ಗಣರಾಜ್ಯೋತ್ಸವ 2024 ಪರೇಡ್: ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ

| Updated By: Rakesh Nayak Manchi

Updated on: Jan 09, 2024 | 8:12 PM

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯೋಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಕೆಲವೊಂದನ್ನು ಆಯ್ಕೆ ಮಾಡಿ ಕೆಲವನ್ನು ತಿರಸ್ಕರಿಸಲಾಗುತ್ತಿದೆ. ಈ ಬಾರಿ ಕರ್ನಾಟಕ ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿರಸ್ಕೃತಗೊಂಡಿವೆ.

ಗಣರಾಜ್ಯೋತ್ಸವ 2024 ಪರೇಡ್: ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ
ಗಣರಾಜ್ಯೋತ್ಸವ 2024 ಪರೇಡ್​ಗೆ ಕರ್ನಾಟಕದಿಂದ ಕಳುಹಿಸಲಾದ ಟ್ಯಾಬ್ಲೋ ಪರಿಕಲ್ಪನೆಗಳನ್ನು ತಿರಸ್ಕರಿಸಿದ ಆಯ್ಕೆ ಸಮಿತಿ (ಸಾಂದರ್ಭಿಕ ಚಿತ್ರ)
Image Credit source: newindianexpress/Shekhar Yadav
Follow us on

ಬೆಂಗಳೂರು, ಜ.9: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (Republic Day) ಪರೇಡ್​ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯೋಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಕೆಲವೊಂದನ್ನು ಆಯ್ಕೆ ಮಾಡಿ ಕೆಲವನ್ನು ತಿರಸ್ಕರಿಸಲಾಗುತ್ತಿದೆ. ಈ ಬಾರಿ ಕರ್ನಾಟಕ (Karnataka Tableau) ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿಸ್ಕೃತಗೊಂಡಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಾರಿ ಬ್ರಾಂಡ್ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ಮತ್ತು ಬೆಂಗಳೂರು ಅಣ್ಣಮ್ಮ ದೇವಿ ದೇವಸ್ಥಾನದ ಥೀಮ್ ಕಲ್ಪನೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಿತ್ತು. ಆದರೆ ಎಲ್ಲಾ ನಾಲ್ಕು ಪರಿಕಲ್ಪನೆಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Republic Day: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮಹಿಳಾ ಅಗ್ನಿವೀರ್ ವಾಯು ಸೈನಿಕರ ಶಕ್ತಿಪ್ರದರ್ಶನಕ್ಕೆ ಅವಕಾಶ 

ಕರ್ನಾಟಕವು ಸತತ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸುತ್ತಿದೆ. ಸತತ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಟ್ಯಾಬ್ಲೋ ಸಾಗಿತ್ತು.

ಟ್ಯಾಬ್ಲೋಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?

ರಕ್ಷಣಾ ಸಚಿವಾಲಯವು ಕಲೆ, ಸಂಸ್ಕೃತಿ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ, ಇತ್ಯಾದಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪರಿಣತಿ ಹೊಂದಿರುವ ತಜ್ಞರ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ರಾಜ್ಯಗಳು ಸಲ್ಲಿಸಿದ ಟ್ಯಾಬ್ಲೋ ಪರಿಕಲ್ಪನೆಗಳನ್ನು ಈ ಸಮಿತಿ ಪರಿಶೀಲನೆ ನಡೆಸಿ ಆಯ್ಕೆ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Tue, 9 January 24