‘ಗೆಲೋರ್​ ಆಫ್​ ಮಿಸ್ಟ್ರಿಸ್​’ ಕೃತಿ ಬಿಡುಗಡೆ ಮಾಡಿದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಗಡೆ

ಕುಮಾರಿ ಅಮನ ಜೆ.ಕುಮಾರ್ ಅವರ ‘ಗೆಲೋರ್​ ಆಫ್​ ಮಿಸ್ಟ್ರಿಸ್​’ (Galore of Mysteries) ಎಂಬ ನಾಲ್ಕನೆ ಪುಸ್ತಕವನ್ನು ನಿವೃತ್ತ ಸುಪ್ರೀಂ ಕೋರ್ಟ್​ ನ್ಯಾಯಾಧೀಶರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಗಡೆ ಅವರು ಶುಕ್ರವಾರ ಬಿಡುಗಡೆ ಮಾಡಿದರು.

‘ಗೆಲೋರ್​ ಆಫ್​ ಮಿಸ್ಟ್ರಿಸ್​’ ಕೃತಿ ಬಿಡುಗಡೆ ಮಾಡಿದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಗಡೆ
ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಗಡೆ, ಕುಮಾರಿ ಅಮನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 29, 2023 | 9:50 PM

ಬೆಂಗಳೂರು, ಡಿಸೆಂಬರ್​ 29: ಕುಮಾರಿ ಅಮನ ಜೆ.ಕುಮಾರ್ ಅವರ ‘ಗೆಲೋರ್​ ಆಫ್​ ಮಿಸ್ಟ್ರಿಸ್​’ (Galore of Mysteries) ಎಂಬ ನಾಲ್ಕನೆ ಪುಸ್ತಕವನ್ನು ನಿವೃತ್ತ ಸುಪ್ರೀಂ ಕೋರ್ಟ್​ ನ್ಯಾಯಾಧೀಶರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಗಡೆ ಅವರು ಶುಕ್ರವಾರ ಬಿಡುಗಡೆ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರವರ ಸಂದೇಶವು ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ಚಂದ್ರಯಾನ – 3ರ ಪ್ರಾಜೆಕ್ಟ್ ಡೈರೆಕ್ಟರ್​  ಡಾ. ಪಿ.ವೀರ ಮುತ್ತುವೇಲ್ ಅವರು​ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ.

ಡಾ. ಲತಾ ಟಿ.ಎಸ್, ಹಾಗೂ ಜೈವಂತ್ ಕುಮಾರ್ ಅವರ ಮಗಳು ಕುಮಾರಿ ಅಮನ ಅವರು ಈ ಪುಸ್ತಕವನ್ನು ಬರೆದಿದ್ದಾರೆ. ಇದು ಅವರ ನಾಲ್ಕನೇ ಹಾಗೂ ಮೊದಲ ಕಾಲ್ಪನಿಕ ಬರವಣಿಗೆ (fiction writing) ಪುಸ್ತಕವಾಗಿದೆ. ಅಮನ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್​ನಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಹಾರ್ವಡ್ ವಿಶ್ವ ವಿದ್ಯಾಲಯದಿಂದ “Masterpieces of World Literature” ಕೋರ್ಸ್ ಮಾಡಿದ್ದಾರೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್ ಆಯೋಜನೆ

ಅಮನರ ‘ಗೆಲೋರ್​ ಆಫ್​ ಮಿಸ್ಟ್ರಿಸ್​’ ಪುಸ್ತಕವು, ಕವನ ಹಾಗೂ ಕಿರು ಕಥೆಗಳ ಸಂಗ್ರಹವಾಗಿದ್ದು ರಹಸ್ಯಗಳ ಕೌತುಕವನ್ನು ಒಳಗೊಂಡಿರುತ್ತದೆ. ಇದು ಸಾಹಸಮಯವಾಗಿದ್ದು ಭಯಾನಕ ಹಾಗೂ ಹಾಸ್ಯದಿಂದ ಕೂಡಿದ್ದು, ಓದುಗರನ್ನು ಪ್ರತಿಪುಟದಲ್ಲಿಯೂ ಕಲ್ಪನೆಯ ಲೋಕಕ್ಕೆ ಕರೆದೊಯ್ಯುಲಿದೆ.

ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್​ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವಳ ಪ್ರಥಮ ಕವನ ‘ಇಕೋಸ್​ ಆಫ್​ ಸೋಲ್​ಫುಲ್​​ ಪೊಯಮ್ಸ್​’ (Echoes of Soulful Poems), ಎರಡನೇಯದು ‘ವಲ್ಡ್​​​ ಅಮಿಡಿಸ್ಟ್​ ದ ವರ್ಡ್​’ (World Amidst the Words) ಹಾಗೂ ‘ಲಫ್​ಝೊನ್​​ ಕಿ ಮುಹ್ಫಿಲ್​’ (Lafzon ki Mhfil) ಮೂರನೇ ಹಿಂದಿ ಕವನ ಸಂಕಲನವು ಈಗಾಗಲೇ ಅಮೇಜಾನ್, ಪ್ಲಿಪ್ ಕಾರ್ಟ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಲಭ್ಯವಿವೆ.

ಅಮನಳ ದಾಖಲೆಗಳು

  • ಭಾರತದ ಕಿರಿಯ ಕವಯಿತ್ರಿ ಇಂಡಿಯಾ ಬುಕ್ ಆಪ್ ರೆಕಾಡ್ಸ್ -2021.
  • ಏಷ್ಯಾ ಬುಕ್ ಆಪ್ ರೆಕಾಡ್ಸ್-2021 ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದು.
  • ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021 ಗೋವಾದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
  • ನೋಬಲ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್​ನಲ್ಲಿ ಕಿರಿಯ ಕವಯಿತ್ರಿ ದಾಖಲೆ
  • ವರ್ಲ್ಡ್ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022, ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಿಯಿತ್ರಿ
  • ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ 2022 ನಲ್ಲಿ ದಾಖಲೆ
  • ವಂಡರ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ ಕಿರಿಯ ಕವಯತ್ರಿ
  • ಇಂಟರ್ನ್ಯಾಷನಲ್ ಬುಕ್ಅಪ್ ರೆಕಾರ್ಡ್ಸ್ ಕಿರಿಯ ಕವಿಯತ್ರಿ

ಇಲ್ಲಿಯವರೆಗೂ ಅಮನ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 500 ಕ್ಕೂ ಹೆಚ್ಚು ಕವನಗಳನ್ನು ರಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:48 pm, Fri, 29 December 23

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು