AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ

ಚೋಳನಾಯಕನಲ್ಲಿಹಳಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿತ್ತು. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದಿತ್ತು.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ
ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು
sandhya thejappa
|

Updated on:May 30, 2021 | 1:36 PM

Share

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ್ದಾರೆ. ಈ ಘಟನೆ ಬೆಂಗಳೂರಿನ ಚೋಳನಾಯಕನಹಳ್ಳಿಯಲ್ಲಿ ನಡೆದಿದೆ. ಸಚಿವ ಡಿ.ವಿ.ಸದಾನಂದಗೌಡರ ಜೊತೆಗೆ ಎಂಎಲ್​ಸಿ ನಾರಾಯಣಸ್ವಾಮಿಗೂ ಮುತ್ತಿಗೆ ಹಾಕಿದ್ದಾರೆ.

ಚೋಳನಾಯಕನಹಳ್ಳಿಯಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದ ಹಿನ್ನೆಲೆ ಸದಾನಂದಗೌಡ, ನಾರಾಯಣಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಬಿಬಿಎಂಪಿಯಿಂದ ಆಸ್ಪತ್ರೆಗೆ ಯಾವುದೇ ಹಣ ಬಂದಿಲ್ಲ. ಭೈರತಿ ಸುರೇಶ್ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಿಸಿದ್ದಾರೆ. ಹೀಗಾಗಿ ರಾಜೀವ್ ಗಾಂಧಿ ಫೋಟೋ ಅಳವಡಿಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸ್ಥಳಕ್ಕೆ ಬಂದ ಸದಾನಂದಗೌಡ ವಿರುದ್ಧ ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಡಿ.ವಿ.ಸದಾನಂದಗೌಡ ಗೌರವ್ ಗುಪ್ತಾಗೆ ಕರೆ ಮಾಡಿದ್ದರು. ಹೀಗಾಗಿ ಕಾರ್ಯಕರ್ತರು ಮತ್ತಷ್ಟು ಆಕ್ರೋಶ ಹೊರಹಾಕಿದರು. ಬಿಬಿಎಂಪಿ ಆಸ್ಪತ್ರೆಗಾಗಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಕೇವಲ 30 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದೆ. ಕೇವಲ ಘೋಷಣೆ ಮಾಡಿ ಸುಮ್ಮನಾಗಿದೆ ಎಂದು ಕಿಡಿ ಕಾರಿದ್ದಾರೆ.

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಎಲ್​ಕೆಜಿಯಿಂದ ಇಂಜಿನಿಯರಿಂಗ್​ವರೆಗೂ ಉಚಿತ ಶಿಕ್ಷಣ: ಶ್ರೀ ಸಿದ್ಧರಾಮ ಸ್ವಾಮೀಜಿ

ಮಕ್ಕಳ ಮೇಲೂ ಲಸಿಕೆಯ ಪ್ರಯೋಗ ನಡೆಯುತ್ತಿದೆ, ಎಲ್ಲರಿಗೂ ಲಸಿಕೆ ಸಿಗುವವರೆಗೂ ಮಾಸ್ಕ್ ಕಡ್ಡಾಯ; ಸಚಿವ ಡಾ.ಕೆ.ಸುಧಾಕರ್ ಮನವಿ

(Riots between BJP and Congress activists and Congress workers have besieged Sadananda Gowda in Bengaluru)

Published On - 1:30 pm, Sun, 30 May 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್