AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು. ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ […]

ಐಷಾರಾಮಿ ಜೀವನಕ್ಕಾಗಿ ಜೋಡಿ ಕೊಲೆ ಮಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 28, 2019 | 3:47 PM

Share

ಬೆಂಗಳೂರು: ಗರುಡಾಚಾರ್ ಪಾಳ್ಯದಲ್ಲಿ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಕ್ಯಾಬ್​ ಚಾಲಕನಾಗಿದ್ದ ಆರೋಪಿ ವೆಂಕಟೇಶ್(30) ಮತ್ತು ಆತನ ಪತ್ನಿ ಅರ್ಪಿತಾ(21) ಬಂಧಿತ ಆರೋಪಿಗಳು.

ಮದುವೆ ಮನೆಯಲ್ಲಿ ಭೇಟಿಯಾಗುತ್ತಿದ್ದ ಸಂಬಂಧಿಕರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಮಕ್ಕಳಿಲ್ಲದ ಶ್ರೀಮಂತ ದಂಪತಿಯನ್ನು ಪರಿಚಯ ಮಾಡಿಕೊಂಡು ಅವರ ಮನೆಗೆ ತೆರಳಿ ಸ್ನೇಹ ಸಂಪಾದಿಸುತ್ತಿದ್ದರು. ಅದೇ ರೀತಿ ಚಂದ್ರೇಗೌಡ ನಿವಾಸಕ್ಕೆ 2 ಬಾರಿ ಬಂದಿದ್ದರು. ಅ.17ರಂದು ಮನೆಗೆ ಬಂದಿದ್ದ ಆರೋಪಿಗಳು ಚಂದ್ರೇಗೌಡ, ಲಕ್ಷ್ಮಮ್ಮ ದಂಪತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಬಂಧಿತ ವೆಂಕಟೇಶ್ ಮತ್ತು ಅರ್ಪಿತಾ ದಂಪತಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದವರಾಗಿದ್ದಾರೆ. ಇವರು ಸ್ವಂತ ಕಾರುಕೊಳ್ಳಲು ಮತ್ತು ಮಾಡಿದ್ದ ಸಾಲ ತೀರಿಸಲು ಹತ್ಯೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ 5ಲಕ್ಷ ಮೌಲ್ಯದ 305 ಗ್ರಾಂ ಚಿನ್ನಾಭರಣವನ್ನು ಮಹದೇವಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

ರಾಯಸಮುದ್ರ ಜೋಡಿ ಕೊಲೆ ಪ್ರಕರಣ: ಈಗಾಗಲೇ ಆರೋಪಿಗಳ ಬಂಧನ ರಾಯಸಮುದ್ರ ಜೋಡಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಮಹದೇವಪುರ ಪೋಲಿಸರು ಬಂಧಿಸಿದ್ದಾರೆಂಬ ಮಾಹಿತಿ ಇದೆ. ಈ ಬಗ್ಗೆ ಇನ್ನು ಖಚಿತವಾಗಿಲ್ಲ ಎಂದು ಮಂಡ್ಯ ಎಸ್​ಪಿ ಪರಶುರಾಮ್ ಹೇಳಿದ್ದಾರೆ.

Published On - 3:46 pm, Mon, 28 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?