AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ಟೆನ್ಷನ್​ ನಡುವೆಯೂ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟ!

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಕಾನೂನು ಸಂಕಷ್ಟ ಎದುರಾಗಿದೆ. ಈ ಆತಂಕದ ನಡುವೆಯೂ ಸರ್ಕಾರದ ನೇಮಕಾತಿಗಳ ಬಗ್ಗೆ ಪಕ್ಷದ ಸಚಿವರು ಮುಖಂಡರ ಬೇಸರ ಸ್ಪೋಟಗೊಳ್ಳತೊಡಗಿದೆ.

ಮುಡಾ ಹಗರಣ ಟೆನ್ಷನ್​ ನಡುವೆಯೂ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟ!
ಕರ್ನಾಟಕ ಕಾಂಗ್ರೆಸ್​
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ|

Updated on:Sep 04, 2024 | 5:19 PM

Share

ಬೆಂಗಳೂರು, (ಸೆಪ್ಟೆಂಬರ್ 04): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷಗಳಾಯಿತು. ಅದ್ಯಾಕೋ ಜನರು ಎಷ್ಟರ ಮಟ್ಟಿಗೆ ಖುಷಿಯಾಗಿದ್ದಾರೋ ಗೊತ್ತಿಲ್ಲ. ಆದರೆ ಶಾಸಕರು ಸಚಿವರು ಕಾರ್ಯಕರ್ತರಂತೂ ಸರ್ಕಾರದ ನಡೆ ಬಗ್ಗೆ ಬೇಸರಗೊಂಡಿದ್ದಾರೆ. ವಿವಿಧ ಅಕಾಡೆಮಿ ಸದಸ್ಯರ ನೇಮಕ, ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ನೇಮಕದ ಬಗ್ಗೆ ಕಾಂಗ್ರೆಸ್ ನಲ್ಲಿ ಅಪಸ್ವರ ಎದ್ದಿದೆ. ನೇಮಕಾತಿ ಗೊಂದಲಗಳ ಬಗ್ಗೆ ರಾಹುಲ್ ಗಾಂಧಿವರೆಗೆ ದೂರು ನೀಡಲು ನಾಯಕರ ನಿರ್ಧಾರ ಮಾಡಿದ್ದಾರೆ. ನೇಮಕಾತಿಯಲ್ಲಿ ಸ್ವಜನ ಪಕ್ಷಪಾತದ ಆರೋಪ ಮಾಡುತ್ತಿರುವ ಕೈ ನಾಯಕರು, ಕೆಲವು ನಿರ್ಧಾರಗಳಲ್ಲಿ ಸಂಬಂಧಪಟ್ಟ ಸಚಿವರಿಗೇ ಮಾಹಿತಿ ನೀಡುತ್ತಿಲ್ಲ ಎಂದು ಬೇಸರದ ಜೊತೆಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ನಿಗಮ-ಮಂಡಳಿ ಸದಸ್ಯರ ನಿರ್ದೇಶಕರ ನೇಮಕಕ್ಕೆ ಗೃಹ ಸಚಿವ ಡಾ.ಪರಮೇಶ್ವರ ನೇತೃತ್ವದ ಸಮಿತಿ ಮಾಡಲಾಗಿದೆ. ಆದರೆ ಆ ಸಮಿತಿಯ ಗಮನಕ್ಕೂ ಬಾರದೆ ಸಿಎಂ‌ ಕಚೇರಿಯಿಂದಲೇ ನೇರ ನೇಮಕ ಆರೋಪ ಕೇಳಿ ಬರುತ್ತಿದೆ. ಸಂಬಂಧಿಸಿದ ಇಲಾಖೆ ಸಚಿವರ ಗಮನಕ್ಕೂ ಬಾರದೆ ನೇಮಕಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಬೆಲ್ಲದ್, ಬಿಜೆಪಿ ಶಾಸಕನ ಕ್ಷಮಾಪಣೆ ಪತ್ರಕ್ಕೆ ಸಿಎಂ ಶ್ಲಾಘನೆ

ಕಳೆದ ಬಾರಿ ಸರ್ಕಾರದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದವರೇ ಈ ಬಾರಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಆಯಾ ಕ್ಷೇತ್ರದಲ್ಲಿ ಏನೂ ಸಾಧನೆ ಮಾಡದವರಿಗೆ ಕುರ್ಚಿ ಭಾಗ್ಯ ನೀಡಲಾಗುತ್ತಿದೆ, ಪಕ್ಷದ ಎರಡು, ಮೂರನೇ ಹಂತದ ನಾಯಕರು, ಕಾರ್ಯಕರ್ತರಿಗೆ ಅವಕಾಶ ಸಿಗುತ್ತಿಲ್ಲ.‌ ಸಿಂಡಿಕೇಟ್ ಸದಸ್ಯ ಸ್ಥಾನ ಬಹುತೇಕ ಸಾಹಿತಿಗಳು, ಸಾಹಿತಿಗಳ ಸೋಗಿನಲ್ಲಿರುವವರಿಗೆ ಆದ್ಯತೆ ನೀಡಿರುವ ದೂರು ಕೇಳಿಬರುತ್ತಿದೆ.

ಸ್ವಪಕ್ಷಿಯರಿಗೆ ಆಯಕಟ್ಟಿನ ಹುದ್ದೆ ನೀಡುತ್ತಿರುವ ವರ್ಗಾವಣೆ ಮಾಡುತ್ತಿರುವ ಬಗ್ಗೆ ಈ ಹಿಂದೆಯೇ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದರು. ಬಹುತೇಕ ನಾಮನಿರ್ದೇಶನದಲ್ಲಿ ವೀರಶೈವ ಲಿಂಗಾಯತರು, ಕಡೆಗಣನೆ ಬಗ್ಗೆ ಜನಾಂಗದ ಮುಖಂಡರಲ್ಲಿ ಬೇಗುದಿ ವ್ಯಕ್ತವಾಗಿತ್ತು. ವೀರಶೈವ ಲಿಂಗಾಯತರು, ಒಕ್ಕಲಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ಷೇಪವೂ ಇದೆ. ಶೈಕ್ಷಣಿಕ ವಲಯದ ಗಂಧ ಗಾಳಿ ಗೊತ್ತಿಲ್ಲದವರಿಗೂ ಮಣೆ ಹಾಕಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಗೃಹ ಸಚಿವ ಡಾ. ಜಿ.ಪರಮೇಶ್ವರ ನೇತೃತ್ವದ ಸಮಿತಿ ಗಮನಕ್ಕೂ ಬಾರದ ನೇಮಕ ಆಗಿರುವ ಬಗ್ಗೆ ಹಿರಿಯ ಸಚಿವರೇ ಬೇಸರ ವ್ಯಕ್ತಪಡಿಸಿದ್ದಾರೆ. ಡಾ.ಪರಮೇಶ್ವರ ಸಮಿತಿ ಏಕೆ ಬೇಕಿತ್ತು ಎಂದು ಕಾಂಗ್ರೆಸ್ ನಲ್ಲಿ ಪ್ರಶ್ನೆ ಎದ್ದಿದೆ.

ಒಂದು ಕಡೆ ಸಿಎಂ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ಹೋರಾಟ ಮಾಡುತ್ತಿದ್ದಾರೆ. ಇತ್ತ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್ ನಾಯಕರಿಗೆ ಸಮಾಧಾನ ತರುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:16 pm, Wed, 4 September 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್