ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್‌ ವಾಸ್ತವ್ಯ

ಹುಬ್ಬಳ್ಳಿ: ಕಂದಾಯ ಸಚಿವ ಆರ್​ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್​ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ‌ಅವರಿಗೆ ಸ್ವಾಗತ ‌ಮಾಡಿಕೊಳ್ಳಲು ಸಿದ್ದತೆ ನಡೆದಿದೆ. ಗ್ರಾಮ ವಾಸ್ತವ್ಯದಿಂದ ಗ್ರಾಮಸ್ಥರಿಗೆ ಎಲ್ಲಾ ಸೌಲಭ್ಯಗಳು […]

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್‌ ವಾಸ್ತವ್ಯ
ಸಾಧು ಶ್ರೀನಾಥ್​

Updated on: Mar 18, 2021 | 5:35 PM

ಹುಬ್ಬಳ್ಳಿ: ಕಂದಾಯ ಸಚಿವ ಆರ್​ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್​ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ:

ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ‌ಅವರಿಗೆ ಸ್ವಾಗತ ‌ಮಾಡಿಕೊಳ್ಳಲು ಸಿದ್ದತೆ ನಡೆದಿದೆ. ಗ್ರಾಮ ವಾಸ್ತವ್ಯದಿಂದ ಗ್ರಾಮಸ್ಥರಿಗೆ ಎಲ್ಲಾ ಸೌಲಭ್ಯಗಳು ಸಿಗಬೇಕು. ಗ್ರಾಮದ ಸಮಸ್ಯೆಗಳ ಬಗ್ಗೆ ಈಗಾಗಲೇ ದೂರುಗಳು ಬಂದಿವೆ. ಅವತ್ತಿನ ದಿನ ದೂರುಗಳ ಬಗ್ಗೆ ಸಂವಾದ ಆಗುತ್ತದೆ. ಸಂವಾದದಲ್ಲಿ ಸಮಸ್ಯೆಗಳ ಪರಿಹಾರ ಸಿಗುತ್ತದೆ. ಗ್ರಾಮದಲ್ಲಿ ಹೈಸ್ಕೂಲ್ ಸ್ಥಾಪನೆ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಹೀಗಾಗಿ ಛಬ್ಬಿ ಗ್ರಾಮವನ್ನ ಸಚಿವರೇ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.

Also Read : ಕಾಡು ಗ್ರಾಮದಲ್ಲಿ DC ಗ್ರಾಮವಾಸ್ತವ್ಯ, ಕುಂದುಕೊರತೆ ಬಿಚ್ಚಿಟ್ಟ ಗ್ರಾಮಸ್ಥರು

Published On - 5:25 pm, Thu, 18 March 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us