AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್‌ಡಿಸಿವಿರ್ ಕಾಳಸಂತೆ ಮಾರಾಟಕ್ಕೆ ಬೀಳಲಿದೆ ಬ್ರೇಕ್, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಬಗ್ಗೆ ಮಾಹಿತಿ ಹಂಚಿಕೊಂಡ ಸುಧಾಕರ್

ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ರೆಮ್‌ಡಿಸಿವಿರ್ ಕಾಳಸಂತೆ ಮಾರಾಟಕ್ಕೆ ಬೀಳಲಿದೆ ಬ್ರೇಕ್, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಬಗ್ಗೆ ಮಾಹಿತಿ ಹಂಚಿಕೊಂಡ ಸುಧಾಕರ್
ಕೆ. ಸುಧಾಕರ್​
ಆಯೇಷಾ ಬಾನು
|

Updated on: May 23, 2021 | 2:10 PM

Share

ಬೆಂಗಳೂರು: ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ರೆಮ್‌ಡಿಸಿವಿರ್ ಬೇಡಿಕೆ ಹೆಚ್ಚಾಯಿತು. ಇದರ ಲಾಭ ಪಡೆದು ಅಕ್ರಮವಾಗಿ ರೆಮ್‌ಡಿಸಿವಿರ್ ಮಾರಾಟ ಮಾಡಿ ಹಣ ಮಾಡಿಕೊಳ್ಳಲು ಅನೇಕ ಮಂದಿ ಮುಂದಾಗಿದ್ದು ಈ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರೆಮ್‌ಡಿಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ಸಾರ್ವಜನಿಕರು ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು. ಒಂದು ವೇಳೆ ಸೋಂಕಿತರ SRF IDಗೆ ರೆಮ್‌ಡಿಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಈ ಬಗ್ಗೆ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡಲು ವ್ಯವಸ್ಥೆ ಮಾಡಲಾಗಿದೆ. covidwar.karnataka.gov.in/service2 ಮೂಲಕ ದೂರು ಸಲ್ಲಿಸಬಹುದಾಗಿದೆ. ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆಯಲ್ಲಿ ಮಾರಾಟ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಗದಗದಲ್ಲಿ ಬ್ಲ್ಯಾಕ್ ಮಾರ್ಕೆಟ್ನಲ್ಲಿ ರೆಮ್ಡಿಸಿವಿರ್ ಮಾರಾಟ ಜಾಲ ಇನ್ನು ಗದಗ ಜಿಲ್ಲೆಯಲ್ಲಿ ನಾಲ್ವರು ದಂಧೆಕೋರರನ್ನು ಬಂಧಿಸಲಾಗಿದೆ. ಗದಗ ವೈದ್ಯಕೀಯ ಕಾಲೇಜು ಆಸ್ಪತ್ರೆ ಲ್ಯಾಬ್ಟೆಕ್ನಿಷಿಯನ್, ಗದಗದ ಖಾಸಗಿ ಆಸ್ಪತ್ರೆಯ ಇಬ್ಬರು ನರ್ಸ್ಗಳಾಗಿರುವ ಮೊಹಮ್ಮದ್ ಇಸ್ಮಾಯಿಲ್, ಫಿರೋಜ್ ಖಾನ್, ರಮೇಶ್, ಗವಿಸಿದ್ದಯ್ಯನನ್ನು ಸೇರಿ ನಾಲ್ವರನ್ನು CEN ಠಾಣೆ ಪೊಲೀಸರು ಅರೆಸ್ಟ್ ಮಾಡಿಲಾಗಿದೆ.

ತಲೆ ಮರೆಸಿಕೊಂಡಿರುವ ನರ್ಸ್ ಜ್ಯೋತಿಗಾಗಿ ಹುಡುಕಾಟ ನಡೆಯುತ್ತಿದೆ. ಬಂಧಿತರಿಂದ 14 ರೆಮ್ಡಿಸಿವಿರ್ ಇಂಜೆಕ್ಷನ್ ವಶಕ್ಕೆ ಪಡೆಯಲಾಗಿದೆ. ಜಿಮ್ಸ್ ಆಸ್ಪತ್ರೆಯಲ್ಲಿ ರೆಮ್ಡಿಸಿವಿರ್ ಕದ್ದು 1 ರೆಮ್ಡಿಸಿವಿರ್ ಇಂಜೆಕ್ಷನ್ 30,000 ರೂ.ಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಳಸಂತೆಯಲ್ಲಿ ನಕಲಿ ರೆಮ್ಡಿಸಿವಿರ್ ಮಾರಾಟ ಪ್ರಕರಣ; ಮಾತೃ ಆಸ್ಪತ್ರೆಗೆ ನೋಟಿಸ್

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ