ಬಾಗಲಕೋಟೆ: ಬಸ್​ಗೆ ಡಿಕ್ಕಿ ಹೊಡೆದ ಬೈಕ್​: ಸವಾರ ಸ್ಥಳದಲ್ಲೇ ಸಾವು

ಚಂದ್ರಕಾಂತ ಗೋಂದಳೆ(50)ಮೃತ ಬೈಕ್ ಸವಾರ. ಮೃತ ವ್ಯಕ್ತಿ ಬಬಲೇಶ್ವರ ಪಟ್ಟಣದ ನಿವಾಸಿಯಾಗಿದ್ದಾನೆ. ಅಂದಹಾಗೆ, ಈತನ ಮೇಲೆ ಹರಿದು ಹೋದ ವಾಹನ ಯಾವುದು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ.

ಬಾಗಲಕೋಟೆ: ಬಸ್​ಗೆ ಡಿಕ್ಕಿ ಹೊಡೆದ ಬೈಕ್​: ಸವಾರ ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ

Updated on: Dec 26, 2020 | 7:04 PM

ಬಾಗಲಕೋಟೆ: ಬಸ್​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್​ ಸವಾರನ ಮೇಲೆ ಅಪರಿಚಿತ ವಾಹನ ಹರಿದಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂನ ಬಾಡಗಂಡಿ ಬಳಿ ಹಾದು ಹೋದ ವಿಜಯಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬಸ್​ ಬಾಗಲಕೋಟೆಯಿಂದ ವಿಜಯಪುರಕ್ಕೆ ಹೊರಟಿತ್ತು. ಬಬಲೇಶ್ವರದಿಂದ ಬೀಳಗಿ ಮಾರ್ಗವಾಗಿ ಬೈಕ್ ಸವಾರ ಬರುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದೆ.

ಚಂದ್ರಕಾಂತ ಗೋಂದಳೆ(50)ಮೃತ ಬೈಕ್ ಸವಾರ. ಮೃತ ವ್ಯಕ್ತಿ ಬಬಲೇಶ್ವರ ಪಟ್ಟಣದ ನಿವಾಸಿಯಾಗಿದ್ದಾನೆ. ಅಂದಹಾಗೆ, ಈತನ ಮೇಲೆ ಹರಿದು ಹೋದ ವಾಹನ ಯಾವುದು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ: ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us