AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾಮಾನ್ಯ ಪಾಂಡಿತ್ಯದ ಖನಿ ಬನ್ನಂಜೆ ಗೋವಿಂದಾಚಾರ್ಯ

ಅತಿಸೂಕ್ಷ್ಮ ಶಾಸ್ತ್ರ ವಿಷಯಗಳನ್ನು ಅತ್ಯಾಕರ್ಷಕವಾಗಿ, ಸರಳ ಕನ್ನಡದಲ್ಲಿ ವಿವರಿಸುತ್ತಿದ್ದ ಆಚಾರ್ಯರು ತಮ್ಮ ಉಪನ್ಯಾಸ ಮಾಲಿಕೆಗಳ ಮೂಲಕ ಜನಸಾಮಾನ್ಯರ ಆಧ್ಯಾತ್ಮ ಜಿಜ್ಞಾಸೆಗಳನ್ನು ತಣಿಸುತ್ತಿದ್ದರು.

ಅಸಾಮಾನ್ಯ ಪಾಂಡಿತ್ಯದ ಖನಿ ಬನ್ನಂಜೆ ಗೋವಿಂದಾಚಾರ್ಯ
ಬನ್ನಂಜೆ ಗೋವಿಂದಾಚಾರ್ಯ
ರಶ್ಮಿ ಕಲ್ಲಕಟ್ಟ
| Edited By: |

Updated on:Dec 13, 2020 | 3:02 PM

Share

ಉಡುಪಿ: ಸಂಸ್ಕೃತ ಮತ್ತು ಕನ್ನಡ ಭಾಷೆಯಲ್ಲಿ ಅದ್ಭುತ ವಿದ್ವತ್ತು, ಅಪ್ರತಿಮ ಪಾಂಡಿತ್ಯದ ಶ್ರೀ ಬನ್ನಂಜೆ ಗೋವಿಂದಾಚಾರ್ಯರು ಭಾನುವಾರ (ಡಿಸೆಂಬರ್13, 2020) ನಿಧನರಾಗಿದ್ದಾರೆ. ಅತಿಸೂಕ್ಷ್ಮ ಶಾಸ್ತ್ರ ವಿಷಯಗಳನ್ನು ಅತ್ಯಾಕರ್ಷಕವಾಗಿ, ಸರಳ ಕನ್ನಡದಲ್ಲಿ ವಿವರಿಸುತ್ತಿದ್ದ ಆಚಾರ್ಯರು ತಮ್ಮ ಉಪನ್ಯಾಸ ಮಾಲಿಕೆಗಳ ಮೂಲಕ ಜನಸಾಮಾನ್ಯರ ಆಧ್ಯಾತ್ಮ ಜಿಜ್ಞಾಸೆಗಳನ್ನು ತಣಿಸುತ್ತಿದ್ದರು. ಅವರ ಬದುಕಿನ ವಿವರ, ಪ್ರಮುಖ ಕೃತಿಗಳ ಪರಿಚಯ ಇಲ್ಲಿದೆ.

ಆಗಸ್ಟ್ 3, 1936ರಂದು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ತರ್ಕ ಕೇಸರಿ ನಾರಾಯಣಾಚಾರ್ಯರ ಮಗನಾಗಿ ಬನ್ನಂಜೆ ಗೋವಿಂದಚಾರ್ಯರು ಜನಿಸಿದರು. ಅಪ್ಪನಿಂದಲೇ ವೈದಿಕ ಶಿಕ್ಷಣ, ವಿದ್ಯಾಮಾನ್ಯ ತೀರ್ಥ ಸ್ವಾಮೀಜಿ ಮತ್ತು ವಿದ್ಯಾ ಸಮುದ್ರ ತೀರ್ಥರಲ್ಲಿ ಶಾಸ್ತ್ರಾಭ್ಯಾಸ ನಡೆಯಿತು.

ಇದನ್ನೂ ಓದಿ: ಬನ್ನಂಜೆ ಗೋವಿಂದಾಚಾರ್ಯ ನಿಧನ

ಬಾಣಭಟ್ಟನ ಕಾದಂಬರಿ, ಕಾಳೀದಾಸನ ಶಾಕುಂತಲ, ಶೂದ್ರಕನ ಮೃಚ್ಛಕಟಿಕ ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ. ತ್ರಿವಿಕ್ರಮಾಚಾರ್ಯ ದಾಸರ ‘ಆನ೦ದಮಾಲಾ’, ತ್ರಿವಿಕ್ರಮ ಪ೦ಡಿತಾಚಾರ್ಯರ ‘ವಾಯುಸ್ತುತಿ’ ಮತ್ತು ‘ವಿಷ್ಣುಸ್ತುತಿ’, ಮಧ್ವಾಚಾರ್ಯರ ಮಹಾಭಾರತದ ತಾತ್ಪರ್ಯದ ‘ಯಮಕ ಭಾರತ’ ಮತ್ತು ‘ಭಾಗವತ ತಾತ್ಪರ್ಯ’ ಕೃತಿಗಳಿಗೆ ವಿದ್ವತ್ಪೂರ್ಣ ಟಿಪ್ಪಣಿಗಳನ್ನು ರಚಿಸಿದ್ದಾರೆ.

ವೇದ ಸೂಕ್ತಗಳಾದ ಪುರುಷಸೂಕ್ತ, ಶ್ರೀಸೂಕ್ತ, ಪ್ರಸ್ಥಾನ ತ್ರಯಗಳಲ್ಲಿ ಒಂದಾದ ಭಗವದ್ಗೀತೆ, ನಾರಾಯಣ ಪಂಡಿತಾಚಾರ್ಯರ ಶಿವಸ್ತುತಿ, ತ್ರಿವಿಕ್ರಮ ಪಂಡಿತಾಚಾರ್ಯರ ನರಸಿಂಹಸ್ತುತಿ, ಮಧ್ವಾಚಾರ್ಯರ ತಂತ್ರಸಾರ ಸಂಗ್ರಹ ಕೃತಿಗಳನ್ನು ಟಿಪ್ಪಣಿ ಸಹಿತ ಕನ್ನಡಕ್ಕೆ ಅನುವಾದಿಸಿದ್ದಾರೆ.

‘ಉಡುಪಿಯ ಕೃಷ್ಣನ ಕಂಡಿರಾ…’ ಬನ್ನಂಜೆಯವರ ಪ್ರಸಿದ್ಧ ಕನ್ನಡ ಕೀರ್ತನೆ. ಜಿ.ವಿ. ಅಯ್ಯರ್ ನಿರ್ದೇಶನದ ಶ್ರೀಶಂಕರಾಚಾರ್ಯ, ಶ್ರೀಮಧ್ವಾಚಾರ್ಯ ಮತ್ತು ಶ್ರೀರಾಮಾನುಜಾಚಾರ್ಯ ಸಂಸ್ಕೃತ ಚಲನಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ.

ಪದ್ಮಶ್ರೀ ಪ್ರಶಸ್ತಿ, ಅನುವಾದಕ್ಕಾಗಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮಣಿಪಾಲದ ಪ್ರತಿಷ್ಠಿತ ವಿದ್ಯಾ ಸಮೂಹದ ಫೆಲೋಶಿಪ್, ಅದಮಾರು ಪೀಠದಿಂದ ವಿದ್ಯಾವಾಚಸ್ಪತಿ ಬಿರುದು, ಪಲಿಮಾರು ಮಠದಿಂದ ಪ್ರತಿಭಾಂಬುದಿ ಬಿರುದು, ಅಖಿಲ ಭಾರತ ಮಾಧ್ವಮಹಾ ಮಂಡಲದಿಂದ ಶಾಸ್ತ್ರ ಸವ್ಯಸಾಚಿ, ಕಬೀರಾನಂದ ಆಶ್ರಮದ ಆರೂಢಶ್ರೀ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿದ್ದವು.

1979ರಲ್ಲಿ ಅಮೆರಿಕಾದ ಪ್ರಿನ್ಸ್​ಸ್ಟನ್​ನಲ್ಲಿ ನಡೆದ ‘ವರ್ಲ್ಡ್ ಕಾನ್ವರೆನ್ಸ್ ಆನ್ ರಿಲಿಜನ್ ಅಂಡ್ ಪೀಸ್’ (ವಿಶ್ವ ಧಾರ್ಮಿಕ ಮತ್ತು ಶಾಂತಿ) ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

ಒಡನಾಡಿಯ ನೆನಪು | ಗೀತಾ ಭಾಷ್ಯ ಮುಗಿಸಿಯೇ ‘ಹೋಗಬೇಕು’ ಅಂದುಕೊಂಡಿದ್ದರು ಬನ್ನಂಜೆ ಗೋವಿಂದಾಚಾರ್ಯ

Published On - 2:09 pm, Sun, 13 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ