AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡದಿದ್ರೆ ಭಯ ಪಡುವ ಅಗತ್ಯವಿಲ್ಲ; ಹೆಚ್​ಡಿಕೆ ಟ್ವೀಟ್​ಗೆ ಆರ್.ಅಶೋಕ್ ಟಾಂಗ್​

ಬೆಂಗಳೂರು: ಕಾಂಗ್ರೆಸ್​ ಮತ್ತು ಜೆಡಿಎಸ್​ನ​ ಮೈತ್ರಿ ಸರ್ಕಾರದಲ್ಲಿ ನಡೆದ ಫೋನ್ ಕದ್ದಾಲಿಕೆ ಸಂಬಂಧ ರಾಜ್ಯದಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸ್ವಾಮೀಜಿಗಳು, ಪೊಲೀಸ್ ಅಧಿಕಾರಿಗಳು ಹಾಗು ರಾಜಕಾರಣಿಗಳ ಫೋನ್ ಕದ್ದಾಲಿಕೆ ಆಗಿದೆ ಎಂದು ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆದಿಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ ನಡೆದಿತ್ತು ಎಂಬ ಆರೋಪಕ್ಕೆ ನಿನ್ನೆಯಷ್ಟೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಶ್ರೀಗಳ ಫೋನ್ ಟ್ಯಾಪಿಂಗ್ ಸಂಬಂಧ ರಾಜಕೀಯ ನಾಯಕರ ಹೇಳಿಕೆ ಕೇಳಿ ನನ್ನ ಹೃದಯದಲ್ಲಿ ಸಹಿಸಲಾಗದಷ್ಟು ನೋವುಂಟು […]

ತಪ್ಪು ಮಾಡದಿದ್ರೆ ಭಯ ಪಡುವ ಅಗತ್ಯವಿಲ್ಲ; ಹೆಚ್​ಡಿಕೆ ಟ್ವೀಟ್​ಗೆ ಆರ್.ಅಶೋಕ್ ಟಾಂಗ್​
ಸಾಧು ಶ್ರೀನಾಥ್​
|

Updated on:Sep 30, 2019 | 2:34 PM

Share

ಬೆಂಗಳೂರು: ಕಾಂಗ್ರೆಸ್​ ಮತ್ತು ಜೆಡಿಎಸ್​ನ​ ಮೈತ್ರಿ ಸರ್ಕಾರದಲ್ಲಿ ನಡೆದ ಫೋನ್ ಕದ್ದಾಲಿಕೆ ಸಂಬಂಧ ರಾಜ್ಯದಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಸ್ವಾಮೀಜಿಗಳು, ಪೊಲೀಸ್ ಅಧಿಕಾರಿಗಳು ಹಾಗು ರಾಜಕಾರಣಿಗಳ ಫೋನ್ ಕದ್ದಾಲಿಕೆ ಆಗಿದೆ ಎಂದು ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಆದಿಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ ನಡೆದಿತ್ತು ಎಂಬ ಆರೋಪಕ್ಕೆ ನಿನ್ನೆಯಷ್ಟೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಶ್ರೀಗಳ ಫೋನ್ ಟ್ಯಾಪಿಂಗ್ ಸಂಬಂಧ ರಾಜಕೀಯ ನಾಯಕರ ಹೇಳಿಕೆ ಕೇಳಿ ನನ್ನ ಹೃದಯದಲ್ಲಿ ಸಹಿಸಲಾಗದಷ್ಟು ನೋವುಂಟು ಮಾಡಿದೆ. ಎಲ್ಲಕ್ಕೂ ಮಿಗಿಲಾಗಿ ಶ್ರೀಗಳಿಗಾದ ನೋವು ಹೆಚ್ಚಿಸಿದೆ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಆರ್​.ಅಶೋಕ್ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೆ ಏನು ಲಾಭವೋ ಗೊತ್ತಿಲ್ಲ. ಆದ್ರೆ, ಆರ್​.ಅಶೋಕ್ ಆತುರಕ್ಕೆ ಮರುಕವಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಹೆಚ್​ಡಿಕೆ ಬಗ್ಗೆ ನಾನು ಮಾತಾಡಿಲ್ಲ: ಹೆಚ್​ಡಿಕೆ ಟ್ವೀಟ್​ ಸಂಬಂಧ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್​.ಅಶೋಕ್, ಫೋನ್ ಕದ್ದಾಲಿಕೆ ಸಂಬಂಧ ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ನಾನು ಏನನ್ನೂ ಮಾತಾಡಿಲ್ಲ. ನಾನು ಈಗ ಸರ್ಕಾರದ ಭಾಗವಾಗಿದ್ದೇನೆ. ಫೋನ್ ಕದ್ದಾಲಿಕೆ ಬಗ್ಗೆ ಹೇಳಿದ್ದು ಸತ್ಯ. ಇದರಲ್ಲಿ ಮುಚ್ಚು ಮೊರೆ ಪ್ರಶ್ನೆ ಇಲ್ಲ. ಪ್ರಕರಣ ಸಂಬಂಧ ಸಿಬಿಐ ತನಿಖೆ ಆಗ್ತಿದೆ, ಸತ್ಯ ಹೊರಗೆ ಬರಲಿದೆ. ಅವರು ತಪ್ಪು ಮಾಡದೇ ಇದ್ದರೆ ಭಯ ಪಡೋ ಅಗತ್ಯ ಇಲ್ಲ ಎಂದರು.

ಫೋನ್ ಕದ್ದಾಲಿಕೆ ಅಕ್ಷಮ್ಯ ಅಪರಾಧ: ಯಾವ ಸರ್ಕಾರ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಿದೆಯೋ ಆ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ ಅಂತ ಹೇಳಿದ್ದೇನೆ. ಆದ್ರೆ ಇವರದ್ದೇ ಸರ್ಕಾರ ಮಾಡಿದೆ ಅಂತ ‌ನಾನು ಹೇಳಿಲ್ಲ. ತನಿಖೆಗೆ ಕೊಡುವ ಮುಂಚೆಯೇ ಈ ಬಗ್ಗೆ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು. ಫೋನ್ ಕದ್ದಾಲಿಕೆ ಆಗಿಲ್ಲ ಅಂದರೆ ನಾವು ಹೇಗೆ ತನಿಖೆಗೆ ಕೊಡೋಕೆ ಸಾಧ್ಯ? ಯಾವುದೇ ವ್ಯಕ್ತಿ, ಪಕ್ಷ ತಪ್ಪು ಮಾಡಿದರೂ ಅದು ಪಾಪದ ಕೆಲಸ ಎಂದಿದ್ದೇನೆ. ನಿರ್ಮಲಾನಂದ ಶ್ರೀಗಳು ನಮ್ಮ ಸಮುದಾಯದ ಸ್ವಾಮೀಜಿ. ಹೀಗಾಗಿ ಹೇಳಿದ್ದೇನೆ ಎಂದು ಸಚಿವ ಆರ್.ಅಶೋಕ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Published On - 2:33 pm, Mon, 30 September 19

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ