Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Monsoon 2021: ಮೈಸೂರಿನ ಕಬಿನಿ ಜಲಾಶಯದಲ್ಲಿ ಗರಿಷ್ಠ ನೀರು ಶೇಖರಣೆ; ಮಳೆಯಿಂದ ಸಂತಸ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿಯಾಗಿದ್ದು, ಇಂದಿನ ಜಲಾಶಯದ ಗರಿಷ್ಠ ಶೇಖರಣೆ ಪ್ರಮಾಣ 19.52 ಟಿಎಂಸಿ.

Karnataka Monsoon 2021: ಮೈಸೂರಿನ ಕಬಿನಿ ಜಲಾಶಯದಲ್ಲಿ ಗರಿಷ್ಠ ನೀರು ಶೇಖರಣೆ; ಮಳೆಯಿಂದ ಸಂತಸ
ಕಬಿನಿ ಡ್ಯಾಂ
Follow us
TV9 Web
| Updated By: preethi shettigar

Updated on:Jun 19, 2021 | 1:09 PM

ಪ್ರತಿ ವರ್ಷದ ಮಳೆಗಾಲ ನೊವು- ನಲಿವಿನ ಸಮಾಗಮವಿದ್ದಂತೆ. ಮಳೆಗಾಲ ಆರಂಭವಾದ ಕೂಡಲೇ ಭತ್ತಿ ಹೋದ ನದಿಗಳು ಮರು ಜೀವ ಪಡೆದುಕೊಳ್ಳುತ್ತದೆ. ಅಂತೆಯೇ ಇಳೆಗೆ ಮಳೆ ಎಂಬ ತಂಪುಗವಿಯಲಾರಂಬಿಸುತ್ತದೆ. ಮಳೆ ಬಂದರೆ ಸಾಕು ಎಂದು ಬೇಡಿಕೊಳ್ಳುವ ರೈತರು ಒಂದು ಕಡೆಯಾದರೆ, ಮಳೆಗೆ ಹೆದರಿ ಮನೆಯನ್ನು ಭದ್ರಪಡಿಸುವ ಮಂದಿ ಇನ್ನೊಂದು ಕಡೆ. ಮಳೆಯ ವಿಶೇಷತೆಯೇ ಬಹುಷಃ ಇದೆ ಅನಿಸುತ್ತದೆ. ಒಂದು ಕಡೆ ಮಳೆ ಬಂದರೆ ಖುಷಿ, ಇದೇ ಮಳೆ ಅತಿಯಾದರೆ ದುಖಃ. ಮಳೆಗಾಲ ಈಗ ಆರಂಭವಾಗಿದೆ. ಮಳೆಗಾಗಿ ಹಂಬಲಿಸುತ್ತಿದ್ದ ಜನಕ್ಕೆ ನೆಮ್ಮದಿ ದೊರೆತಂತಾಗಿದೆ. ಅಂತೆಯೇ ಗಾಳಿ ಮಳೆಗೆ ಅನೇಕರು ಮನೆ ಮಠ ಕಳೆದುಕೊಳ್ಳುವ ಭಯದ ಅಂಚಿನಲ್ಲಿದ್ದಾರೆ. ಮೈಸೂರು ಭಾಗದಲ್ಲಿ ಸದ್ಯ ಈಗಷ್ಟೇ ಮಳೆ ಆರಂಭವಾಗಿದ್ದು, ಜನರು ಮಳೆಯ ಆಗಮನದಿಂದಾಗಿ ಸಂತಸದಲ್ಲಿದ್ದಾರೆ.

ಕೇರಳದ ವಯನಾಡಿನಲ್ಲಿ ಹೆಚ್ಚಿದ ಮಳೆ ಪ್ರಮಾಣ ಕೇರಳದ ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ನೀರಿನ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿಯಾಗಿದ್ದು, ಇನ್ನು ಜಲಾಶಯದ ಗರಿಷ್ಠ ಶೇಖರಣೆ ಪ್ರಮಾಣ 19.52 ಟಿಎಂಸಿ, ಜಲಾಶಯದ ಇಂದಿನ ಶೇಖರಣೆ ಪ್ರಮಾಣ 13.91 ಟಿಎಂಸಿ, ನಾಲೆಗಳಿಗೆ 00 ಮತ್ತು ಜಲಾನಯನ ಪ್ರದೇಶದಲ್ಲಿ ಮಳೆ‌ ಪ್ರಮಾಣ 25 ಎಂಎಂ ಆಗಿದೆ. ಇಂದಿನ ಜಲಾಶಯದ ನೀರಿನ ಮಟ್ಟ 74.34 ಅಡಿಯಾಗಿದೆ. ಕಬಿನಿ ಡ್ಯಾಂಗೆ 16,213 ಕ್ಯೂಸೆಕ್ ನೀರು ಒಳ ಹರಿವು ಇದ್ದು, ಕಬಿನಿ ಡ್ಯಾಂನಿಂದ 700 ಕ್ಯೂಸೆಕ್ ನೀರು ಹೊರ ಹರಿವು ಆಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಡ್ಯಾಂಕೆಆರ್‌ಎಸ್ ಡ್ಯಾಂ ಜಲಾಶಯದ ನೀರಿನ ಮಟ್ಟ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 89.16 ಅಡಿ ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಕೆಆರ್‌ಎಸ್ ಜಲಾಶಯಕ್ಕೆ ಒಳ ಹರಿವು 16,588 ಕ್ಯೂಸೆಕ್ ಜಲಾಶಯದಿಂದ 1,104 ಕ್ಯೂಸೆಕ್ ನೀರು ಹೊರ ಹರಿವು ನೀರಿನ ಸಂಗ್ರಹ 15.443 ಟಿಎಂಸಿ ಗರಿಷ್ಟ ಸಂಗ್ರಹ – 49.452 ಟಿಎಂಸಿ

ಇದನ್ನೂ ಓದಿ:

Rain Effect: ಮಲೆನಾಡಿನಲ್ಲೂ ಭಾರೀ ಮಳೆ; ಮಳೆಗಾಲದ ಆರಂಭಿಕ ಹಂತದಲ್ಲಿಯೇ ತತ್ತರಿಸಿದ ಜನತೆ

Rain Effect: ಮುಂಬೈ ಕರ್ನಾಟಕದಲ್ಲಿ ಭಾರೀ ಮಳೆ; ನದಿಗಳು ತುಂಬಿ ರಸ್ತೆ ಜಲಾವೃತ

Published On - 1:06 pm, Sat, 19 June 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು