AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡೆಸಿವಿರ್ ಕಾಳಸಂತೆಕೋರರಿಗೆ ಬಿಸಿಮುಟ್ಟಿಸಿದ ನ್ಯಾಯಾಧೀಶೆ; 11 ಆರೋಪಿಗಳ ಜಾಮೀನು ಅರ್ಜಿ ವಜಾ

remdesivir: ರೆಮ್​ಡೆಸಿವಿರ್ ಕಾಳಸಂತೆಕೋರರಿಗೆ ಬಿಸಿಮುಟ್ಟಿಸಿದ ನ್ಯಾಯಾಧೀಶೆ. ಎಲ್ಲಾ 11 ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಅವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದರು. ಅಷ್ಟೂ ಆರೋಪಿಗಳ ಜೈಲುವಾಸ ಮುಂದುವರಿದಿದೆ.

ರೆಮ್​ಡೆಸಿವಿರ್ ಕಾಳಸಂತೆಕೋರರಿಗೆ ಬಿಸಿಮುಟ್ಟಿಸಿದ ನ್ಯಾಯಾಧೀಶೆ; 11 ಆರೋಪಿಗಳ ಜಾಮೀನು ಅರ್ಜಿ ವಜಾ
ರೆಮ್​ಡೆಸಿವಿರ್ ಕಾಳಸಂತೆಕೋರರಿಗೆ ಬಿಸಿಮುಟ್ಟಿಸಿದ ನ್ಯಾಯಾಧೀಶೆ; 11 ಆರೋಪಿಗಳ ಜಾಮೀನು ಅರ್ಜಿ ವಜಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 05, 2021 | 6:13 PM

Share

ಬಾಗಲಕೋಟೆ: ಕೊರೊನಾ ಸೋಂಕಿಗೆ ಕಡಿವಾಣ ಹಾಕುವಲ್ಲಿ ಪರಿಣಾಮಕಾರಿ ಔಷಧ ಎನಿಸಿರುವ ರೆಮ್​ಡೆಸಿವಿರ್ ಇಂಜೆಕ್ಷನ್​ಅನ್ನು ಕದ್ದುಮುಚ್ಚಿ ದುಬಾರಿ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಕಾಳಸಂತೆಕೋರರಿಗೆ ನ್ಯಾಯಾಲಯ ಬಿಸಿಮುಟ್ಟಿಸಿದೆ. ಬಾಗಲಕೋಟೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ 11 ಆರೋಪಿಗಳ ಅರ್ಜಿಗಳನ್ನು ವಜಾಗೊಳಿಸಿ, ಆದೇಶಿಸಿದೆ. ಇದು ಇತರೆ ಕಾಳಸಂತೆಕೋರರಿಗೂ ಎಚ್ಚರಿಕೆಯ ಪಾಠವಾಗಿದೆ.

ಮೇ 3ರಂದು ಬಾಗಲಕೋಟೆಯಲ್ಲಿ ಸಿಇಎನ್​ ಠಾಣೆ ಪೊಲೀಸರು ಕೋವಿಡ್ ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದರು. ವಿಪತ್ತು ನಿರ್ವಹಣೆ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಿದ್ದರು. ಜಾಲದಲ್ಲಿ ಭಾಗಿಯಾಗಿದ್ದ ವಿವಿಧ ಆಸ್ಪತ್ರೆಗಳ ಸಿಬ್ಬಂದಿ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿದ್ದರು. ತಿಮ್ಮಣ್ಣ ಗಡದನ್ನವರ, ಬಾಲಚಂದ್ರ ಭಜಂತ್ರಿ, ಮಂಜುನಾಥ ಗಾಣಿಗೇರ, ಶ್ರೀಕಾಂತ ಲಮಾಣಿ, ಗಣೇಶ್ ನಾಟಿಕಾರ್, ಪ್ರವೀಣ ಕೊಳ್ಳಿ, ಮಹಾಂತೇಶ್ ಬಿರಾದಾರ, ವಿಠ್ಠಲ ಚಲವಾದಿ, ರಂಗಪ್ಪ ದಿನ್ನಿ, ರಾಜು ಗುಡಿಮನಿ, ಭೀಮಪ್ಪ ಘಂಟಿ ಜಾಲದಲ್ಲಿ ಸಿಲುಕಿದ್ದ ಆರೋಪಿಗಳು. ಆರೋಪಿಗಳಿಂದ ಪೊಲೀಸರು 14 ರೆಮ್​ಡೆಸಿವಿರ್​​ ಇಂಜೆಕ್ಷನ್​ಗಳನ್ನು ಜಪ್ತಿ ಮಾಡಿದ್ದರು. ಜೊತೆಗೆ, ಅಷ್ಟೂ ಮಂದಿಯನ್ನು ಜೈಲಿಗಟ್ಟಿದ್ದರು.

remdesivir injection black market in bagalkot 11 accused bail plea rejected by judge kalpana kulkarni 1

ರೆಮ್​ಡೆಸಿವಿರ್ ಕಾಳಸಂತೆ: ಬಾಗಲಕೋಟೆಯಲ್ಲಿ ಸಿಇಎನ್​ ಠಾಣೆ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದರು

ಎಲ್ಲಾ 11 ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಅವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದರು. ಅಷ್ಟೂ ಆರೋಪಿಗಳ ಜೈಲುವಾಸ ಮುಂದುವರಿದಿದೆ.

(remdesivir injection black market in bagalkot 11 accused bail plea rejected by judge kalpana kulkarni)

ಬಾಗಲಕೋಟೆಯಲ್ಲೂ ಹೆಚ್ಚಿದ ರೆಮ್​ಡೆಸಿವಿರ್ ಬೇಡಿಕೆ; ಕೊರೊನಾಗಿಂತಲೂ ಇಂಜೆಕ್ಷನ್ ಸಿಗುತಿಲ್ಲ ಎನ್ನುವ ಆತಂಕವೇ ಹೆಚ್ಚು

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ