AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ವಿಧಾನಪರಿಷತ್ ಸದಸ್ಯರಿಗೂ ತಟ್ಟಲಿದೆ ತನಿಖೆ ಬಿಸಿ

ವಿಧಾನಪರಿಷತ್ ಕಲಾಪದ ಸಮಗ್ರ ಮಾಹಿತಿ ಕೋರಿ ಪರಿಷತ್ ಕಾರ್ಯದರ್ಶಿಗೆ ರೈಲ್ವೆ ಪೊಲೀಸರು ಪತ್ರ ಬರೆದಿದ್ದಾರೆ. ಪರಿಷತ್ ಕಾರ್ಯದರ್ಶಿ ಮಾಹಿತಿ ಆಧರಿಸಿ ಮುಂದಿನ ತನಿಖೆ ನಡೆಸಲಾಗುತ್ತೆ. 2020ರ ಡಿ.28ರಂದು ಧರ್ಮೇಗೌಡರವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್​ನಲ್ಲಿ ಕಲಾಪದ ಗಲಾಟೆ ಬಗ್ಗೆ ಬರೆದಿದ್ದಾರೆ...

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ವಿಧಾನಪರಿಷತ್ ಸದಸ್ಯರಿಗೂ ತಟ್ಟಲಿದೆ ತನಿಖೆ ಬಿಸಿ
ವಿಧಾನ ಪರಿಷತ್
ಆಯೇಷಾ ಬಾನು
|

Updated on: Jan 28, 2021 | 8:04 AM

Share

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆ ಕೇಸ್​ಗೆ ಸಂಬಂಧಿಸಿ ಪರಿಷತ್‌ ಸದಸ್ಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. 2020 ರ ಡಿಸೆಂಬರ್ 8 ರಂದು ಪರಿಷತ್​ನಲ್ಲಿ ನಡೆದಿದ್ದ ಗಲಾಟೆ ಬಗ್ಗೆ S.L.ಧರ್ಮೇಗೌಡ ತಮ್ಮ ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ರೈಲ್ವೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಮುಂದಾಗಿದ್ದಾರೆ.

ವಿಧಾನಪರಿಷತ್ ಕಲಾಪದ ಸಮಗ್ರ ಮಾಹಿತಿ ಕೋರಿ ಪರಿಷತ್ ಕಾರ್ಯದರ್ಶಿಗೆ ರೈಲ್ವೆ ಪೊಲೀಸರು ಪತ್ರ ಬರೆದಿದ್ದಾರೆ. ಪರಿಷತ್ ಕಾರ್ಯದರ್ಶಿ ಮಾಹಿತಿ ಆಧರಿಸಿ ಮುಂದಿನ ತನಿಖೆ ನಡೆಸಲಾಗುತ್ತೆ. 2020ರ ಡಿ.28ರಂದು ಧರ್ಮೇಗೌಡರವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್​ನಲ್ಲಿ ಕಲಾಪದ ಗಲಾಟೆ ಬಗ್ಗೆ ಬರೆದಿದ್ದಾರೆ. ಹೀಗಾಗಿ ಡೆತ್‌ನೋಟ್‌ನಲ್ಲಿನ ಅಂಶ ಆಧರಿಸಿ ತನಿಖೆ ನಡೆಸಲಾಗುತ್ತಿದೆ.

ಜೊತೆಗೆ ಸಾರ್ವಜನಿಕ ವಲಯದ ಟೀಕೆಯಿಂದ ನೊಂದ ಬಗ್ಗೆ ಉಲ್ಲೇಖಿಸಿದ್ದಾರೆ. ಹಾಗೂ ಕೌಟುಂಬಿಕ ವಿಚಾರದ ಬಗ್ಗೆಯೂ ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಇದೆ. ಈ ಸಂಬಂಧ S.L.ಧರ್ಮೇಗೌಡ ಪತ್ನಿ, ಮಕ್ಕಳು, ಸ್ನೇಹಿತರು, ಸಂಬಂಧಿಕರನ್ನು ರೈಲ್ವೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ 120 ಎಕರೆ ಜಮೀನು, ಬೆಂಗಳೂರಿನ ಮನೆ, ಮಕ್ಕಳಿಗೆ ಸಿಗಬೇಕಾದ ಆಸ್ತಿಯ ಬಗ್ಗೆಯೂ ಧರ್ಮೇಗೌಡರವರು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿರುವ ಮಾಹಿತಿ ಸಿಕ್ಕಿದೆ. ತಮ್ಮ ಕುಟುಂಬದ ಜವಾಬ್ದಾರಿಯನ್ನ ಎಸ್‌.ಆರ್.ಭೋಜೇಗೌಡ ನೋಡಿಕೊಳ್ಳುವಂತೆ ಕೋರಿಕೊಂಡಿದ್ದಾರಂತೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್