AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗೋಹತ್ಯೆ ನಿಷೇಧ ಜಾರಿಗೆ ಮುಹೂರ್ತ ಫಿಕ್ಸ್​! ರಾಜ್ಯದಲ್ಲಿ ಗೋವಧೆಗೆ ಇರುವ ನಿಬಂಧನೆ-ವಿನಾಯಿತಿಗಳೇನು?

ಭಾರಿ ಚರ್ಚೆಗೆ ಕಾರಣವಾಗಿದ್ದ ಗೋಹತ್ಯೆ ನಿಷೇಧ ವಿಧೇಯಕ ನಿನ್ನೆ (ಡಿಸೆಂಬರ್ 9) ವಿಧಾನಸಭೆಯಲ್ಲಿ ಮಸೂದೆ ಅನುಮೋದನೆಗೊಂಡಿದೆ. ರಾಜ್ಯಪಾಲರ ಅನುಮತಿಯೊಂದಿಗೆ ಜಾರಿಯಾದ ಗೋ ಹತ್ಯೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಇಂದು ಗೋಹತ್ಯೆ ನಿಷೇಧ ಜಾರಿಗೆ ಮುಹೂರ್ತ ಫಿಕ್ಸ್​! ರಾಜ್ಯದಲ್ಲಿ ಗೋವಧೆಗೆ ಇರುವ ನಿಬಂಧನೆ-ವಿನಾಯಿತಿಗಳೇನು?
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on:Dec 10, 2020 | 2:24 PM

Share

ಬೆಂಗಳೂರು: ಹಿಂದೂ ಧರ್ಮದಲ್ಲಿ ಹಸುವನ್ನು ದೇವರೆಂದು ಪೂಜಿಸುತ್ತಾರೆ.  ಇದಕ್ಕನುಗುಣವಾಗಿ ಭಾರಿ ಚರ್ಚೆಗೆ ಕಾರಣವಾಗಿದ್ದ ಗೋಹತ್ಯೆ ನಿಷೇಧ ವಿಧೇಯಕ ನಿನ್ನೆ (ಡಿಸೆಂಬರ್ 9) ವಿಧಾನಸಭೆಯಲ್ಲಿ ಮಸೂದೆಯಾಗಿ ಅನುಮೋದನೆಗೊಂಡಿದೆ. ರಾಜ್ಯಪಾಲರ ಅಧಿಕೃತ ಒಪ್ಪಿಗೆಯ ನಂತರ ಗೋ ಹತ್ಯೆ ಕಾಯ್ದೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಮಸೂದೆಯ ಮುಖ್ಯ ಅಂಶಗಳು: ಗೋಹತ್ಯೆ ಮಾಡುವವರಿಗೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ಹಾಕುವ ಜೊತೆಗೆ 3ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಪಶು ವೈದ್ಯಾಧಿಕಾರಿಗಳು ಅನುಮತಿ ನೀಡಿದ ಬಳಿಕ ಯಾವುದೇ ರೋಗಗಳಿಂದ ಬಳಲುತ್ತಿರುವ ಗೋವುಗಳ ಹತ್ಯೆಗೆ ಅವಕಾಶವಿರುತ್ತದೆ.  ಗೋಹತ್ಯೆ ಅಪರಾಧ ಪುನರಾವರ್ತಿತವಾದರೆ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. ಯಾವೊಬ್ಬ ವ್ಯಕ್ತಿಯು ರಾಜ್ಯದೊಳಗಿನ ಯಾವುದೇ ಸ್ಥಳದಿಂದ ರಾಜ್ಯದ ಯಾವುದೇ ಇತರ ಸ್ಥಳಕ್ಕೆ ಗೋಹತ್ಯೆಗಾಗಿ ಹಸುವನ್ನು ಸಾಗಾಣೆ ಮಾಡಬಾರದು. ಜಾನುವಾರುಗಳನ್ನು ಮಾರಾಟ ಮಾಡಲು ಸಹಕರಿಸಿದ ವಾಹನಗಳು ಹಾಗು ಇತರ ವಸ್ತುಗಳನ್ನು ರಾಜ್ಯ ಸರ್ಕಾರಕ್ಕೆ ಮುಟ್ಟುಗೋಲು ಮಾಡಲಾಗುತ್ತದೆ. ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋ ಸಾಗಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯವಾಗಿದೆ.

ವಿನಾಯಿತಿಗಳು: ರಾಜ್ಯ ಸರ್ಕಾರದಿಂದ ಸ್ಥಾಪಿಸಿದ ಅಥವಾ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಲಸಿಕೆ ಸ್ರಾವ, ರಕ್ತ ಸ್ರಾವ ಜೊತೆಗೆ ಯಾವುದೇ ಪ್ರಾಯೋಗಿಕ ಉದ್ದೇಶದ ಮೇಲೆ ಜಾನುವಾರಗಳಿಗೆ ಶಸ್ತ್ರಚಿಕಿತ್ಸೆ ಮಾಡಬಹುದು. ಬಹು ಮುಖ್ಯವಾಗಿ ಜಾನುವಾರುಗಳು ವಾಸಿಯಾಗದ ಖಾಯಿಲೆಯಿಂದ ಬಳಲುತ್ತಿದ್ದರೆ ಅಂತಹ ಪ್ರಕರಣಗಳಲ್ಲಿ ಗೋಹತ್ಯೆಗೆ ಅವಕಾಶ ನೀಡಲಾಗುವುದು.

ಈಗಾಗಲೇ ಗೋಹತ್ಯೆ ನಿಷೇಧ ಇರುವ ರಾಜ್ಯಗಳು: ಭಾರತದಲ್ಲಿ ಉತ್ತರ ಪ್ರದೇಶವು ಗೋಹತ್ಯೆ ನಿಷೇಧಿಸಿರುವ ಏಕೈಕ ಮತ್ತು ಮೊದಲ ರಾಜ್ಯವಾಗಿದೆ.  ಒಟ್ಟು 24 ರಾಜ್ಯಗಳಲ್ಲಿ ಗೋ ಹತ್ಯೆಗೆ ಸಂಬಂಧಿಸಿ ಒಂದಷ್ಟು ಕಾನೂನು ಕಟ್ಟಣೆಗಳಿವೆ. ಇನ್ನು, ಗೋವಧೆಯ ಮೇಲೆ ಯಾವುದೇ ನಿರ್ಬಂಧಗಳಿಲ್ಲದ ರಾಜ್ಯಗಳೆಂದರೆ ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಆಗಿದೆ.

ಸರ್ಕಾರದ ಪ್ರಕಟಣೆ

Published On - 12:30 pm, Thu, 10 December 20

Follow Us
sandhya thejappa
sandhya thejappa
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?