Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಇಡೀ ರಾಜ್ಯಕ್ಕೆ ಅನ್ವಯ.. ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ

coronavirus lockdown: ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು.

ಇದು ಇಡೀ ರಾಜ್ಯಕ್ಕೆ ಅನ್ವಯ.. ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ
ಲಾಕ್‌ಡೌನ್ ವೇಳೆ ಸೀಜ್ ಆಗಿದ್ದ ವಾಹನ ರಿಲೀಸ್: ಹೈಕೋರ್ಟ್ ಗ್ರೀನ್‌ಸಿಗ್ನಲ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 08, 2021 | 6:02 PM

ಬೆಂಗಳೂರು: ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡಿ…

ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.

ಇದನ್ನೂ ಓದಿ:

Kirik Party: ನಾಯಿ ಜೊತೆ ಬೈಕ್‌ನಲ್ಲಿ ಯುವತಿ ಜಾಲಿ ರೈಡ್​; ಮೈಸೂರಲ್ಲಿ ವಾಹನ ತಪಾಸಣೆ ವೇಳೆ ಹೈಡ್ರಾಮಾ: ವಿಡಿಯೋ ನೋಡಿ

(release the vehicles seized during coronavirus lockdown in karnataka orders high court)

ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ಅಪರಾಧ ಪ್ರಕರಣ ಇಳಿಕೆ, ಆನ್ಲೈನ್ ಚೀಟಿಂಗ್ ಏರಿಕೆ

Published On - 5:47 pm, Tue, 8 June 21

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್