ಕ್ರೀಡಾಂಗಣದ ಕನಸು ಕಂಡಿದ್ದ ಜನರಿಗೆ ಕಸ ವಿಲೇವಾರಿ ಘಟಕ ಶಾಕ್.. ಮೈಸೂರು ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ

ಒಂದು ಕಡೆ ಕಾಲೇಜು, ಮತ್ತೊಂದು ಕಡೆ ಬಡಾವಣೆ. ಮಧ್ಯದಲ್ಲಿ ಖಾಲಿ ಜಾಗ. ಆ ಖಾಲಿ ಜಾಗ ಕ್ರೀಡಾಂಗಣಕ್ಕೆ‌ ಮೀಸಲಾಗಿದ್ದ ಜಾಗ. ಇನ್ನೇನು ಕ್ರೀಡಾಂಗಣ ಬಂದೇ ಬಿಡ್ತು ಅನ್ನೋ ಸಮಯಕ್ಕೆ ಅಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ. ಇದು ಸ್ಥಳೀಯರ ತಲೆ ಬಿಸಿಗೆ ಕಾರಣವಾಗಿದೆ.

ಕ್ರೀಡಾಂಗಣದ ಕನಸು ಕಂಡಿದ್ದ ಜನರಿಗೆ ಕಸ ವಿಲೇವಾರಿ ಘಟಕ ಶಾಕ್.. ಮೈಸೂರು ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ
ಮೈಸೂರು ಮಹಾನಗರ ಪಾಲಿಕೆ
Follow us
|

Updated on: Feb 03, 2021 | 8:09 AM

ಮೈಸೂರು: ಬೇಕೇ ಬೇಕು ನ್ಯಾಯ ಬೇಕು. ಬೇಡ ಬೇಡ ಕಸ ವಿಲೇವಾರಿ ಘಟಕ‌ ಬೇಡ ಅನ್ನೋ ಷೋಷಣೆ ಕೂಗುತ್ತಾ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಮೈಸೂರು ಹೊರವಲಯದ ಸಾತಗಳ್ಳಿಯಲ್ಲಿರುವ ಖಾಲಿ ಮೈದಾನದಲ್ಲಿ ಕಸವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿರುವುದು.

ಹೌದು ಈ ಮೈದಾನವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ನೀಡಲಾಗಿತ್ತು. ಇಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣ ಮಾಡುವ ಸಿದ್ಧತೆ ನಡೆದಿತ್ತು. ಎಲ್ಲರೂ ಮೈಸೂರಿನ‌ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದ ಕನಸು ಕಾಣುತ್ತಿದ್ದರು. ಆದ್ರೆ ಇದ್ದಕ್ಕಿದ್ದಂತೆ ಈಗ ಈ ಪ್ಲ್ಯಾನ್ ಕೈ ಬಿಡಲಾಗಿದೆ. ಕೇವಲ ಮೈದಾನ‌ ನಿರ್ಮಾಣದ ಪ್ಲ್ಯಾನ್ ಕೈ ಬಿಟ್ಟಿದ್ದರೆ ಏನು ಆಗುತ್ತಿರಲಿಲ್ಲ. ಆದ್ರೆ ಈ ಜಾಗದಲ್ಲಿ ಮೈದಾನದ ಬದಲು ಕಸವಿಲೇವಾರಿ ಘಟಕ ನಿರ್ಮಾಣಕ್ಕೆ ವೇದಿಕೆ ಸಜ್ಜಾಗುತ್ತಿದೆ.

ಕ್ರೀಡಾಂಗಣ ಬಿಟ್ಟು ಕಸ ವಿಲೇವಾರಿ ಘಟಕ ಸ್ಥಾಪನೆ ಯೆಸ್‌, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ನೀಡಲಾಗಿದ್ದ ಜಾಗವನ್ನು ವಾಪಸ್ ಪಡೆದಿರುವ ಮೈಸೂರು ಮಹಾನಗರ ಪಾಲಿಕೆ ಇಲ್ಲಿ ಕಸವಿಲೇವಾರಿ ಘಟಕ ಸ್ಥಾಪನೆಗೆ ಮುಂದಾಗಿದೆ.‌ ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಸ್ಥಳೀಯರು ಇದರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಇನ್ನು ಈ ಜಾಗದ ಮುಂಭಾಗ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿದೆ ಅಕ್ಕ ಪಕ್ಕದಲ್ಲಿ ಮಾನಸಿ ಬಡಾವಣೆ ಪೊಲೀಸ್ ವಸತಿಗೃಹವಿದೆ. ಹೀಗಾಗಿ ಇದು ಕಸವಿಲೇವಾರಿ ಘಟಕ ಸ್ಥಾಪನೆಗೆ ಸೂಕ್ತ ಸ್ಥಳವಲ್ಲ ಅನ್ನೋದು ಸ್ಥಳೀಯರ ಆರೋಪ.

ಇದೇ ಕಾರಣಕ್ಕೆ ಇಲ್ಲಿನ ಜನ ಇದರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಇಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಾರೆ ಕ್ರೀಡಾಂಗಣದ ಕನಸು ಕಂಡಿದ್ದ ಜನರಿಗೆ ಕಸ ವಿಲೇವಾರಿ ಘಟಕ ಶಾಕ್ ನೀಡಿದ್ದು ಮಾತ್ರ ಸುಳ್ಳಲ್ಲ.

ಒಳಚರಂಡಿ ಸ್ವಚ್ಛತೆಗೆ ರೋಬಾಟ್ ಯಂತ್ರ ಬಳಕೆ: ಮೈಸೂರು ಪಾಲಿಕೆಯ ನೂತನ ಪ್ರಯತ್ನಕ್ಕೆ ಜೈ ಜೈ

ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್