AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಮೂಲ ವೃಂದಾವನ ದರ್ಶನಕ್ಕೆ ನಾಳೆಯಿಂದ ಭಕ್ತರಿಗೆ ನಿರ್ಬಂಧ

ಕೊರೊನಾ ಸೋಂಕಿಗೆ ತುತ್ತಾಗಿ ಮಂತ್ರಾಲಯ ಮಠದ ಆಪ್ತ ಕಾರ್ಯದರ್ಶಿ ಸುಯಮೇಂದ್ರಾಚಾರ್ಯರು ಮೃತಪಟ್ಟಿದ್ದಾರೆ. ಸುಯಮೇಂದ್ರಾಚಾರ್ಯರು 2009 ನೇ ಸಾಲಿನಲ್ಲಿ ಶ್ರಿಮಠದ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಪ್ರವಾಹದಲ್ಲಿ ನಲುಗಿ ಹೋಗಿದ್ದ ಮಂತ್ರಾಲಯದಲ್ಲಿ ಅಭಿವೃದ್ದಿ ಪರ್ವನೆ ನಡೆಸಿದ್ದರು. ಅವರು ನವ ಮಂತ್ರಾಲಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಮಂತ್ರಾಲಯ ಮೂಲ ವೃಂದಾವನ ದರ್ಶನಕ್ಕೆ ನಾಳೆಯಿಂದ ಭಕ್ತರಿಗೆ ನಿರ್ಬಂಧ
ಮಂತ್ರಾಲಯ
guruganesh bhat
|

Updated on:Apr 30, 2021 | 9:14 PM

Share

ರಾಯಚೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ನಾಳೆಯಿಂದ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಕ್ತಾದಿಗಳಿಗೆ ಕೇವಲ ಆನ್​ಲೈನ್ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ. ರಾಯಚೂರು ಜಿಲ್ಲೆ ಒಂದರಲ್ಲೇ ಇಂದು ಒಂದೇ ದಿನ 733 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 

ಕೊರೊನಾ ಸೋಂಕಿನಿಂದ ಮಂತ್ರಾಲಯ ಮಠದ ಆಪ್ತ ಕಾರ್ಯದರ್ಶಿ ಸುಯಮೇಂದ್ರಾಚಾರ್ಯರು ಮೃತಪಟ್ಟಿದ್ದಾರೆ. ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದು ಟಿವಿ9ಗೆ ಮಠದ ಮ್ಯಾನೇಜರ್ ವೆಂಕಟೇಶಾಚಾರ್ಯ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸುಯಮೇಂದ್ರಾಚಾರ್ಯರು 2009 ನೇ ಸಾಲಿನಲ್ಲಿ ಶ್ರೀ ಮಠದ ಆಪ್ತ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಪ್ರವಾಹದಲ್ಲಿ ನಲುಗಿಹೋಗಿದ್ದ ಮಂತ್ರಾಲಯದಲ್ಲಿ ಅಭಿವೃದ್ದಿ ಪರ್ವ ನಡೆಸಿದ್ದರು. ಅವರು ನವ ಮಂತ್ರಾಲಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಕರ್ನಾಟಕದಲ್ಲಿ ಇಂದು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದೊಂದೇ ಒಂದೇ ದಿನ ಕೊರೊನಾಗೆ 217 ಜನರು ಸಾವಿಗೀಡಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 26,756 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 93 ಜನರ ಬಲಿಯಾಗಿದ್ದಾರೆ.

ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟಾರೆ ಸಂಖ್ಯೆ 15,23,142ಕ್ಕೇರಿಕೆಯಾಗಿದೆ. ಸೋಂಕಿತರ ಪೈಕಿ 11,24,909 ಜನ ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟ 217 ಜನರನ್ನೂ ಸೇರಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 15,523 ಜನರ ಸಾವನ್ನಪ್ಪಿದ್ದಾರೆ. ಸದ್ಯ 38,2690 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

(Restrictions on devotees in Mantralaya from tomorrow Offer only online service)

Published On - 8:27 pm, Fri, 30 April 21

Follow Us
guruganesh bhat
guruganesh bhat
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?