ಎಂದು ಆಶಾ ಕಾರ್ಯಕರ್ತೆಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರಿಗೆ ತಕ್ಷಣ ಗೌರವಧನ ಬಿಡುಗಡೆಗೆ ಸಚಿವ ಸುಧಾಕರ್ ಸೂಚನೆ
ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.
Ghanashyam D M | ಡಿ.ಎಂ.ಘನಶ್ಯಾಮ
|

Updated on:May 31, 2021 | 8:03 PM

Share

ಚಿಕ್ಕಬಳ್ಳಾಪುರ: ಮೂರು ತಿಂಗಳಿಂದ ನಮಗೆ ಗೌರವಧನ ಬಿಡುಗಡೆಯಾಗಿಲ್ಲ. ಜೀವನ ನಡೆಸುವುದು ಹೇಗೆ. ದಯವಿಟ್ಟು ನಮ್ಮ ಸಮಸ್ಯೆ ಪರಿಹರಿಸಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲೆಯ ಮಂಚೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಸುಧಾಕರ್ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಫೋನ್ ಮಾಡಿ ತಕ್ಷಣ ಗೌರವಧನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ‘ವೈದ್ಯರ ನಡೆ ಹಳ್ಳಿಗಳ ನಡೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಈ ಘಟನೆ ನಡೆಯಿತು. ಕಳೆದ ಎರಡು ತಿಂಗಳಿಂದ ಕೊವಿಡ್ ನಿರ್ವಹಣೆ ಭತ್ಯೆ ಕೊಟ್ಟಿಲ್ಲ, ಮೂರು ತಿಂಗಳಿನಿಂದ ಗೌರವಧನ ಬಿಡುಗಡೆಯಾಗಿಲ್ಲ. ನಾವು ಹೇಗೆ ಬದುಕೋದು ಎಂದು ಆಶಾ ಕಾರ್ಯಕರ್ತೆಯರು ಪ್ರಶ್ನಿಸಿದರು. 24 ಗಂಟೆಯೊಳಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಆಯುಕ್ತರಿಗೆ ತಾಕೀತು ಮಾಡಿದರು.

ಪ್ರತಿ ತಿಂಗಳಿಗೆ ₹ 4 ಸಾವಿರ ಗೌರವಧನ ನೀಡಬೇಕು. ಕಳೆದ ಮೂರು ತಿಂಗಳಿಂದ ಪ್ರತಿ ಆಶಾ ಕಾರ್ಯಕರ್ತೆಯರಿಗೆ ₹ 12 ಸಾವಿರ ಬಾಕಿಯಿದೆ. ಇದನ್ನು ಪರಿಹರಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು. ಈ ವೇಳೆ ಸ್ಪಷ್ಟನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಕಬಾಡೆ, ಖಜಾನೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಹೀಗಾಗಿದೆ ಎಂದು ವಿವರಿಸಿದರು.

ಕರ್ನಾಟಕಕ್ಕೆ ಇಂದು 1.64 ಲಕ್ಷ ಡೋಸ್ ಕೊವ್ಯಾಕ್ಸಿನ್ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸೋಮವಾರ ಒಟ್ಟು 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪೂರೈಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ಈವರೆಗೆ ರಾಜ್ಯಕ್ಕೆ ಒಟ್ಟು 17.8 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆಯಾಗಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ 15.86 ಲಕ್ಷ ಡೋಸ್ ಬಂಬಿದ್ದರೆ, ರಾಜ್ಯ ಸರ್ಕಾರವು 1.94 ಲಕ್ಷ ಡೋಸ್ ಖರೀದಿಸಿದೆ. ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

(Release Remuneration for Asha Workers Immediately Says Health Minister Dr K Minister)

ಇದನ್ನೂ ಓದಿ: ಮಕ್ಕಳ ಮೇಲೂ ಲಸಿಕೆಯ ಪ್ರಯೋಗ ನಡೆಯುತ್ತಿದೆ, ಎಲ್ಲರಿಗೂ ಲಸಿಕೆ ಸಿಗುವವರೆಗೂ ಮಾಸ್ಕ್ ಕಡ್ಡಾಯ; ಸಚಿವ ಡಾ.ಕೆ.ಸುಧಾಕರ್ ಮನವಿ

ಇದನ್ನೂ ಓದಿ: ಸ್ಟಿರಾಯ್ಡ್​​​ ನೀಡುತ್ತಿರುವುದರಿಂದ ಬ್ಲ್ಯಾಕ್​​ ಫಂಗಸ್ ಹೆಚ್ಚಳ: ಆರೋಗ್ಯ ಸಚಿವ ಡಾ. ಸುಧಾಕರ್

Published On - 8:02 pm, Mon, 31 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ