AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿಗಳನ್ನು ಸ್ಥಳಾಂತರಿಸಿ: ಸುಪ್ರೀಂಕೋರ್ಟ್​ನಿಂದ ಎಲ್ಲ ರಾಜ್ಯಗಳಿಗೆ ಖಡಕ್​ ಸೂಚನೆ

ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ನಾಯಿಗಳನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಆದರೆ ರೇಬೀಸ್ ಅಥವಾ ಆಕ್ರಮಣಕಾರಿ ನಡವಳಿಕೆವುಳ್ಳ ನಾಯಿಗಳಿಗೆ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯದಲ್ಲಿ ಇಡಬೇಕು ಎಂದು ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡಲು ಅವಕಾಶವಿಲ್ಲ.

ಬೀದಿ ನಾಯಿಗಳನ್ನು ಸ್ಥಳಾಂತರಿಸಿ: ಸುಪ್ರೀಂಕೋರ್ಟ್​ನಿಂದ ಎಲ್ಲ ರಾಜ್ಯಗಳಿಗೆ ಖಡಕ್​ ಸೂಚನೆ
ಬೀದಿ ನಾಯಿ, ಸುಪ್ರೀಂಕೋರ್ಟ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 22, 2025 | 12:39 PM

Share

ಬೆಂಗಳೂರು, ಆಗಸ್ಟ್​ 22: ಬೀದಿ ನಾಯಿಗಳನ್ನು (Stray Dogs) ಹಿಡಿದು ಆಶ್ರಯತಾಣಗಳಿಗೆ ಬಿಡುವಂತೆ ಇತ್ತೀಚೆಗೆ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ (Supreme Court)​​ ಇದೀಗ ಮಾರ್ಪಾಡು ಮಾಡಿದೆ. ರೇಬೀಸ್ ಇರುವ ನಾಯಿಗಳನ್ನು ಹೊರತು ಪಡಿಸಿ ಎಲ್ಲಾ ಬೀದಿ ನಾಯಿಗಳನ್ನು ಮತ್ತೆ ಸ್ಥಳಾಂತರಿಸುವಂತೆ ಆದೇಶಿಸಿದೆ. ಈ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೂ ನಿರ್ದೇಶನ ನೀಡಲಾಗಿದೆ.

ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ಏನು?

  • ಪ್ರತಿ ವಾರ್ಡ್‌ನಲ್ಲಿ ಆಹಾರ ನೀಡುವ ಪ್ರದೇಶಗಳನ್ನು ಗುರುತಿಸಲು ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು.
  • ಇತರೆ ಪ್ರದೇಶಗಳಲ್ಲಿ ನಾಯಿಗಳಿಗೆ ಆಹಾರ ನೀಡುವಂತ್ತಿಲ್ಲ.
  • ಸಾಮಾನ್ಯ ಜನರಿಗೆ ಸಮಸ್ಯೆಗಳನ್ನು ಉಂಟುಮಾಡುವುದರಿಂದ ಅನಿಯಂತ್ರಿತ ಆಹಾರ ನೀಡುವಿಕೆಯನ್ನು ಅನುಮತಿಸಲಾಗುವುದಿಲ್ಲ.
  • ಉಲ್ಲಂಘನೆಗಳ ವಿರುದ್ಧ ದೂರು ನೀಡಲು ಸಹಾಯವಾಣಿ ರಚಿಸಲು ಸೂಚನೆ.

ಇದನ್ನೂ ಓದಿ: ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ: ತಕ್ಷಣದ ಕ್ರಮಕ್ಕೆ ವಿಪಕ್ಷಗಳ ಒತ್ತಾಯ

ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡಬಾರದು. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್​ನಿಂದ ಎಲ್ಲ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡಲು ಅನುಮತಿ ಇಲ್ಲ. ಬೀದಿ ನಾಯಿಗಳಿಗೆ ಆಹಾರ ನೀಡಲು ಮೀಸಲಾದ ಸ್ಥಳಗಳನ್ನು ರಚಿಸಬೇಕು. ಬೀದಿಗಳಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವುದು ಕಂಡುಬಂದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ
Image
ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಚಿಕಿತ್ಸೆ ಮಾಡಿ ಹೊರಗೆ ಬಿಡಬಹುದು
Image
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
Image
ದೆಹಲಿ ಆಯ್ತು ತಮಿಳುನಾಡಲ್ಲೂ ಬೀದಿ ನಾಯಿ ಹಾವಳಿಗೆ ಕಡಿವಾಣ ಸಾಧ್ಯತೆ
Image
ಬೀದಿ ನಾಯಿಗಳಿಗೆ ಬಿಬಿಎಂಪಿ ಬಾಡೂಟ: ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ

ನಾಯಿಗಳನ್ನು ದತ್ತು ಪಡೆಯಲು ಅರ್ಜಿ ಸಲ್ಲಿಸಲು ಪ್ರಾಣಿ ಪ್ರಿಯರಿಗೆ ಅವಕಾಶ ನೀಡಿದ್ದರು ಕೂಡ ಮತ್ತೆ ನಾಯಿಗಳನ್ನು ಬೀದಿಗೆ ಬಿಡದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ. ಪ್ರತಿಯೊಬ್ಬ ಅರ್ಜಿದಾರರು ಹಾಗೂ ಸರ್ಕಾರೇತರ ಸಂಸ್ಥೆಗಳು ಕ್ರಮವಾಗಿ 25,000 ಹಾಗೂ 2 ಲಕ್ಷ ರೂ.ಗಳನ್ನು ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ: ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಬಿಬಿಎಂಪಿ ಸ್ಪಷ್ಟನೆ

ಇನ್ನು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ನಾಯಿಗಳನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಆದರೆ ರೇಬೀಸ್ ಅಥವಾ ಆಕ್ರಮಣಕಾರಿ ನಡವಳಿಕೆವುಳ್ಳ ನಾಯಿಗಳಿಗೆ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯದಲ್ಲಿ ಇಡಬೇಕು ಎಂದು ನಿರ್ದೇಶನ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:38 pm, Fri, 22 August 25

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!