AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ

ಚೋಳನಾಯಕನಲ್ಲಿಹಳಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿತ್ತು. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದಿತ್ತು.

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ
ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು
Follow us
sandhya thejappa
|

Updated on:May 30, 2021 | 1:36 PM

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಮುತ್ತಿಗೆ ಹಾಕಿದ್ದಾರೆ. ಈ ಘಟನೆ ಬೆಂಗಳೂರಿನ ಚೋಳನಾಯಕನಹಳ್ಳಿಯಲ್ಲಿ ನಡೆದಿದೆ. ಸಚಿವ ಡಿ.ವಿ.ಸದಾನಂದಗೌಡರ ಜೊತೆಗೆ ಎಂಎಲ್​ಸಿ ನಾರಾಯಣಸ್ವಾಮಿಗೂ ಮುತ್ತಿಗೆ ಹಾಕಿದ್ದಾರೆ.

ಚೋಳನಾಯಕನಹಳ್ಳಿಯಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಭೈರತಿ ಸುರೇಶ್ 70 ಲಕ್ಷ ರೂ. ಮತ್ತು ಬಿಬಿಎಂಪಿ 30 ಲಕ್ಷ ರೂ. ನೀಡಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿ ರಾಜೀವ್ ಗಾಂಧಿ ಫೋಟೋ ಅಳವಡಿಕೆಯ ಬಗ್ಗೆ ದೂರು ಬಂದ ಹಿನ್ನೆಲೆ ಸದಾನಂದಗೌಡ, ನಾರಾಯಣಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಬಿಬಿಎಂಪಿಯಿಂದ ಆಸ್ಪತ್ರೆಗೆ ಯಾವುದೇ ಹಣ ಬಂದಿಲ್ಲ. ಭೈರತಿ ಸುರೇಶ್ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಿಸಿದ್ದಾರೆ. ಹೀಗಾಗಿ ರಾಜೀವ್ ಗಾಂಧಿ ಫೋಟೋ ಅಳವಡಿಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸ್ಥಳಕ್ಕೆ ಬಂದ ಸದಾನಂದಗೌಡ ವಿರುದ್ಧ ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಡಿ.ವಿ.ಸದಾನಂದಗೌಡ ಗೌರವ್ ಗುಪ್ತಾಗೆ ಕರೆ ಮಾಡಿದ್ದರು. ಹೀಗಾಗಿ ಕಾರ್ಯಕರ್ತರು ಮತ್ತಷ್ಟು ಆಕ್ರೋಶ ಹೊರಹಾಕಿದರು. ಬಿಬಿಎಂಪಿ ಆಸ್ಪತ್ರೆಗಾಗಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಕೇವಲ 30 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದೆ. ಕೇವಲ ಘೋಷಣೆ ಮಾಡಿ ಸುಮ್ಮನಾಗಿದೆ ಎಂದು ಕಿಡಿ ಕಾರಿದ್ದಾರೆ.

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಎಲ್​ಕೆಜಿಯಿಂದ ಇಂಜಿನಿಯರಿಂಗ್​ವರೆಗೂ ಉಚಿತ ಶಿಕ್ಷಣ: ಶ್ರೀ ಸಿದ್ಧರಾಮ ಸ್ವಾಮೀಜಿ

ಮಕ್ಕಳ ಮೇಲೂ ಲಸಿಕೆಯ ಪ್ರಯೋಗ ನಡೆಯುತ್ತಿದೆ, ಎಲ್ಲರಿಗೂ ಲಸಿಕೆ ಸಿಗುವವರೆಗೂ ಮಾಸ್ಕ್ ಕಡ್ಡಾಯ; ಸಚಿವ ಡಾ.ಕೆ.ಸುಧಾಕರ್ ಮನವಿ

(Riots between BJP and Congress activists and Congress workers have besieged Sadananda Gowda in Bengaluru)

Published On - 1:30 pm, Sun, 30 May 21

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!