Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ 2024 ಪರೇಡ್: ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯೋಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಕೆಲವೊಂದನ್ನು ಆಯ್ಕೆ ಮಾಡಿ ಕೆಲವನ್ನು ತಿರಸ್ಕರಿಸಲಾಗುತ್ತಿದೆ. ಈ ಬಾರಿ ಕರ್ನಾಟಕ ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿರಸ್ಕೃತಗೊಂಡಿವೆ.

ಗಣರಾಜ್ಯೋತ್ಸವ 2024 ಪರೇಡ್: ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ
ಗಣರಾಜ್ಯೋತ್ಸವ 2024 ಪರೇಡ್​ಗೆ ಕರ್ನಾಟಕದಿಂದ ಕಳುಹಿಸಲಾದ ಟ್ಯಾಬ್ಲೋ ಪರಿಕಲ್ಪನೆಗಳನ್ನು ತಿರಸ್ಕರಿಸಿದ ಆಯ್ಕೆ ಸಮಿತಿ (ಸಾಂದರ್ಭಿಕ ಚಿತ್ರ) Image Credit source: newindianexpress/Shekhar Yadav
Follow us
TV9 Web
| Updated By: Rakesh Nayak Manchi

Updated on:Jan 09, 2024 | 8:12 PM

ಬೆಂಗಳೂರು, ಜ.9: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (Republic Day) ಪರೇಡ್​ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯೋಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಕೆಲವೊಂದನ್ನು ಆಯ್ಕೆ ಮಾಡಿ ಕೆಲವನ್ನು ತಿರಸ್ಕರಿಸಲಾಗುತ್ತಿದೆ. ಈ ಬಾರಿ ಕರ್ನಾಟಕ (Karnataka Tableau) ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿಸ್ಕೃತಗೊಂಡಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಾರಿ ಬ್ರಾಂಡ್ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ಮತ್ತು ಬೆಂಗಳೂರು ಅಣ್ಣಮ್ಮ ದೇವಿ ದೇವಸ್ಥಾನದ ಥೀಮ್ ಕಲ್ಪನೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಿತ್ತು. ಆದರೆ ಎಲ್ಲಾ ನಾಲ್ಕು ಪರಿಕಲ್ಪನೆಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ಕರ್ನಾಟಕವು ಸತತ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸುತ್ತಿದೆ. ಸತತ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಟ್ಯಾಬ್ಲೋ ಸಾಗಿತ್ತು.

ಟ್ಯಾಬ್ಲೋಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?

ರಕ್ಷಣಾ ಸಚಿವಾಲಯವು ಕಲೆ, ಸಂಸ್ಕೃತಿ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ, ಇತ್ಯಾದಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪರಿಣತಿ ಹೊಂದಿರುವ ತಜ್ಞರ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ರಾಜ್ಯಗಳು ಸಲ್ಲಿಸಿದ ಟ್ಯಾಬ್ಲೋ ಪರಿಕಲ್ಪನೆಗಳನ್ನು ಈ ಸಮಿತಿ ಪರಿಶೀಲನೆ ನಡೆಸಿ ಆಯ್ಕೆ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Tue, 9 January 24

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ