Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ

ಟಿಪ್ಪರ ಡಿಕ್ಕಿಯಾಗಿ‌ ಕಟ್ಟಡ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ವಿಜಯದಶಮಿ ದಿನವೇ ಘೋರ ಅಪಘಾತ ಸಂಭವಿಸಿದೆ. ಟಿಪ್ಪರ ಡಿಕ್ಕಿ ರಭಸಕ್ಕೆ ಯುವಕನ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿ ಆಗಿವೆ. ರಸ್ತೆಯಲ್ಲಿ ಬಿದ್ದರೂ ಹೃದಯ ಬಡಿದುಕೊಳ್ಳುತ್ತಿತ್ತು.

ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2024 | 9:28 PM

ಧಾರವಾಡ, ಅಕ್ಟೋಬರ್​ 12: ವಿಜಯದಶಮಿ ದಿನವೇ ಹುಬ್ಬಳ್ಳಿಯಲ್ಲಿ ಘೋರ ಅಪಘಾತವೊಂದು (accident) ಸಂಭವಿಸಿದೆ. ಯುವಕ ರಸ್ತೆ ದಾಟುತ್ತಿರುವಾ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಸುಭಾಷ್ ಗುಂಡಪ್ಪನವರ (25) ಮೃತ ಕಾರ್ಮಿಕ. ಟಿಪ್ಪರ ಡಿಕ್ಕಿ ಹೊಡೆದ ರಭಸಕ್ಕೆ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿದ್ದು, ರಸ್ತೆಯಲ್ಲಿ ಬಿದ್ದರೂ ಸುಭಾಸ್ ಹೃದಯ ಬಡಿದುಕೊಳ್ಳುತ್ತಿತ್ತು.

ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಸುಭಾಷ್ ಮೂಲತಃ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಸುಳೀಕಟ್ಟಿ ನಿವಾಸಿ. ಸುಳಿಕಟ್ಟಿಯಿಂದ ಕಲಘಟಗಿಗೆ ಬಂದಾಗ ಘೋರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಆಪ್ತ ಸ್ನೇಹಿತನ ಕೊಲೆ; ಆರೋಪಿಗಳ ಕಾಲಿಗೆ ಗುಂಡೇಟು

ಅಪಘಾತ ವಿಡಿಯೋ ನೋಡಿದರೆ ಒಂದು ಕ್ಷಣ ಎದೆ ಬಡಿತ ನಿಲ್ಲೋದು ಗ್ಯಾರಂಟಿ. ರಸ್ತೆಯಲ್ಲಿ ಬಿದ್ದ ಹೃದಯ ಬಿಡಿತದ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ‌ ಹಿಡಿದಿದ್ದಾರೆ.

ಚಾಲಕನ ನಿಯತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: 8 ಮಕ್ಕಳು ಓರ್ವ ವ್ಯಕ್ತಿ ಸೇರಿ ಒಂಬತ್ತು ಜನರಿಗೆ ಗಾಯ

ಕೊಪ್ಪಳ: ಕಾರಟಗಿ ತಾಲೂಕಿನ ಪಟ್ಟಣದೇವಿ ಕ್ಯಾಂಪ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, 8 ಮಕ್ಕಳು ಮತ್ತು ಓರ್ವ ವ್ಯಕ್ತಿ ಸೇರಿ 9 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಪ್ರೇಯಸಿ ಪ್ರೀತಿಸಿ ಕೈಕೊಟ್ಟಳು ಅಂತ ಆಕೆಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ದರ್ಶನ್​!

ದಸರಾ ಹಬ್ಬದ ಹಿನ್ನೆಲೆ ದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಟ್ರ್ಯಾಕ್ಟರ್​ ಪಲ್ಟಿ ಆಗಿದೆ. ಗಾಯಾಳುಗಳು ರಾಯಚೂರು ಜಿಲ್ಲೆಯ ಸಿಂಧನೂರಿನ ಜಂಬುನಾಥಹಳ್ಳಿಯವರು. 9 ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತಿದೆ. ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು 

ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶವಾಗಿ ಲೈನ್ ಮ್ಯಾನ್ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆಯಲ್ಲಿ ನಡೆದಿದೆ. 32 ವರ್ಷದ ಮುತ್ತುರಾಜ್ ಸಾವನ್ನಪ್ಪಿದ್ದ ದುರ್ದೈವಿ. ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿತ್ತು. ಎಲ್​ಸಿ ತೆಗೆದುಕೊಂಡಿದ್ದರು ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂದು ಗ್ರಾಮಸ್ಥರಿಂದ ಗಲಾಟೆ ಮಾಡಲಾಗಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್