AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್‌ಡಿಸಿವಿರ್ ಕಾಳಸಂತೆ ಮಾರಾಟಕ್ಕೆ ಬೀಳಲಿದೆ ಬ್ರೇಕ್, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಬಗ್ಗೆ ಮಾಹಿತಿ ಹಂಚಿಕೊಂಡ ಸುಧಾಕರ್

ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ರೆಮ್‌ಡಿಸಿವಿರ್ ಕಾಳಸಂತೆ ಮಾರಾಟಕ್ಕೆ ಬೀಳಲಿದೆ ಬ್ರೇಕ್, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಬಗ್ಗೆ ಮಾಹಿತಿ ಹಂಚಿಕೊಂಡ ಸುಧಾಕರ್
ಕೆ. ಸುಧಾಕರ್​
ಆಯೇಷಾ ಬಾನು
ಆಯೇಷಾ ಬಾನು|

Updated on: May 23, 2021 | 2:10 PM

Share

ಬೆಂಗಳೂರು: ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ರೆಮ್‌ಡಿಸಿವಿರ್ ಬೇಡಿಕೆ ಹೆಚ್ಚಾಯಿತು. ಇದರ ಲಾಭ ಪಡೆದು ಅಕ್ರಮವಾಗಿ ರೆಮ್‌ಡಿಸಿವಿರ್ ಮಾರಾಟ ಮಾಡಿ ಹಣ ಮಾಡಿಕೊಳ್ಳಲು ಅನೇಕ ಮಂದಿ ಮುಂದಾಗಿದ್ದು ಈ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ಸಾರ್ವಜನಿಕರು ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು. ಒಂದು ವೇಳೆ ಸೋಂಕಿತರ SRF IDಗೆ ರೆಮ್‌ಡಿಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಈ ಬಗ್ಗೆ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡಲು ವ್ಯವಸ್ಥೆ ಮಾಡಲಾಗಿದೆ. covidwar.karnataka.gov.in/service2 ಮೂಲಕ ದೂರು ಸಲ್ಲಿಸಬಹುದಾಗಿದೆ. ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆಯಲ್ಲಿ ಮಾರಾಟ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಗದಗದಲ್ಲಿ ಬ್ಲ್ಯಾಕ್ ಮಾರ್ಕೆಟ್ನಲ್ಲಿ ರೆಮ್ಡಿಸಿವಿರ್ ಮಾರಾಟ ಜಾಲ ಇನ್ನು ಗದಗ ಜಿಲ್ಲೆಯಲ್ಲಿ ನಾಲ್ವರು ದಂಧೆಕೋರರನ್ನು ಬಂಧಿಸಲಾಗಿದೆ. ಗದಗ ವೈದ್ಯಕೀಯ ಕಾಲೇಜು ಆಸ್ಪತ್ರೆ ಲ್ಯಾಬ್ಟೆಕ್ನಿಷಿಯನ್, ಗದಗದ ಖಾಸಗಿ ಆಸ್ಪತ್ರೆಯ ಇಬ್ಬರು ನರ್ಸ್ಗಳಾಗಿರುವ ಮೊಹಮ್ಮದ್ ಇಸ್ಮಾಯಿಲ್, ಫಿರೋಜ್ ಖಾನ್, ರಮೇಶ್, ಗವಿಸಿದ್ದಯ್ಯನನ್ನು ಸೇರಿ ನಾಲ್ವರನ್ನು CEN ಠಾಣೆ ಪೊಲೀಸರು ಅರೆಸ್ಟ್ ಮಾಡಿಲಾಗಿದೆ.

ತಲೆ ಮರೆಸಿಕೊಂಡಿರುವ ನರ್ಸ್ ಜ್ಯೋತಿಗಾಗಿ ಹುಡುಕಾಟ ನಡೆಯುತ್ತಿದೆ. ಬಂಧಿತರಿಂದ 14 ರೆಮ್ಡಿಸಿವಿರ್ ಇಂಜೆಕ್ಷನ್ ವಶಕ್ಕೆ ಪಡೆಯಲಾಗಿದೆ. ಜಿಮ್ಸ್ ಆಸ್ಪತ್ರೆಯಲ್ಲಿ ರೆಮ್ಡಿಸಿವಿರ್ ಕದ್ದು 1 ರೆಮ್ಡಿಸಿವಿರ್ ಇಂಜೆಕ್ಷನ್ 30,000 ರೂ.ಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು